Just In
- 1 hr ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 4 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 4 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 6 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರೀ ಪ್ರಮಾಣದ ದಂಡಕ್ಕೆ ರೋಸಿ ಹೋಗಿ ಬೈಕಿಗೆ ಬೆಂಕಿಯಿಟ್ಟ ಭೂಪ..!
ಈ ವರ್ಷದ ಜುಲೈನಲ್ಲಿ ಸಂಸತ್ತು ಮೋಟಾರು ವಾಹನಗಳ ತಿದ್ದುಪಡಿ ಕಾಯ್ದೆ 2019ನ್ನು ಅಂಗೀಕರಿಸಿತು. ಈ ಕಾಯ್ದೆಯಿಂದಾಗಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತದೆ. ಈ ಕಾಯ್ದೆಯನ್ನು ಸೆಪ್ಟೆಂಬರ್1 ರಿಂದ ಜಾರಿಗೆ ತರಲಾಗಿದೆ.
ಈ ದಂಡ ಪ್ರಮಾಣದ ಬಗ್ಗೆ ಅರಿವಿರದ ಜನ ನಿಯಮಗಳನ್ನು ಉಲ್ಲಂಘಿಸಿ ಸಂಚಾರಿ ಪೊಲೀಸರಿಗೆ ಸಿಕ್ಕಿ ಬೀಳುತ್ತಿದ್ದಾರೆ. ಸಿಕ್ಕಿ ಬಿದ್ದ ನಂತರ ಪೊಲೀಸರು ವಿಧಿಸುತ್ತಿರುವ ಭಾರೀ ಪ್ರಮಾಣದ ದಂಡವನ್ನು ಕಟ್ಟಲಾಗದೇ ಪರದಾಡುತ್ತಿದ್ದಾರೆ. ಇನ್ನು ವ್ಯಕ್ತಿಯೊಬ್ಬ ಈ ಭಾರೀ ಪ್ರಮಾಣದ ದಂಡಕ್ಕೆ ರೋಸಿ ಹೋಗಿ ತನ್ನ ಬೈಕಿಗೆ ಬೆಂಕಿ ಹಚ್ಚಿದ್ದಾನೆ.
ಹೌದು, ಭಾರೀ ಪ್ರಮಾಣದ ದಂಡ ವಿಧಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಬೈಕಿಗೆ ಬೆಂಕಿ ಇಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಮಾಳವಿಯಾ ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿ ಸಂಚಾರ ಪೊಲೀಸರು ರೂ.25,000ಗಳ ದಂಡ ವಿಧಿಸಿದ ಕಾರಣಕ್ಕೆ ಈ ವ್ಯಕ್ತಿ ತನ್ನ ಬೈಕಿಗೆ ಬೆಂಕಿ ಹಚ್ಚಿದ್ದಾನೆ.
ಪೊಲೀಸರ ಪ್ರಕಾರ, ತನ್ನ ಬೈಕ್ಗೆ ಬೆಂಕಿ ಹಚ್ಚಿದಾಗ ಆತ ಕುಡಿದಿದ್ದ. ಇದರ ಬಗ್ಗೆಯೂ ಆತನ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಸಂಚಾರಿ ಪೊಲೀಸರು ವ್ಯಕ್ತಿಯನ್ನು ತಡೆದು, ತಪಾಸಣೆ ನಡೆಸಿದ್ದಾರೆ. ತಪಾಸಣೆಯ ನಂತರ ಆ ವ್ಯಕ್ತಿಯು ಕುಡಿದಿರುವುದು ಪತ್ತೆಯಾಗಿದೆ.
ಕುಡಿದು ವಾಹನ ಚಲಾಯಿಸುವುದರ ಜೊತೆಗೆ ಆತ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ರೂ.25,000ಗಳ ದಂಡ ವಿಧಿಸಿ, ಆತನ ಬೈಕ್ ಅನ್ನು ವಶಕ್ಕೆ ಪಡೆಯುವ ವೇಳೆ ಮಾಳವಿಯಾ ನಗರದ ತ್ರಿವೇಣಿ ಕಾಂಪ್ಲೆಕ್ಸ್ ಬಳಿ ಬೈಕಿಗೆ ಬೆಂಕಿ ಹಚ್ಚಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ ವೈದಕೀಯ ತಪಾಸಣೆಗೆ ಒಳಪಡಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆಗಾಗಿ ಕೇಂದ್ರ ಸರ್ಕಾರವು ಭಾನುವಾರದಿಂದ ಪರಿಷ್ಕೃತ ದಂಡ ನಿಯಮಗಳನ್ನು ಜಾರಿಗೊಳಿಸಿದೆ. ಹೊಸ ನಿಯಮಗಳು ಜಾರಿಯಾದ ನಂತರ, ಭಾರೀ ಪ್ರಮಾಣದ ದಂಡ ವಿಧಿಸಿದ ಹಲವಾರು ಪ್ರಕರಣಗಳು ದೇಶಾದ್ಯಂತ ವರದಿಯಾಗಿವೆ.
ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಲ್ಲಿ ದಿನೇಶ್ ಮದನ್ ಎಂಬ ವ್ಯಕ್ತಿಯೊಬ್ಬರಿಗೆ ರೂ.24,000ಗಳ ದಂಡ ವಿಧಿಸಲಾಗಿದೆ. ಆದರೆ ಅವರ ಬಳಿಯಿದ್ದ ಸ್ಕೂಟರ್ ಅನ್ನು ಅವರು ರೂ.15,000 ನೀಡಿ ಖರೀದಿಸಿದ್ದರು. ಬೆಂಗಳೂರಿನಲ್ಲಿಯೂ ಸಹ ಕುಡಿದು ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ರೂ.17,000 ದಂಡ ವಿಧಿಸಲಾಗಿದೆ.
MOST READ: ಹೊಸ ನಿಯಮದಿಂದ ಟ್ರಾಕ್ಟರ್ ಡ್ರೈವರ್ಗೂ ಬಿತ್ತು ಭಾರೀ ದಂಡ..!
ಗುರುಗ್ರಾಮದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋರಿಕ್ಷಾ ಚಾಲಕನಿಗೆ ರೂ.32,500 ದಂಡ ವಿಧಿಸಲಾಗಿದೆ. ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಗುರುಗ್ರಾಮದ ಟ್ರ್ಯಾಕ್ಟರ್ ಚಾಲಕನಿಗೆ ರೂ.59,000 ದಂಡ ವಿಧಿಸಲಾಗಿದೆ.
MOST READ: ಸ್ಕೂಟರ್ ಬೆಲೆ 15,000, ದಂಡ ಬಿದ್ದಿದ್ದು 23,000..!
ಭುವನೇಶ್ವರದಲ್ಲಿ ಏಳು ದಿನಗಳ ಹಿಂದಷ್ಟೇ ಸೆಕೆಂಡ್ ಹ್ಯಾಂಡ್ ಆಟೋ ಖರೀದಿಸಿದ್ದ ಆಟೋ ಚಾಲಕನೊಬ್ಬ ಕುಡಿದು ವಾಹನ ಚಲಾಯಿಸಿದ ಕಾರಣಕ್ಕೆ ಹಾಗೂ ಹಲವು ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ರೂ.47,500 ದಂಡ ವಿಧಿಸಲಾಗಿದೆ. ಅಂದ ಹಾಗೆ ಈತ ರೂ.26,000 ನೀಡಿ ಸೆಕೆಂಡ್ ಹ್ಯಾಂಡ್ ಆಟೋ ಖರೀದಿಸಿದ್ದ.
MOST READ: ಹೊಸ ಟ್ರಾಫಿಕ್ ರೂಲ್ಸ್ ಎಫೆಕ್ಟ್: ಪೊಲೀಸಪ್ಪನಿಗೆ ಬಿತ್ತು ಭಾರೀ ದಂಡ..!
ಹೊಸ ಕಾಯ್ದೆಯನ್ವಯ ಕುಡಿದು ವಾಹನ ಚಲಾಯಿಸಿದರೆ ರೂ.10,000 ದಂಡ ವಿಧಿಸಲಾಗುವುದು. ಈ ಮೊದಲು ಕುಡಿದು ವಾಹನ ಚಲಾಯಿಸುವವರಿಗೆ ರೂ.2,000 ದಂಡ ವಿಧಿಸಲಾಗುತ್ತಿತ್ತು. ಹೆಲ್ಮೆಟ್ ಇಲ್ಲದೇ ಗಾಡಿ ಚಲಾಯಿಸಿದರೆ ರೂ.1,000 ದಂಡ ವಿಧಿಸುವುದರ ಜೊತೆಗೆ ಲೈಸೆನ್ಸ್ ಅನ್ನು 3 ತಿಂಗಳ ಕಾಲ ಅಮಾನತ್ತಿನಲ್ಲಿಡಲಾಗುವುದು.
ಹಿಂಬದಿ ಸವಾರನು ಹೆಲ್ಮೆಟ್ ಹೊಂದಿಲ್ಲದಿದ್ದರೂ ಸಹ ರೂ.1,000 ದಂಡ ವಿಧಿಸಲಾಗುತ್ತದೆ. ಕೆಲ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಈ ಮೊದಲು ರೂ.100 ದಂಡ ವಿಧಿಸಲಾಗುತ್ತಿತ್ತು. ಈಗ ಈ ಮೊತ್ತವನ್ನು ರೂ.500ಗಳಿಗೆ ಹೆಚ್ಚಿಸಲಾಗಿದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಸವಾರಿ ಮಾಡಿದರೆ ರೂ.5,000 ದಂಡ ವಿಧಿಸಲಾಗುತ್ತದೆ.
ಸಾರಿಗೆ ಸಚಿವ ನಿತಿನ್ ಗಡ್ಕರಿರವರು ಮಾತನಾಡಿ, ಭಾರೀ ಪ್ರಮಾಣದ ದಂಡ ವಿಧಿಸುತ್ತಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಭಾರೀ ಪ್ರಮಾಣದ ದಂಡವನ್ನು ಹಣ ಸಂಗ್ರಹಿಸಲು ವಿಧಿಸುತ್ತಿಲ್ಲ. ಬದಲಿಗೆ ಜನರು ಸಂಚಾರಿ ನಿಯಮಗಳನ್ನು ಉಲ್ಲಂಘಿಸದಂತೆ ಮಾಡುವ ಕಾರಣಕ್ಕೆ ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಜನರು ಕಾನೂನುಗಳನ್ನು ಪಾಲಿಸಿದರೆ ಯಾವುದೇ ದಂಡ ವಿಧಿಸಲಾಗುವುದಿಲ್ಲ ಎಂದು ಅವರು ಹೇಳಿದರು.