Just In
- 1 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 6 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 7 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 17 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಸಂಕಷ್ಟ- ವಲಸೆ ಕಾರ್ಮಿಕರ ಸಹಾಯಕ್ಕೆ ಧಾವಿಸಿದ ಮಹೀಂದ್ರಾ
ಕರೋನಾ ವೈರಸ್ನಿಂದ ಇಡೀ ವಿಶ್ವವೇ ತತ್ತರಿಸಿದ್ದು, ಭಾರತ ಕೂಡಾ ವೈರಸ್ ಅಟ್ಟಹಾಸಕ್ಕೆ ನಲುಗಿಹೋಗಿದೆ. ವೈರಸ್ ತಡೆಯಲು ಹಲವಾರು ಕಠಿಣಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರವು ಆರ್ಥಿಕ ಸಂಕಷ್ಟದ ನಡುವೆಯೂ ವೈರಸ್ ಹತ್ತಿಕ್ಕಲು ಲಾಕ್ಡೌನ್ ನಿಯಮವನ್ನು ಮುಂದುವರಿಸಿದೆ.
ಲಾಕ್ಡೌನ್ನಿಂದಾಗಿ ಎಲ್ಲಾ ವರ್ಗದ ಜನರು ಒಂದಿಲ್ಲಾ ಒಂದು ರೀತಿಯ ಸಂಕಷ್ಟಕ್ಕೆ ಸಿಲುಕಿದ್ದು, ದಿನಗೂಲಿ ಕಾರ್ಮಿಕರ ಪರಿಸ್ಥಿತಿಯಂತೂ ಶೋಚನೀಯವಾಗಿದೆ. ಕೆಲಸ ಅರಿಸಿ ನಗರಪ್ರದೇಶಗಳನ್ನು ಸೇರಿದ್ದ ಕೂಲಿ ಕಾರ್ಮಿಕರು ಇದೀಗ ಆದಾಯವೂ ಇಲ್ಲದೆ ಇತ್ತ ತುತ್ತಿನ ಚೀಲಕ್ಕಾಗಿ ಪರಿತಪಿಸುವಂತಾಗಿದ್ದು, ವೈರಸ್ ಭೀತಿ ನಡುವೆಯೂ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಲಕ್ಷಾಂತರ ಕಾರ್ಮಿಕರು ನಡೆದುಕೊಂಡೆ ಹಳ್ಳಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.
ಆದಾಯವಿಲ್ಲದ ಕಾರಣ ಖಾಸಗಿ ವಾಹನಗಳಲ್ಲೂ ಪ್ರಯಾಣಿಸಲು ಸಾಧ್ಯವಿಲ್ಲ ಕೂಲಿ ಕಾರ್ಮಿಕರು ನಡೆದುಕೊಂಡೆ ಊರು ಸೇರುತ್ತಿದ್ದು, ಮಾರ್ಗಮಧ್ಯದಲ್ಲೇ ಸಾವಿರಾರು ಕಾರ್ಮಿಕರು ಅಸ್ವಸ್ಥಗೊಂಡ ಘಟನೆಗಳು ವರದಿಯಾಗಿವೆ.
ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಮಹೀಂದ್ರಾ ಕಂಪನಿಯು ತಮ್ಮ ಅಧೀನದಲ್ಲಿರುವ ಸಂಘ-ಸಂಸ್ಥೆಗಳ ಮೂಲಕ ಸಾಧ್ಯವಿರುವ ಕಡೆಗಳಲ್ಲಿ ಕೂಲಿ ಕಾರ್ಮಿಕರನ್ನು ತಮ್ಮ ಊರುಗಳಿಗೆ ತಲುಪಿಸಲು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದು, ಊರು ತಲುಪಲು ಪರದಾಡುತ್ತಿರುವ ಕಾರ್ಮಿಕರ ಆಕ್ರಂದನಕ್ಕೆ ಮಹೀಂದ್ರಾ ಕಂಪನಿಯು ಮನಮಿಡಿದಿದೆ.
ಇನ್ನು ಮಹಾಮಾರಿ ಕರೋನಾ ವೈರಸ್ ವಿರುದ್ಧ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ತನ್ನದೆ ಆದ ಕೊಡುಗೆ ನೀಡುತ್ತಿರುವ ಮಹೀಂದ್ರಾ ಕಂಪನಿಯು ಲಾಕ್ಡೌನ್ ವೇಳೆ ಹಸಿದವರಿಗೆ ಅನ್ನ ನೀಡಿದ್ದಲ್ಲದೆ ಸರ್ಕಾರಕ್ಕೆ ಹಣಕಾಸು ಮತ್ತು ವೈದ್ಯಕೀಯ ಉಪಕರಣಗಳ ಸಹಾಯಹಸ್ತ ಚಾಚಿದೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ಹಸ್ತಾಂತರ ಮಾಡಿದ್ದು, ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಮಾದರಿಯ ವೆಂಟಿಲೇಟರ್ಗಳನ್ನು ಪೂರೈಕೆ ಮಾಡುತ್ತಿದೆ.
ಇದರ ಜೊತೆಗೆ ಮತ್ತೊಂದು ಸಿಹಿಸುದ್ದಿ ನೀಡಿರುವ ಮಹೀಂದ್ರಾ ಕಂಪನಿಯು ಇದೇ ಮೊದಲ ಬಾರಿಗೆ ಕರೋನಾ ವೈರಸ್ ಸೋಂಕು ಪಿಡಿತರ ಪ್ರಾಣ ಉಳಿಸಲು ಹಗಲು-ರಾತ್ರಿ ಶ್ರಮಿಸುತ್ತಿರುವ ವೈದ್ಯರ ಜೀವ ಹಾನಿ ತಡೆಯುವುದಕ್ಕೆ ಹೊಸ ತಂತ್ರಜ್ಞಾನ ಪ್ರೇರಿತ ಉಪಕರಣವೊಂದನ್ನು ನಿರ್ಮಾಣ ಮಾಡಿದೆ.
MOST READ: ಮುಗಿಯದ ಲಾಕ್ಡೌನ್ ರಗಳೆ: 15 ವರ್ಷದ ಬಾಲಕಿಯ ಸಾಹಸಕ್ಕೊಂದು ದೊಡ್ಡ ಸಲಾಂ
ಉತ್ತರ ಅಮೆರಿಕದಲ್ಲಿರುವ ಮಹೀಂದ್ರಾ ಡೆಟ್ರಾಯಿಟ್ ಡಿಸೈನ್ ತಂಡವು ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ಯಾವುದೇ ರೀತಿ ಸೋಂಕು ತಗುಲದಂತೆ ತಡೆಯಲು ಏರೋಸೊಲ್ ಬಾಕ್ಸ್ ಅನ್ನು ಸಿದ್ದಪಡಿಸಿ ಉತ್ಪಾದನೆಗೆ ಚಾಲನೆ ನೀಡಿದ್ದು, ಭಾರತದಲ್ಲೂ ಇದೀಗ ಹೊಸ ಮಾದರಿಯ ಉಪಕರಣ ನಿರ್ಮಾಣಕ್ಕೆ ಚಾಲನೆ ನೀಡಿದೆ.