Just In
- 59 min ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 13 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 14 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಬ್ಯುಲೆನ್ಸ್ ಒಳಗಿದ್ದ ಪ್ರಾಣವನ್ನು ಉಳಿಸಲು ಈ ಪೊಲೀಸ್ ಮಾಡಿದ ಕೆಲಸ ಏನು ಗೊತ್ತಾ.?
ಭಾರತೀಯ ರಸ್ತೆಗಳಲ್ಲಿ ಟ್ರಾಫಿಕ್ ಬಗ್ಗೆ ಎಷ್ಟು ಹೇಳಿದ್ರು ಸಾಕಾಗದು. ಯಾಕಂದ್ರೆ ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗಲು ಮನೆ ಬಿಟ್ರೆ ಎಷ್ಟು ಹೊತ್ತಿಗೆ ಹೋಗಿ ಆಫಿಸ್ ತಲುಪುತ್ತೇವೋ ಎಂದು ಯಾರಿಗೂ ತಿಳಿಯುದಿಲ್ಲ. ಅದರಲ್ಲಿಯೂ ನಮ್ಮ ಬೆಂಗಳೂರಿನಲ್ಲಿರುವ ಸಿಲ್ಕ್ ಬೋರ್ಡ್ ಜಂಕ್ಷನ್, ಕೆಆರ್ ಪುರಂ ಮತ್ತು ಇನ್ನಿತರೆ ಏರಿಯಾದಲ್ಲಿರುವ ಟ್ರಾಫಿಕ್ ಸಮಸ್ಯೆಯ ಬಗ್ಗೆ ಆ ಮಾರ್ಗದಲ್ಲಿ ಪ್ರಯಾಣಿಸುವವರಿಗೆ ಮಾತ್ರ ಗೊತ್ತು.
ಆದರೆ ಇಂತಹ ಟ್ರಾಫಿಕ್ ಸಮಸ್ಯೆಯಲ್ಲಿ ಆಂಬ್ಯುಲೆನ್ಸ್ ಬಂದರೆ ಅಷ್ಟೆ. ಅದನ್ನು ಮುಂದೆ ಕಳುಹಿಸಲು ಟ್ರಾಫಿಕ್ ಪೊಲೀಸರು ಮತ್ತು ವಾಹನ ಚಾಲಕರು ಪಡುವ ಹರಸಾಹಸ ಅಷ್ಟಿಷ್ಟಲ್ಲ. ಇಂದು ನಾವು ಹೇಳಲು ಹೊರಟಿರುವ ಘಟನೆ ಕೂಡಾ ಇಂತದ್ದೆ. ಕೇರಳದಲ್ಲಿನ ಪೊಲೀಸ್ ಅಧಿಕಾರಿಯೊಬ್ಬ ಟ್ರಾಫಿಕ್ನಿಂದ ತುಂಬಿರುವ ರಸ್ತೆಯಲ್ಲಿ ಆಂಬ್ಯುಲೆನ್ಸ್ ಅನ್ನು ಮುಂದೆ ಕಳುಹಿಸಲು ಪಟ್ಟ ಶ್ರಮ ಅಷ್ಟಿಷ್ಟಲ್ಲ.
ಕೇವಲ ಆಂಬ್ಯುಲೆನ್ಸ್ ಮಾತ್ರವಲ್ಲದೇ ನೂರಕ್ಕು ಹೆಚ್ಚು ವಾಹನಗಳು ತುಂಬಿಕೊಂದಿರುವ ಬಹುತೇಕ ರಸ್ತೆಗಳಲ್ಲಿ ಅಗ್ನಿ ಶಾಮಕ ವಾಹನವು ಸಹ ಮುನ್ನುಗ್ಗಲು ಅಷ್ಟೆ ಕಷ್ಟಪಡಬೇಕು. ಆದ್ರೆ ಕೇರಳದ ಈ ಪೊಲೀಸ್ ಪೇದೆ ವಾಹನಗಳಿಂದ ತುಂಬಿದ ರಸ್ತೆಯಲ್ಲಿ ಬಂದ ಆಂಬ್ಯುಲೆನ್ಸ್ ಅನ್ನು ಹೇಗೆ ಮುಂದು ಹೋಗಲು ದಾರಿ ಮಾಡಿಸಿಕೊಟ್ಟಿದ್ದಾರೆ ಗೊತ್ತಾ.?
ಕೇರಳದ ಕೊಟ್ಟಾಯಂನಲ್ಲಿ ಈ ಘಟನೆ ನಡೆದಿದ್ದು, ಆಂಬ್ಯುಲೆನ್ಸ್ ಒಂದು ದೊಡ್ಡ ಬಸ್ಗಳು ಮತ್ತು ಕಾರುಗಳಿಂದ ತುಂಬಿರುವ ರಸ್ತೆಯಲ್ಲಿ ಮುನ್ನುಗ್ಗಲು ಹರಸಾಹಸ ಪಡುತ್ತಿರುವಾಗ ಸಹಾಯಕ್ಕೆ ಬಂದ ಪೊಲೀಸ್ ಪೇದೆ ಟ್ರಾಫಿಕ್ ಅನ್ನು ಕ್ಲಿಯರ್ ಮಾಡಲು ಮುಂದಾದರು.
ಈ ವಿಡಿಯೋವನ್ನು ಆಂಬ್ಯುಲೆನ್ಸ್ ನಲ್ಲಿನ ಡ್ಯಾಶ್ಬೋರ್ಡ್ನಲ್ಲಿನ ಕ್ಯಾಮೆರಾದಿಂದ ರೆಕಾರ್ಡ್ ಮಾಡಲಾಗಿದ್ದು, ಆಂಬ್ಯುಲೆನ್ಸ್ ಮುಂದೆ ಸಾಗಲು ಅಡ್ಡವಾಗಿದ್ದ ವಾಹನಗಳನ್ನು ಬಹುಬೇಗ ಪಕ್ಕಕ್ಕೆ ಸರಿಯುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಾಹಸವನ್ನು ಮಾಡಲು ಮುಂದಾದ ಪೊಲೀಸನ್ನು ರಜೀತ್ ಕುಮಾರ್ ರಾಧಾಕೃಷ್ಣ ಎಂದು ಗುರುತಿಸಲಾಗಿದ್ದು, ಟ್ರಾಫಿಕ್ ನಿಂದ ತುಂಬಿರುವ ರಸ್ತೆಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕೇವಲ ಆ ಪೊಲೀಸ್ ಮಾತ್ರವಲ್ಲದೇ ಆಂಬ್ಯುಲೆನ್ಸ್ ಚಾಲಕನು ಕೂಡಾ ಅಷ್ಟೆ ಸುರಕ್ಷಿತವಾಗಿ ಆ ಕಿರಿದಾದ ರಸ್ತೆಯಲ್ಲಿ ಡ್ರೈವ್ ಮಾಡಿಕೊಂಡು ಹೋಗಿದ್ದಾರೆ. ಆಂಬ್ಯುಲೆನ್ಸ್ ನಲ್ಲಿದ್ದ ಜೀವವನ್ನು ರಕ್ಷಿಸಲು ಮಾಡಿದ ಆ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಚಾಲಕನ ರೈಡಿಂಗ್ ಕೌಶಲ್ಯದ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.