Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 14 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
1 ಕೋಟಿ ಬೆಲೆ ಬಾಳುವ ಬಸ್ ಖರೀದಿ ಮಾಡಿದ್ದೇಕೆ ಎಚ್.ಡಿ.ಕೆ !?
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದು, ಈ ಪ್ರವಾಸಕ್ಕೆ "ಐಷಾರಾಮಿ ಸಂಚಾರಿ ಬಸ್'' ಸಿದ್ಧವಾಗಿದೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದು, ಈ ಪ್ರವಾಸಕ್ಕೆ "ಐಷಾರಾಮಿ ಸಂಚಾರಿ ಬಸ್'' ಸಿದ್ಧವಾಗಿದೆ.
ಹೌದು, ಇತ್ತೀಚಿಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಮುಂದಿನ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಲು 1 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಬಸ್ ಖರೀದಿಸಿದ್ದಾರೆ.
ನವೆಂಬರ್ 15ರಿಂದ ತಮ್ಮ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಆರಂಭಿಸಲಿರುವ ಕುಮಾರಸ್ವಾಮಿ, ಮೊದಲ ಗ್ರಾಮ ವಾಸ್ತವ್ಯ ಬಸವನಬಾಗೇವಾಡಿಯಲ್ಲಿ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಚ್.ಡಿ.ಕುಮಾರಸ್ವಾಮಿಯವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಹವಾನಿಯಂತ್ರಿತ ಸುಸಜ್ಜಿತ ಬಸ್ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಬಸ್ಸಿನಲ್ಲಿ, ಊಟ-ತಿಂಡಿ, ಬೆಡ್ ರೂಮ್, ಚಿಕ್ಕ ಮೀಟಿಂಗ್ ಹಾಲ್, ಅಡುಗೆ ಮನೆ, ಶೌಚಾಲಯ, ಸ್ನಾನ ಗೃಹ, ಬಸ್ಸಿನಲ್ಲಿಯೇ ನಿಂತು ಭಾಷಣ ಮಾಡಲು ಅನುಕೂಲವಾಗುವಂತ ವಿನ್ಯಾಸ ಮಾಡಲಾಗಿದೆ.
ಗ್ರಾಮ ವಾಸ್ತವ್ಯದ ಸಂದರ್ಭ ವೈದ್ಯರು, ಯೋಗ ತರಬೇತುದಾರರು ಹಾಗೂ ಅಡುಗೆಯವರು ಕುಮಾರಸ್ವಾಮಿಯವರ ಜತೆಗಿರಲಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣಕ್ಕೆ ಈ ಎಚ್ಚರಿಕೆ ತೆಗೆದುಕೊಳ್ಳಲಾಗುತ್ತಿದ್ದು, ತಮಿಳುನಾಡಿನ ಕರೂರಿನಲ್ಲಿ ಈ ಐಷಾರಾಮಿ ಬಸ್ ನಿರ್ಮಾಣವಾಗುತ್ತಿದೆ.
ಅಶೋಕ್ ಲೇಲ್ಯಾಂಡ್ ಸಂಸ್ಥೆಯ ಈ ಬಸ್ನ ಬೆಲೆ 1 ಕೋಟಿ ರೂಪಾಯಿ. ಇದರಲ್ಲಿ ಹೈಡ್ರಾಲಿಕ್ ಲಿಫ್ಟ್ ವೇದಿಕೆ ಇದ್ದು, ಕುಮಾರಸ್ವಾಮಿ ಅದರ ಮೇಲೆ ನಿಂತು ಭಾಷಣ ಮಾಡಬಹುದಾಗಿದೆ. ಅತ್ಯಾಧುನಿಕ ಏರ್ ಸಸ್ಪೆನ್ಷನ್ ಹೊಂದಿರುವ ಈ ಬಸ್ ಕುಮಾರಸ್ವಾಮಿ ಅವರ ಆರೋಗ್ಯ ಮತ್ತು ಶಕ್ತಿಯನ್ನು ಕುಂದಿಸದಂತೆ ನೋಡಿಕೊಳ್ಳಲಿದೆ.
ಜುಲೈನಿಂದ ಬಸ್ ವಿನ್ಯಾಸ ಕಾರ್ಯ ಸೇಲಂನಲ್ಲಿ ನಡೆಯುತ್ತಿದೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೋಹಿತ್ ಅಲ್ತಾಫ್ ನೇತೃತ್ವದಲ್ಲಿ ಬಸ್ ವಿನ್ಯಾಸ ಕಾರ್ಯ ನಡೆಯುತ್ತಿದೆ. ಅವರೇ ಇದನ್ನು ಕುಮಾರಸ್ವಾಮಿಯವರಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ.
ಒಟ್ಟು 50 ವಿಧಾನಸಭಾ ಕ್ಷೇತ್ರಗಳ 62 ತಾಲೂಕುಗಳಲ್ಲಿ ತಲಾ ಒಂದೊಂದು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ದಿನಕ್ಕೆ 20 ಗ್ರಾಮಗಳಿಗೆ ಭೇಟಿ ನೀಡುವ ಉದ್ದೇಶವನ್ನು ಕುಮಾರಸ್ವಾಮಿ ಹೊಂದಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸಿಂಗಾಪುರದಲ್ಲಿ 15 ದಿನ ವಿಶ್ರಾಂತಿ ಪಡೆದು ರಾಜ್ಯಕ್ಕೆ ವಾಪಸ್ಸಾಗಿರುವ ಕುಮಾರಸ್ವಾಮಿ, 3 ತಿಂಗಳ ಕಾಲ ನಿರಂತರ ಪ್ರವಾಸ ನಡೆಸಲಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿಯವರು ಕೂಡ ರಾಜ್ಯ ಪ್ರವಾಸಕ್ಕೆ ಸಾಥ್ ನೀಡಲಿರುವುದು ವಿಶೇಷ ಸಂಗತಿ ಎನ್ನಬಹುದು.