Just In
- 5 min ago Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- 58 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 2 hrs ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 2 hrs ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
Don't Miss!
- News Water Crisis: ಜಲಕ್ಷಾಮ ತಡೆಗೆ ಜಲಸಂರಕ್ಷಣೆಯೇ ಪರಿಹಾರ: ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
1 ಕೋಟಿ ಬೆಲೆ ಬಾಳುವ ಬಸ್ ಖರೀದಿ ಮಾಡಿದ್ದೇಕೆ ಎಚ್.ಡಿ.ಕೆ !?
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದು, ಈ ಪ್ರವಾಸಕ್ಕೆ "ಐಷಾರಾಮಿ ಸಂಚಾರಿ ಬಸ್'' ಸಿದ್ಧವಾಗಿದೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದು, ಈ ಪ್ರವಾಸಕ್ಕೆ "ಐಷಾರಾಮಿ ಸಂಚಾರಿ ಬಸ್'' ಸಿದ್ಧವಾಗಿದೆ.
ಹೌದು, ಇತ್ತೀಚಿಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಮುಂದಿನ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಲು 1 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಬಸ್ ಖರೀದಿಸಿದ್ದಾರೆ.
ನವೆಂಬರ್ 15ರಿಂದ ತಮ್ಮ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಆರಂಭಿಸಲಿರುವ ಕುಮಾರಸ್ವಾಮಿ, ಮೊದಲ ಗ್ರಾಮ ವಾಸ್ತವ್ಯ ಬಸವನಬಾಗೇವಾಡಿಯಲ್ಲಿ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಚ್.ಡಿ.ಕುಮಾರಸ್ವಾಮಿಯವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಹವಾನಿಯಂತ್ರಿತ ಸುಸಜ್ಜಿತ ಬಸ್ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಬಸ್ಸಿನಲ್ಲಿ, ಊಟ-ತಿಂಡಿ, ಬೆಡ್ ರೂಮ್, ಚಿಕ್ಕ ಮೀಟಿಂಗ್ ಹಾಲ್, ಅಡುಗೆ ಮನೆ, ಶೌಚಾಲಯ, ಸ್ನಾನ ಗೃಹ, ಬಸ್ಸಿನಲ್ಲಿಯೇ ನಿಂತು ಭಾಷಣ ಮಾಡಲು ಅನುಕೂಲವಾಗುವಂತ ವಿನ್ಯಾಸ ಮಾಡಲಾಗಿದೆ.
ಗ್ರಾಮ ವಾಸ್ತವ್ಯದ ಸಂದರ್ಭ ವೈದ್ಯರು, ಯೋಗ ತರಬೇತುದಾರರು ಹಾಗೂ ಅಡುಗೆಯವರು ಕುಮಾರಸ್ವಾಮಿಯವರ ಜತೆಗಿರಲಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣಕ್ಕೆ ಈ ಎಚ್ಚರಿಕೆ ತೆಗೆದುಕೊಳ್ಳಲಾಗುತ್ತಿದ್ದು, ತಮಿಳುನಾಡಿನ ಕರೂರಿನಲ್ಲಿ ಈ ಐಷಾರಾಮಿ ಬಸ್ ನಿರ್ಮಾಣವಾಗುತ್ತಿದೆ.
ಅಶೋಕ್ ಲೇಲ್ಯಾಂಡ್ ಸಂಸ್ಥೆಯ ಈ ಬಸ್ನ ಬೆಲೆ 1 ಕೋಟಿ ರೂಪಾಯಿ. ಇದರಲ್ಲಿ ಹೈಡ್ರಾಲಿಕ್ ಲಿಫ್ಟ್ ವೇದಿಕೆ ಇದ್ದು, ಕುಮಾರಸ್ವಾಮಿ ಅದರ ಮೇಲೆ ನಿಂತು ಭಾಷಣ ಮಾಡಬಹುದಾಗಿದೆ. ಅತ್ಯಾಧುನಿಕ ಏರ್ ಸಸ್ಪೆನ್ಷನ್ ಹೊಂದಿರುವ ಈ ಬಸ್ ಕುಮಾರಸ್ವಾಮಿ ಅವರ ಆರೋಗ್ಯ ಮತ್ತು ಶಕ್ತಿಯನ್ನು ಕುಂದಿಸದಂತೆ ನೋಡಿಕೊಳ್ಳಲಿದೆ.
ಜುಲೈನಿಂದ ಬಸ್ ವಿನ್ಯಾಸ ಕಾರ್ಯ ಸೇಲಂನಲ್ಲಿ ನಡೆಯುತ್ತಿದೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೋಹಿತ್ ಅಲ್ತಾಫ್ ನೇತೃತ್ವದಲ್ಲಿ ಬಸ್ ವಿನ್ಯಾಸ ಕಾರ್ಯ ನಡೆಯುತ್ತಿದೆ. ಅವರೇ ಇದನ್ನು ಕುಮಾರಸ್ವಾಮಿಯವರಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ.
ಒಟ್ಟು 50 ವಿಧಾನಸಭಾ ಕ್ಷೇತ್ರಗಳ 62 ತಾಲೂಕುಗಳಲ್ಲಿ ತಲಾ ಒಂದೊಂದು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ದಿನಕ್ಕೆ 20 ಗ್ರಾಮಗಳಿಗೆ ಭೇಟಿ ನೀಡುವ ಉದ್ದೇಶವನ್ನು ಕುಮಾರಸ್ವಾಮಿ ಹೊಂದಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸಿಂಗಾಪುರದಲ್ಲಿ 15 ದಿನ ವಿಶ್ರಾಂತಿ ಪಡೆದು ರಾಜ್ಯಕ್ಕೆ ವಾಪಸ್ಸಾಗಿರುವ ಕುಮಾರಸ್ವಾಮಿ, 3 ತಿಂಗಳ ಕಾಲ ನಿರಂತರ ಪ್ರವಾಸ ನಡೆಸಲಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿಯವರು ಕೂಡ ರಾಜ್ಯ ಪ್ರವಾಸಕ್ಕೆ ಸಾಥ್ ನೀಡಲಿರುವುದು ವಿಶೇಷ ಸಂಗತಿ ಎನ್ನಬಹುದು.