Just In
- 12 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 13 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 14 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 14 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ
ವಿಪತ್ತುಗಳು ನಿಜ ಜೀವನದ ಹೀರೋಗಳು ಯಾರು ಎಂಬುದನ್ನು ತಿಳಿಸುತ್ತವೆ. ಯಾವುದೇ ಪ್ರತಿಫಲ ಬಯಸದೇ ಇತರರ ಹಿತಕ್ಕಾಗಿ ಕೆಲಸ ಮಾಡುವ ಜನರು ಉಳಿದವರ ಪಾಲಿಗೆ ದೇವರುಗಳಾಗುತ್ತಾರೆ.
ಕೋವಿಡ್ 19 ವೈರಸ್ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಈ ಸಮಯದಲ್ಲಿ ಪಾಟ್ನಾದ ಗೌರವ್ ರಾಯ್ ನೂರಾರು ಜನರ ಪಾಲಿಗೆ ದೇವರಾಗಿದ್ದಾರೆ. ಐಸಿಯು ವಾರ್ಡ್ಗಳಲ್ಲಿ ಆಕ್ಸಿಜನ್ ಸಿಗದೇ ಹೆಣಗಾಡುತ್ತಿರುವವರಿಗೆ ಯಾವುದೇ ಪ್ರತಿಫಲ ಬಯಸದೇ ಅವರು ಆಕ್ಸಿಜನ್ ಪೂರೈಸುತ್ತಿದ್ದಾರೆ. ಇದಕ್ಕಾಗಿ ತಮ್ಮ ಬಳಿಯಿದ್ದ ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಆಕ್ಸಿಜನ್ ಕ್ಯಾರಿಯರ್ ಆಗಿ ಬದಲಿಸಿದ್ದಾರೆ.
ಅವರ ಈ ವಿಶಿಷ್ಟ ಸೇವೆಯಿಂದಾಗಿ ಜನರು ಅವರನ್ನು ಆಕ್ಸಿಜನ್ ಮ್ಯಾನ್ ಎಂದು ಕರೆಯುತ್ತಿದ್ದಾರೆ. ದೇಶಾದ್ಯಂತ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಆಕ್ಸಿಜನ್ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬಡವರಿಗೆ ನೆರವಾಗಲು ಆಕ್ಸಿಜನ್ ಪೂರೈಸುತ್ತಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಗೌರವ್ ರಾಯ್ ಆರಂಭದಲ್ಲಿ ಕೇವಲ 10 ಸಿಲಿಂಡರ್ಗಳ ಮೂಲಕ ಈ ಸೇವೆಯನ್ನು ಆರಂಭಿಸಿದರು. ಈಗ ಅವರು 254ಕ್ಕೂ ಹೆಚ್ಚು ಸಿಲಿಂಡರ್ಗಳನ್ನು ಹೊಂದಿದ್ದಾರೆ. ಅವರಿಗೆ ಕೆಲವು ಸ್ನೇಹಿತರು ಹಾಗೂ ದತ್ತಿ ಸಂಸ್ಥೆಗಳವರು 200ಕ್ಕೂ ಹೆಚ್ಚು ಸಿಲಿಂಡರ್ಗಳನ್ನು ದಾನ ಮಾಡಿದ್ದಾರೆ.
ಕೆಲವರು ಹಣಕಾಸಿನ ನೆರವನ್ನು ನೀಡಿದ್ದಾರೆ. ಗೌರವ್ ರಾಯ್ ತಮ್ಮ ಕೈಯಿಂದ ರೂ.3.15 ಲಕ್ಷ ಹಾಕಿದ್ದಾರೆ. ಅವರ ಸ್ನೇಹಿತರು ಹಾಗೂ ಇತರರು ರೂ.6 ಲಕ್ಷ ನೀಡಿದ್ದಾರೆ. ಅವರು ಈ ಸೇವೆಯನ್ನು ಉಚಿತವಾಗಿ ನೀಡುತ್ತಿದ್ದಾರೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಅನಿವಾರ್ಯವಾಗಿರುವವರಿಗೆ ಆದ್ಯತೆ ಮೇರೆಗೆ ಆಕ್ಸಿಜನ್ ನೀಡಲಾಗುತ್ತಿದೆ. ಕೆಲವು ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಲಿಂಡರ್ಗಳನ್ನು ಅಳವಡಿಸಿ ಆಕ್ಸಿಜನ್ ಒದಗಿಸಲಾಗುತ್ತಿದೆ. ಗೌರವ್ ರಾಯ್ ಕಳೆದ ಹತ್ತು ದಿನಗಳಲ್ಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ 191 ಆಕ್ಸಿಜನ್ ಸಿಲಿಂಡರ್ಗಳನ್ನು ಅಳವಡಿಸಿದ್ದಾರೆ.
