Just In
- 4 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 5 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 6 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 7 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ದಂಡ ತೆತ್ತ ವಾಹನ ಸವಾರರು
ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಂದು ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಯಿತು. ಲಾಕ್ಡೌನ್ ಜಾರಿಗೊಳಿಸಿದ ಬಳಿಕ ಆಟೋ, ಟ್ಯಾಕ್ಸಿ, ಬಸ್ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.
ದ್ವಿಚಕ್ರ ವಾಹನ ಹಾಗೂ ಕಾರುಗಳ ಸಂಚಾರಕ್ಕೆ ಹಲವು ಷರತ್ತುಗಳೊಂದಿಗೆ ಅನುಮತಿ ನೀಡಲಾಯಿತು. ಈ ಷರತ್ತುಗಳನ್ನು ಉಲ್ಲಂಘಿಸಿ ರಸ್ತೆಗಿಳಿದ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ವಾಹನಗಳ ಮಾಲೀಕರಿಗೆ ದಂಡ ವಿಧಿಸಲಾಯಿತು. ಇನ್ನು ಕೆಲವೆಡೆ ವಾಹನಗಳ ಮಾಲೀಕರನ್ನು ಬಂಧಿಸಲಾಯಿತು. ಮೇ ತಿಂಗಳ ಮೊದಲ ವಾರದಲ್ಲಿ ಲಾಕ್ಡೌನ್ ಸಡಿಲಿಸಲಾಯಿತು.
ಹಲವು ನಿರ್ಬಂಧಗಳೊಂದಿಗೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದರೆ ತಮಿಳುನಾಡಿನಲ್ಲಿ ಲಾಕ್ ಡೌನ್ ಇನ್ನೂ ಸಹ ಜಾರಿಯಲ್ಲಿದೆ. ಈ ಲಾಕ್ ಡೌನ್ ಆಗಸ್ಟ್ 31ರವರೆಗೆ ಜಾರಿಯಲ್ಲಿರಲಿದೆ. ಈ ಕಾರಣಕ್ಕೆ ಅಲ್ಲಿನ ಪೊಲೀಸರು ಇನ್ನು ಸಹ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
MOST READ:ಒಂದು ಸಾವಿರ ರೂಪಾಯಿ ಪಾವತಿಸಿ ಈ ಸ್ಕೂಟರ್ ಬುಕ್ ಮಾಡಿ
ತಮಿಳುನಾಡಿನಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳು ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಮಾರ್ಚ್ 24ರಿಂದ ಆಗಸ್ಟ್ 11ವರೆಗಿನ 140 ದಿನಗಳಲ್ಲಿ ಕೈಗೊಂಡ ಕ್ರಮಗಳ ಮಾಹಿತಿಯನ್ನು ಈಗ ಬಿಡುಗಡೆಗೊಳಿಸಲಾಗಿದೆ.
ಕಳೆದ 140 ದಿನಗಳಲ್ಲಿ ಒಟ್ಟು 8,67,158 ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇದು ಕೇವಲ ತಮಿಳುನಾಡಿನಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಾಗಿದೆ. ನಿಯಮ ಉಲ್ಲಂಘಿಸಿದ 9,57,743 ಜನರನ್ನು ಪೊಲೀಸರು ಬಂಧಿಸಿದ್ದಾರೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ಬಂಧಿತರನ್ನು ವೈಯಕ್ತಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಪೊಲೀಸರು ಬಂಧಿತರಿಂದ 6,77,629 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಕಳೆದ 140 ದಿನಗಳಲ್ಲಿ ತಮಿಳುನಾಡು ಪೊಲೀಸರು ನಿಯಮಗಳನ್ನು ಉಲ್ಲಂಘಿಸಿದವರಿಂದ ಒಟ್ಟು ರೂ.20.16 ಕೋಟಿ ದಂಡ ವಸೂಲಿ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಅಂತರ್ ಜಿಲ್ಲೆ ಪ್ರಯಾಣಕ್ಕೆ ಇನ್ನೂ ಹಲವಾರು ನಿರ್ಬಂಧಗಳಿವೆ. ಇ-ಪಾಸ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿರುವುದರಿಂದ, ಜನರು ಅಗತ್ಯ ಕಾರ್ಯಗಳಿದ್ದರೂ ಸಹ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಇದರಿಂದಾಗಿ ಇ-ಪಾಸ್ ವ್ಯವಸ್ಥೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದರೆ ತಮಿಳುನಾಡು ಸರ್ಕಾರ ಇನ್ನೂ ಇ-ಪಾಸ್ ವ್ಯವಸ್ಥೆಯನ್ನು ಹಿಂಪಡೆದಿಲ್ಲ.
ಈ ಮೊದಲು ಆಗಸ್ಟ್ 1ರಿಂದ ಬಸ್ಗಳ ಸಂಚಾರಕ್ಕೆ ಅವಕಾಶ ನೀಡಬಹುದು ಎಂಬ ನಿರೀಕ್ಷೆ ತಮಿಳುನಾಡಿನ ಜನರಲ್ಲಿ ಮನೆಮಾಡಿತ್ತು. ಆದರೆ ಇದುವರೆಗೂ ಬಸ್ಗಳ ಸಂಚಾರಕ್ಕೆ ಅನುಮತಿ ನೀಡಿಲ್ಲ. ತಮಿಳುನಾಡಿನಲ್ಲಿ ಎಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ ಎಂಬುದು ಇನ್ನೂ ಖಚಿತವಾಗಿಲ್ಲ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.