Just In
- 12 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 13 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 14 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 15 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Movies Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕಕ್ಕೆ ನುಗ್ಗಿದ ಚಿರತೆ..!!
ರಾಜಧಾನಿ ದೆಹಲಿ ಬಳಿ ಇರುವ ಮಾರುತಿ ಸುಜುಕಿ ಮನೆಸರ್ ಕಾರು ಉತ್ಪಾದನಾ ಘಟಕಕ್ಕೆ ಚಿರತೆಯೊಂದು ನುಗ್ಗಿರುವ ಘಟನೆ ನಡೆದಿದೆ. ಸದ್ಯ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ರಾಜಧಾನಿ ದೆಹಲಿ ಬಳಿ ಇರುವ ಮಾರುತಿ ಸುಜುಕಿ ಮನೆಸರ್ ಕಾರು ಉತ್ಪಾದನಾ ಘಟಕಕ್ಕೆ ಚಿರತೆಯೊಂದು ನುಗ್ಗಿರುವ ಘಟನೆ ನಡೆದಿದೆ. ಸದ್ಯ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ನಿನ್ನೆ ಸಾಯಂಕಾಲ 7 ಗಂಟೆಗೆ ಹೊತ್ತಿಗೆ ನಾಲ್ಕು ವರ್ಷದ ಚಿರತೆಯೊಂದು ಮನೆಸರ್ ಉತ್ಪಾದನಾ ಘಟಕದ ಹಿಂಬದಿ ಪ್ರವೇಶ ದ್ವಾರದ ಮೂಲಕ ಒಳ ನುಗ್ಗಿದ್ದು, ಭದ್ರತಾ ಸಿಬ್ಬಂದಿಯ ಮುಂಜಾಗ್ರತಾ ಕ್ರಮದಿಂದಾಗಿ ಎಲ್ಲ ಕಾರ್ಮಿಕರನ್ನು ತಕ್ಷಣವೇ ಹೊರ ಕಳುಹಿಸಿಲಾಗಿದೆ.
ಆದ್ರೆ ಮಾರುತಿ ಸುಜುಕಿ ಮನೆಸರ್ ಕಾರು ಉತ್ಪಾದನಾ ಘಟಕವು ಬರೋಬ್ಬರಿ 600 ಎಕರೆಯಷ್ಟು ವಿಸ್ತಾರವಾಗಿರುವ ಹಿನ್ನೆಲೆ ಚಿರತೆ ಪತ್ತೆ ಹಚ್ಚಲು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಮಾರುತಿ ಸುಜುಕಿ ಭದ್ರತಾ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.
Recommended Video
ಸದ್ಯ ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಇಂಜಿನಿಯರಿಂಗ್ ವಿಭಾಗದಲ್ಲಿ ಚಿರತೆ ಅಡುಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದ್ದು, ಚಿರತೆ ಹಿಡಿಯಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಇನ್ನು ಮನೆಸರ್ ಕಾರು ಉತ್ಪಾದನಾ ಘಟಕವು ಅರಾವಳಿ ಪರ್ವತ ಶ್ರೇಣಿಗೆ ಹತ್ತಿರದಲ್ಲೇ ಇದ್ದು, ಆಹಾರ ಅರಸಿ ಕಾರು ಉತ್ಪಾದನಾ ಘಟಕಕ್ಕೆ ನುಗ್ಗಿದೆ ಎನ್ನಲಾಗಿದೆ.
ಕಾರು ಉತ್ಪಾದನಾ ಘಟಕಕ್ಕೆ ಚಿರತೆ ನುಗ್ಗಿದ ಪರಿಣಾಮ ಮನೆಸರ್ ಉತ್ಪಾದನಾ ಘಟಕ ನಿನ್ನೆಯಿಂದಲೇ ಸಂಪೂರ್ಣ ಸ್ಥಗಿತಗೊಂಡಿದ್ದು, ಮನೆಸರ್ ಸುತ್ತಮತ್ತಲಿನ ಜನತೆ ಕೂಡಾ ಭಯದಲ್ಲೇ ಬದುಕುವಂತಾಗಿದೆ.