Just In
- 4 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 4 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 6 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 6 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Mrunal Thakur:"ಸರಿಯಾದ ಸಂಗಾತಿ ಸಿಗೋದು ಕಷ್ಟ; ಸೇಫ್ಟಿಗೆ ಅಂಡಾಣು ಶೇಖರಿಸಿ ಇಟ್ಕೊಳೋಣ ಅಂತಿದೀನಿ"
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇತ್ರಾವತಿ ನದಿಗೆ ಕಸ ಎಸೆದ ಮಹಿಳೆಯ ಕಾರು ವಶಕ್ಕೆ ಪಡೆದ ಮಂಗಳೂರು ಪೊಲೀಸರು
ಭಾರತದ ವಿವಿಧ ರಾಜ್ಯಗಳಲ್ಲಿ ನದಿಗಳಿಗೆ ಕಸ ಎಸೆಯಲಾಗುತ್ತದೆ. ಹೀಗೆ ಕಸ ಎಸೆಯುವುದು ಕಾನೂನುಬಾಹಿರ. ಆದರೂ ಕೆಲವರು ಕಸವನ್ನು ಎಸೆಯುತ್ತಲೇ ಇರುತ್ತಾರೆ. ಈಗ ಮಂಗಳೂರಿನಲ್ಲಿ ಮಹಿಳೆಯೊಬ್ಬರು ನದಿಗೆ ಕಸ ಎಸೆದು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಹಿಳೆ ನದಿಗೆ ಕಸ ಎಸೆಯುತ್ತಿರುವ ಘಟನೆಯ ವೀಡಿಯೊ ವೈರಲ್ ಆಗಿದೆ. ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಮೇಲೆ ಈ ಘಟನೆ ನಡೆದಿದೆ. ಈ ನದಿಯನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವೀಡಿಯೊದಲ್ಲಿ ಸೇತುವೆಯ ಮೇಲೆ ಹ್ಯುಂಡೈ ವೆರ್ನಾ ಕಾರು ನಿಂತಿರುವುದನ್ನು ಹಾಗೂ ಮಹಿಳೆ ನದಿಗೆ ಕಸ ಎಸೆಯುವುದನ್ನು ಕಾಣಬಹುದು.
ಈ ವೀಡಿಯೊದಲ್ಲಿ ಮತ್ತೊಬ್ಬ ಮಹಿಳೆ ಹ್ಯುಂಡೈ ವರ್ನಾ ಕಾರಿನಿಂದ ಹೊರಬರುತ್ತಾರೆ. ನದಿಗೆ ಕಸ ಎಸೆದ ನಂತರ ಅವರಿಬ್ಬರೂ ಅಲ್ಲಿಂದ ಹೊರಡುತ್ತಾರೆ. ಘಟನಾ ಸ್ಥಳದಲ್ಲಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು ಈ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.
MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು
ಅಪ್ ಲೋಡ್ ಆದ ಈ ವೀಡಿಯೊ ವೈರಲ್ ಆಗಿದೆ. ವೀಡಿಯೊ ವೈರಲ್ ಆದ ನಂತರ ಕಾರ್ಯಪ್ರವೃತ್ತರಾದ ಪೊಲೀಸರು ಹ್ಯುಂಡೈ ವೆರ್ನಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ವೀಡಿಯೊ ವೀಕ್ಷಿಸಿರುವ ಸಾರ್ವಜನಿಕರು ಮಹಿಳೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀಡಿಯೊದಲ್ಲಿ ಕಾರಿನ ನೋಂದಣಿ ಸಂಖ್ಯೆ ತುಂಬಾ ಸ್ಪಷ್ಟವಾಗಿ ಗೋಚರಿಸಿದ್ದರಿಂದ ಘಟನೆಯಲ್ಲಿ ಭಾಗಿಯಾಗಿದ್ದ ಮಹಿಳೆಯನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ.
MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್
ಮಹಿಳೆ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯಿಂದ ಮುಟ್ಟುಗೋಲು ಹಾಕಿಕೊಂಡ ಹ್ಯುಂಡೈ ವರ್ನಾ ಕಾರನ್ನು ಪೊಲೀಸ್ ಠಾಣೆಯಲ್ಲಿಡಲಾಗಿದೆ. ಈ ರೀತಿ ನದಿಗಳಲ್ಲಿ ಕಸ ಎಸೆಯುವುದು ಕಾನೂನು ಬಾಹಿರ.
ಇದರ ಜೊತೆಗೆ ಕೈಗಾರಿಕಾ ತ್ಯಾಜ್ಯವನ್ನು ಸಹ ನದಿಗೆ ಬಿಡಲಾಗುತ್ತದೆ. ಇದರಿಂದ ನದಿಗಳು ಮತ್ತಷ್ಟು ಕಲುಷಿತಗೊಳ್ಳುತ್ತವೆ. ಆ ನದಿಗಳ ನೀರನ್ನು ಕುಡಿಯುವವರಿಗೆ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.
MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು
ಭಾರತವು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಕಲುಷಿತ ನದಿಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳು ನದಿಗಳಲ್ಲಿ ಕಸ ಎಸೆಯುವುದನ್ನು ನಿಷೇಧಿಸಿವೆ. ಭಾರತದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಗಳ ಮೇಲೆ ಎತ್ತರದ ಬೇಲಿಗಳನ್ನು ನಿರ್ಮಿಸಲಾಗಿರುತ್ತದೆ.
ಜನರು ನದಿಗಳಿಗೆ ಕಸ ಎಸೆಯದಂತೆ ತಡೆಯುವುದು ಈ ಬೇಲಿಗಳನ್ನು ನಿರ್ಮಿಸುವುದರ ಹಿಂದಿನ ಉದ್ದೇಶವಾಗಿದೆ. ಆದರೂ ಜನರು ಇವುಗಳಿಗೆ ಪರ್ಯಾಯ ದಾರಿಗಳನ್ನು ಕಂಡುಕೊಂಡು ನದಿಗಳಲ್ಲಿ ಕಸವನ್ನು ಎಸೆಯುತ್ತಲೇ ಇದ್ದಾರೆ.
MOST READ:ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ
ಜನರು ನದಿಯನ್ನು ಕಲುಷಿತಗೊಳಿಸುತ್ತಿರುವುದು ಕಂಡುಬಂದರೆ, ಅಧಿಕಾರಿಗಳು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ. ಜನರು ಇವುಗಳನ್ನು ಅರಿತುಕೊಂಡರೆ ಪ್ರಕೃತಿಯನ್ನು ರಕ್ಷಿಸಬಹುದು.