Just In
- 1 hr ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 4 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 4 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 5 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ನಡುವೆಯೂ ಎದುರಾಯ್ತು ಸಂಚಾರ ದಟ್ಟಣೆ
ಸದ್ಯ ಇಡೀ ಜಗತ್ತಿನ ಮುಂದಿರುವ ಏಕೈಕ ದೊಡ್ಡ ಸವಾಲು ಮಾರಣಾಂತಿಕ ಕರೋನಾ ವೈರಸ್ನ ನಿಯಂತ್ರಣ. ಕರೋನಾ ವೈರಸ್ ಕಪಿಮುಷ್ಟಿಯಿಂದ ಹೊರ ಬರಲು ಸಾಧ್ಯವಾಗದೇ ಪ್ರಪಂಚದ ಬಹುತೇಕ ದೇಶಗಳು ತತ್ತರಿಸಿ ಹೋಗಿವೆ. ಇವುಗಳಲ್ಲಿ ಸಣ್ಣ ದೇಶಗಳಿಂದ ಬಲಿಷ್ಠ ರಾಷ್ಟ್ರಗಳು ಸೇರಿವೆ.
ಸೂಪರ್ ಪವರ್ ರಾಷ್ಟ್ರಗಳು ಮಾತ್ರವಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದ ದೇಶಗಳೂ ಸಹ ಈ ವೈರಸ್ನಿಂದ ಹಾನಿಗೀಡಾಗಿವೆ. ಫ್ರಾನ್ಸ್ ಹಾಗೂ ಇಟಲಿ ದೇಶಗಳು ಇದಕ್ಕೆ ಸೂಕ್ತ ಉದಾಹರಣೆಯಾಗಿವೆ. ಆರಂಭದಲ್ಲಿ ನೂರರ ಸಂಖ್ಯೆಯಲ್ಲಿದ್ದ ಭಾರತದಲ್ಲಿ ಈಗ ಸೋಂಕಿತರ ಪ್ರಮಾಣ 19,000ದ ಗಡಿ ದಾಟಿದೆ.
ಇದುವರೆಗೆ 590 ಜನರು ಸಾವನ್ನಪ್ಪಿದ್ದಾರೆ. ವೈರಸ್ ಹರಡದಂತೆ ತಡೆಯುವ ಉದ್ದೇಶದಿಂದ ಲಾಕ್ಡೌನ್ ಅನ್ನು ವಿಸ್ತರಿಸಲಾಗಿದೆ. 2ನೇ ಹಂತದ ಲಾಕ್ಡೌನ್ ಮೇ 3ರವರೆಗೆ ಜಾರಿಯಲ್ಲಿರಲಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಈ ಲಾಕ್ಡೌನ್ ಅನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆಗಳಿವೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣ. ಸೋಂಕಿತರ ಸಂಖ್ಯೆ ಹೆಚ್ಚಲು ಜನರ ಅಸಹಕಾರವೂ ಸಹ ಕಾರಣವಾಗಿದೆ.
ಅಗತ್ಯವಿರುವವರು ಮಾತ್ರ ಹೊರಬರುವಂತೆ ಸೂಚಿಸಿದ್ದರೂ ಜನ ವಿನಾಕಾರಣ ರಸ್ತೆಗಿಳಿದು ವೈರಸ್ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತಿದ್ದಾರೆ. ಕಳೆದ ಭಾನುವಾರ ರಾಜಧಾನಿ ದೆಹಲಿಯಲ್ಲಿ ಸಂಚಾರ ದಟ್ಟಣೆಯು ವಿಪರೀತವಾಗಿ ಹೆಚ್ಚಾಗಿತ್ತು. ಈ ಬಗ್ಗೆ ಕೆಲವರು ಟ್ವೀಟ್ ಮಾಡಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಭಾರತದ ಒಟ್ಟು ಜನಸಂಖ್ಯೆಯ 2%ನಷ್ಟು ಜನರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ದೇಶದ 12%ನಷ್ಟು ಕರೋನಾ ಸೋಂಕಿತರು ದೆಹಲಿಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಮುನ್ನೆಚ್ಚರಿಕೆಯಿಲ್ಲದೇ ವರ್ತಿಸುವುದು ಆಘಾತಕಾರಿ. ಈ ವಾಹನ ದಟ್ಟಣೆ ಉಂಟಾಗಿರುವುದು ಪೊಲೀಸರ ತಪಾಸಣೆಯ ಸಂದರ್ಭದಲ್ಲಿ.
ಈ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದೆ. ಕಳೆದ ಭಾನುವಾರ ಒಂದೇ ದಿನ ದೆಹಲಿಯಲ್ಲಿ 110 ಜನರಿಗೆ ಕರೋನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಇದರಿಂದಾಗಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ 2003ಕ್ಕೆ ಏರಿಯಾಗಿದೆ. ಈ ವೈರಸ್ಗೆ ದೆಹಲಿಯಲ್ಲಿ 45 ಜನರು ಬಲಿಯಾಗಿದ್ದಾರೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಕೆಲವು ತಜ್ಞರು ಮುಂದಿನ ದಿನಗಳಲ್ಲಿ ಕರೋನಾದ ಪರಿಣಾಮವು ಮತ್ತಷ್ಟು ಗಂಭೀರವಾಗಿರಲಿದೆ ಎಂದು ಹೇಳಿದ್ದಾರೆ. ಆದರೂ ಜನ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಸುತ್ತಾಡುತ್ತಿರುವುದು ಗಾಬರಿಗೊಳಿಸುವಂತಿದೆ.
ಈ ಸಂಚಾರ ದಟ್ಟಣೆಯಲ್ಲಿ ವೈದ್ಯರು ಅಥವಾ ಆರೋಗ್ಯ ಕಾರ್ಯಕರ್ತರು ಸಿಕ್ಕಿಬಿದ್ದರೆ ಕರೋನಾ ಸೋಂಕಿತರ ಗತಿ ಏನು ಎಂಬುದು ಸಾಮಾಜಿಕ ಕಾರ್ಯಕರ್ತರ ಪ್ರಶ್ನೆ. ದೇಶದ ಬಹುತೇಕ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಪೊಲೀಸರು ಕೈಚೆಲ್ಲಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ.