Just In
- 8 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 10 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 10 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 11 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾರ್ಜಿಂಗ್ ಸೌಲಭ್ಯ ನೀಡದ ಬಸ್ಸಿಗೆ ಬಿತ್ತು 5,000 ದಂಡ
ಪ್ರಯಾಣಿಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸಲು ಹಲವಾರು ಕಂಪನಿಯ ಬಸ್ಸುಗಳಿವೆ. ಈ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಕೆಲವು ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಎಸಿ, ಸ್ಲೀಪರ್ ಸೌಲಭ್ಯ ನೀಡುವ ಭರವಸೆ ನೀಡಿ ಅವುಗಳ ದರವನ್ನು ವಸೂಲಿ ಮಾಡಲಾಗಿರುತ್ತದೆ.
ಹೀಗೆ ಪ್ರಯಾಣಿಕರಿಂದ ದರವನ್ನು ವಸೂಲಿ ಮಾಡುವ ಕೆಲವು ಸಂಸ್ಥೆಯ ಬಸ್ಸುಗಳು ಕಡೆಗೆ ತಾವು ತಿಳಿಸಿದ ಸೌಲಭ್ಯವನ್ನು ನೀಡುವುದಿಲ್ಲ. ಸೌಲಭ್ಯಗಳು ದೊರೆಯುತ್ತವೆಂದು ಹಣ ಪಾವತಿಸುವ ಪ್ರಯಾಣಿಕರು, ಅವುಗಳು ಸಿಗದೇ ಇದ್ದಾಗ ಗೊಣಗಾಡಿಕೊಂಡು ಸುಮ್ಮನಾಗುತ್ತಾರೆ.
ಇನ್ನು ಕೆಲವರು ಸೌಲಭ್ಯ ನೀಡದ ಬಸ್ಸುಗಳ ಮೇಲೆ ಕೇಸ್ ಹಾಕಿ ಪಾಠ ಕಲಿಸುತ್ತಾರೆ. ಈಗ ಇಂತಹುದೇ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ಸತೀಶ್ ರತನ್ಲಾಲ್ ದಯಾಮರವರು ಈ ವರ್ಷದ ಜುಲೈ 12ರಂದು ತಮ್ಮ ಸ್ನೇಹಿತನ ಜೊತೆ ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ ಶಿವಶಶಿ ಬಸ್ಸಿನಲ್ಲಿ ಔರಂಗಬಾದಿಗೆ ಹೊರಟಿದ್ದಾರೆ.
ದಯಾಮರವರ ಮೊಬೈಲ್ ಫೋನಿನಲ್ಲಿ ಚಾರ್ಜ್ ಇರದ ಕಾರಣ ಮೊಬೈಲ್ ಸ್ವಿಚ್ ಆಫ್ ಆಗಿದೆ. ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಚಾರ್ಜಿಂಗ್ ಪಾಯಿಂಟ್ ನೀಡುವಂತೆ ಬಸ್ಸಿನ ಕಂಡಕ್ಟರ್ ಅನ್ನು ಕೇಳಿಕೊಂಡಿದ್ದಾರೆ. ಆದರೆ ಬಸ್ಸಿನ ಕಂಡಕ್ಟರ್ ಪ್ರತಿಕ್ರಿಯೆ ನೀಡಿಲ್ಲ.
ನಂತರ ದಯಾಮರವರಿಗೆ ಈ ಬಸ್ಸಿನಲ್ಲಿ ಚಾರ್ಜಿಂಗ್ ಪಾಯಿಂಟ್ ಇಲ್ಲದಿರುವುದು ಕಂಡು ಬಂದಿದೆ. ಇದರ ಜೊತೆಗೆ ಬಸ್ಸಿನ ಏರ್ ಕಂಡಿಷನ್ ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ದಯಾಮರವರಿಗೆ ಬಸ್ಸಿನವರು ಮೋಸ ಮಾಡಿರುವುದು ಕಂಡು ಬಂದಿದೆ.
ತಕ್ಷಣವೇ ಅವರು ಬಸ್ಸಿನ ಕಂಡಕ್ಟರ್ ಹಾಗೂ ಡ್ರೈವರ್ನನ್ನು ಸಂಪರ್ಕಿಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಲು ಬಸ್ಸಿನಲ್ಲಿರುವ ಕಂಪ್ಲೇಂಟ್ ರಿಜಿಸ್ಟರ್ ನೀಡುವಂತೆ ಕೇಳಿದ್ದಾರೆ. ಆದರೆ ಕಂಡಕ್ಟರ್ ಹಾಗೂ ಡ್ರೈವರ್ ಇಬ್ಬರೂ ಈ ರಿಜಿಸ್ಟರ್ ಅನ್ನು ದಯಾಮರವರಿಗೆ ನೀಡಿಲ್ಲ.
ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಮಗೆ ಮೋಸ ಮಾಡಿರುವುದನ್ನು ಅರಿತ ದಯಾಮರವರು ಜಾಲ್ನ ಜಿಲ್ಲಾ ಗ್ರಾಹಕ ನ್ಯಾಯಲಯಕ್ಕೆ ದೂರು ಸಲ್ಲಿಸಿದ್ದಾರೆ. ತಮಗೆ ಆದ ತೊಂದರೆಗೆ ಹಾಗೂ ಮಾನಸಿಕ ಹಿಂಸೆಗೆ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದಾರೆ.
MOST READ: ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?
ದಯಾಮರವರು ತಮ್ಮ ದೂರಿನಲ್ಲಿ ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ ಜಾಹೀರಾತಿನಲ್ಲಿ ಸಂಸ್ಥೆಯ ಬಸ್ಸುಗಳಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಹಾಗೂ ಎಸಿ ಸೌಲಭ್ಯವನ್ನು ನೀಡುವುದಾಗಿ ತಿಳಿಸಿ ಅವುಗಳಿಗೆ ದರ ವಿಧಿಸಲಾಗಿತ್ತೆಂದು ತಿಳಿಸಿದ್ದರು.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್
ಆದರೆ ಈ ಸೌಲಭ್ಯಗಳಿಗಾಗಿ ಹಣ ಪಡೆದರೂ, ಈ ಸೌಲಭ್ಯಗಳನ್ನು ನೀಡಿಲ್ಲವೆಂದು ದೂರಿನಲ್ಲಿ ತಿಳಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ ಮಹಾರಾಷ್ಟ್ರದ ಜಾಲ್ನ ಜಿಲ್ಲಾ ಗ್ರಾಹಕ ನ್ಯಾಯಲಯವು ರೂ.5,000ಗಳನ್ನು ದಯಾಮರವರಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಜಾಹೀರಾತಿನಲ್ಲಿ ಈ ಸೌಲಭ್ಯಗಳನ್ನು ನೀಡುವುದಾಗಿ ತಿಳಿಸಿ, ನಂತರ ನೀಡದೇ ಇರುವ ಕಾರಣಕ್ಕೆ ದಂಡ ವಿಧಿಸುತ್ತಿರುವುದಾಗಿ ತಿಳಿಸಿದೆ. ಜಾಲ್ನದ ಬಸ್ ಡಿಪೋ 30 ದಿನಗಳ ಒಳಗೆ ದಯಾಮರವರಿಗೆ ಪರಿಹಾರದ ಹಣವನ್ನು ನೀಡಬೇಕೆಂದು ಗ್ರಾಹಕ ನ್ಯಾಯಲಯವು ಆದೇಶ ನೀಡಿದೆ.