Just In
- 13 min ago Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- 1 hr ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- 3 hrs ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 3 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
Don't Miss!
- Movies ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್: ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಕರೋನಾ ವೈರಸ್ ಸೋಂಕನ್ನು ಹರಡದಂತೆ ತಡೆಗಟ್ಟಲು ಭಾರತದಾದ್ಯಂತ ಮಾರ್ಚ್ 25ರಿಂದ 21 ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿದೆ. ದೇಶದ ಜನರ ಹಿತದೃಷ್ಟಿಯಿಂದ ಈ ಲಾಕ್ಡೌನ್ ಜಾರಿಗೊಳಿಸಲಾಗಿದೆ.
ಜೀವನೋಪಾಯಕ್ಕಾಗಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ಅನೇಕ ಜನರಿದ್ದಾರೆ. ಅಂತಹವರು ಹಠಾತ್ ಆಗಿ ಲಾಕ್ಡೌನ್ ಜಾರಿಗೊಳಿಸಿದ ಕಾರಣಕ್ಕೆ ತಮ್ಮ ಮನೆಗೆ ಹೋಗಲು ಸಾಧ್ಯವಾಗಲಿಲ್ಲ.
ಈ ಲಾಕ್ಡೌನ್ ವೇಳೆಯಲ್ಲಿ ಬೇರೆ ಊರಿನಲ್ಲಿ ಸಿಲುಕಿದ್ದ ತನ್ನ ಮಗನನ್ನು ಜೊತೆಗೆ ಕರೆದೊಯ್ಯಲು ಹೈದರಾಬಾದ್ ಮಹಿಳೆಯೊಬ್ಬರು ಸ್ಕೂಟರ್ನಲ್ಲಿ 1,400 ಕಿ.ಮೀ ಪ್ರಯಾಣ ಬೆಳೆಸಿದ್ದ ಘಟನೆ ಇತ್ತೀಚಿಗೆ ವರದಿಯಾಗಿತ್ತು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಅದೇ ರೀತಿಯ ಮತ್ತೊಂದು ಪ್ರಕರಣ ಈಗ ವರದಿಯಾಗಿದೆ. 21 ದಿನಗಳ ಲಾಕ್ ಡೌನ್ ಘೋಷಣೆಯಾದ ನಂತರ 24 ವರ್ಷದ ಯುವಕನೊಬ್ಬ ಸೈಕಲ್ನಲ್ಲಿಯೇ ತನ್ನ ಊರನ್ನು ತಲುಪಿದ್ದಾನೆ.
ಈ ಯುವಕ ಮುಂಬೈನಿಂದ 1,800 ಕಿ.ಮೀ ದೂರದಲ್ಲಿರುವ ಒಡಿಶಾದ ಜಾಜಾಪುರ ಜಿಲ್ಲೆಗೆ ಪ್ರಯಾಣಿಸಿದ್ದಾನೆ. ವರದಿಗಳ ಪ್ರಕಾರ, ಮಹೇಶ್ ಜೆನಾ ಎಂಬ ಈ ಯುವಕ ಜಾಜಾಪುರ ಜಿಲ್ಲೆಯ ಬಾದಾಸೌರ್ ಗ್ರಾಮಕ್ಕೆ ಸೇರಿದವನು.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಈ ಯುವಕ ಕೆಲಸ ಹುಡುಕಿಕೊಂಡು ತನ್ನ ಹಳ್ಳಿಯಿಂದ ಮುಂಬೈಗೆ ಬಂದಿದ್ದ. ಮುಂಬೈಯಲ್ಲಿ ಮನೆ ಕಟ್ಟುವ ಕೆಲಸ ಮಾಡುತ್ತಿದ್ದ. ಈ ವೇಳೆ ಮುಂಬೈ ನಗರದಲ್ಲಿ ಲಾಕ್ ಡೌನ್ ಘೋಷಿಸಲಾಯಿತು.
ಈ 24 ವರ್ಷದ ಯುವಕನ ಬಳಿ ಹೆಚ್ಚು ಹಣವಿರಲಿಲ್ಲ. ಈ ಕಾರಣಕ್ಕೆ ಅವನಿಗೆ ತಾನು ಮುಂಬೈನಲ್ಲಿ ವಾಸವಿದ್ದ ಮನೆಯ ಬಾಡಿಗೆಯನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಹಣಕಾಸಿನತೊಂದರೆಯಿಂದಾಗಿ ಮಹೇಶ್ ಏಪ್ರಿಲ್ 2ರಂದು ತನ್ನ ಗ್ರಾಮಕ್ಕೆ ಹೋಗಲು ನಿರ್ಧರಿಸಿದನು.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಮಹೇಶ್ ತನ್ನ ಬಳಿಯಿದ್ದ ಕೆಲವು ನೂರು ರೂಪಾಯಿಗಳೊಂದಿಗೆ ತನ್ನ ಪ್ರಯಾಣವನ್ನು ಆರಂಭಿಸಿದನು. ರೈಲು ಹಾಗೂ ಬಸ್ಸುಗಳ ಸೇವೆ ಇಲ್ಲದ ಕಾರಣಕ್ಕೆ ಮಹೇಶ್ ತನ್ನ ಸೈಕಲ್ನೊಂದಿಗೆ ಪ್ರಯಾಣವನ್ನು ಆರಂಭಿಸಿದ.
ತನ್ನ ಪ್ರಯಾಣದ ಸಮಯದಲ್ಲಿ, ಮಹೇಶ್ ಪ್ರತಿದಿನ ಸುಮಾರು 10-12 ಗಂಟೆಗಳ ಕಾಲ ಸೈಕ್ಲಿಂಗ್ ಮಾಡಿ, ದಿನಕ್ಕೆ ಸುಮಾರು 230 ಕಿ.ಮೀ ದೂರ ಕ್ರಮಿಸಿದ್ದಾನೆ. ದಾರಿಯುದ್ದಕ್ಕೂ ಪೊಲೀಸರು ಹಾಗೂ ಸ್ಥಳೀಯರು ಸಹಾಯ ಮಾಡಿದ್ದಾರೆ ಎಂದು ಮಹೇಶ್ ಹೇಳಿದ್ದಾನೆ. ಮಹೇಶ್ ಏಪ್ರಿಲ್ 9ರಂದು ತನ್ನ ಮನೆ ತಲುಪಿದ್ದಾನೆ.