ಅವರು ಮಾಡಿಫೈಗೊಂಡಿರುವ ತಮ್ಮ ಕಾರಿನ ಮೂಲಕ ಅಗತ್ಯವಿರುವವರಿಗೆ ಆಕ್ಸಿಜನ್ ತಲುಪಿಸುತ್ತಿದ್ದಾರೆ. ಆಕ್ಸಿಜನ್ ಜೊತೆಗೆ ಅಗತ್ಯವಿರುವವರಿಗೆ ಆಕ್ಸಿಜನ್ ಲೆವೆಲ್ ಹೆಚ್ಚಿಸುವ ಮಾಸ್ಕ್ ಅನ್ನು ಸಹ ನೀಡಲಾಗುತ್ತಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಆಕ್ಸಿಜನ್ ಸಿಲಿಂಡರ್ಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಅವರು ರೋಗಿಗಳಿಗೆ ಸಲಹೆ ನೀಡುತ್ತಾರೆ. ಗೌರವ್ ರಾಯ್ರವರಿಗೆ ಈ ರೀತಿಯ ಸೇವಾ ಮನೋಭಾವ ಬಂದಿರುವುದರ ಹಿಂದೆಯೂ ಆಸಕ್ತಿಕರ ಸಂಗತಿಯಿದೆ.
ಭಾರತದಲ್ಲಿ ಕೋವಿಡ್ 19 ವೈರಸ್ ಆರಂಭವಾದಾಗ ಹಲವಾರು ಜನರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದರು. ಅವರಲ್ಲಿ ಗೌರವ್ ರಾಯ್ ಸಹ ಒಬ್ಬರು. ಸ್ಥಳಾವಕಾಶದ ಕೊರತೆಯಿಂದ ಅವರನ್ನು ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಆ ಸಮಯದಲ್ಲಿ ಮಲಗುವ ಕೋಣೆ ಮಾತ್ರವಲ್ಲದೆ ಆಕ್ಸಿಜನ್'ಗೂ ಸಹ ಕೊರತೆಯುಂಟಾಗಿತ್ತು. ಆಕ್ಸಿಜನ್ ಸಿಗದೇ ಗೌರವ್ ರಾಯ್ ನರಳಾಡಿದ್ದರು. ಈ ಪರಿಸ್ಥಿತಿ ಇತರರಿಗೆ ಬರಬಾರದು ಎಂದು ಗೌರವ್ ರಾಯ್ ಈ ಸೇವೆ ನೀಡಲು ಮುಂದಾಗಿದ್ದಾರೆ.
ಗೌರವ್ ರಾಯ್ ಮಾತ್ರವಲ್ಲದೇ ಅವರ ಪತ್ನಿಯೂ ಸಹ ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾನೆ. ಅವರಿಬ್ಬರೂ ಜತೆಗೂಡಿ ಆಕ್ಸಿಜನ್ ಅಗತ್ಯವಿರುವವರಿಗೆ ಆಕ್ಸಿಜನ್ ಸಿಲಿಂಡರ್ಗಳನ್ನು ಪೂರೈಸುತ್ತಿದ್ದಾರೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಅವರು ಮಾಡಿಫೈ ಮಾಡಿರುವ ವ್ಯಾಗನ್ಆರ್ ಕಾರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ.4,80,500ಗಳಾಗಿದೆ. ಮಾರುತಿ ಸುಜುಕಿ ಕಂಪನಿಯು ವ್ಯಾಗನ್ಆರ್ ಕಾರ್ ಅನ್ನು ಮೂರು ಎಂಜಿನ್ ಆಯ್ಕೆಗಳೊಂದಿಗೆ ಮಾರಾಟ ಮಾಡುತ್ತದೆ.
ಇವುಗಳಲ್ಲಿ 1.0 ಲೀಟರ್ ಪೆಟ್ರೋಲ್ ಎಂಜಿನ್, 1.2 ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 1.0 ಲೀಟರ್ ಎಸ್ ಸಿಎನ್ಜಿ ಎಂಜಿನ್ ಆಯ್ಕೆಗಳು ಸೇರಿವೆ.ಮಾರುತಿ ಸುಜುಕಿ ಕಂಪನಿಯು ವ್ಯಾಗನ್ಆರ್ ಕಾರನ್ನು ಶೀಘ್ರದಲ್ಲಿಯೇ ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ.