Just In
- 9 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 10 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 12 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 12 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು
ಕರೋನಾ ವೈರಸ್ನಿಂದ ಇಡೀ ಜಗತ್ತು ತತ್ತರಿಸುತ್ತಿದೆ. ಇದರಿಂದ ಭಾರತವು ಹೊರತಾಗಿಲ್ಲ. ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳು ಕರೋನಾ ವೈರಸ್ನಿಂದ ಹೆಚ್ಚು ತತ್ತರಿಸಿವೆ.
ಕರೋನಾ ವೈರಸ್ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸಂಕಷ್ಟಕ್ಕೆ ದೂಡಿದೆ. ಕರೋನಾ ವೈರಸ್ ಹರಡದಂತೆ ತಡೆಯಲು ಲಾಕ್ಡೌನ್ ಜಾರಿಗೊಳಿಸಲಾಯಿತು. ಈ ಲಾಕ್ಡೌನ್ನಿಂದಾಗಿ ಲಕ್ಷಾಂತರ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಇರುವಂತಾಯಿತು.
ಈ ಕಾರಣದಿಂದಾಗಿ ಅವರು ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಸಾರ್ವಜನಿಕ ಸಾರಿಗೆ ಸೇವೆಗಳಿಲ್ಲದ ಕಾರಣಕ್ಕೆ ಕಾಲ್ನಡಿಗೆ ಹಾಗೂ ಸೈಕಲ್ಗಳಲ್ಲಿ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಬೇಸಿಗೆಯ ಉರಿ ಬಿಸಿಲಿನಲ್ಲೂ ಸಾವಿರಾರು ಕಿಲೋಮೀಟರ್ ನಡೆದು ಕೊಂಡೇ ಇಲ್ಲವೇ ಸೈಕಲ್ ಮೂಲಕ ತಮ್ಮ ತಮ್ಮ ಮನೆಗಳನ್ನು ತಲುಪುತ್ತಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಕುಸಿದಿರುವ ಆರ್ಥಿಕ ವ್ಯವಸ್ಥೆಯನ್ನು ಸರಿದಾರಿಗೆ ತರಲು ಲಾಕ್ಡೌನ್ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಇದರಿಂದಾಗಿ ಬಸ್, ಆಟೋ ಹಾಗೂ ಟ್ಯಾಕ್ಸಿ ಸೇವೆಗಳನ್ನು ಪುನರಾರಂಭಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ಬಸ್ಸುಗಳು ಸಂಚರಿಸುತ್ತಿದ್ದರೆ, ಇನ್ನೂ ಕೆಲವು ರಾಜ್ಯಗಳಲ್ಲಿ ಸಂಚರಿಸುತ್ತಿಲ್ಲ.
ಮತ್ತೊಂದೆಡೆ ಹೊರ ರಾಜ್ಯದ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ವಾಪಸ್ ಕಳುಹಿಸಲು ವಿಶೇಷ ರೈಲುಗಳ ಏರ್ಪಾಡು ಮಾಡಲಾಗಿದೆ. ಪ್ರಯಾಣದ ಶುಲ್ಕವನ್ನು ಭರಿಸಲಾಗದ ಕೆಲವರು ಕಾಲ್ನಡಿಗೆ ಹಾಗೂ ಸೈಕಲ್ ಮೂಲಕವೇ ವಾಪಸಾಗುತ್ತಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕಾಲ್ನಡಿಗೆ ಹಾಗೂ ಸೈಕಲ್ ಮೂಲಕ ತೆರಳುತ್ತಿರುವ ವಲಸೆ ಕಾರ್ಮಿಕರು ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತ್ತಿದ್ದಾರೆ. ಈ ರೀತಿಯ ಪ್ರಯಾಣದಲ್ಲಿ ವಲಸೆ ಕಾರ್ಮಿಕರು ರಸ್ತೆ ಅಪಘಾತಗಳಿಗೆ ಸಿಲುಕುವ ಸಾಧ್ಯತೆಗಳಿರುತ್ತವೆ.
ಮಾರ್ಚ್ 24ರಂದು ಲಾಕ್ಡೌನ್ ಜಾರಿಗೆ ಬಂದ ನಂತರ ಈ ರೀತಿ ತಮ್ಮ ಊರುಗಳಿಗೆ ವಾಪಸಾಗುತ್ತಿದ್ದ 196 ಕಾರ್ಮಿಕರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಸೇವ್ಲೈಫ್ ಫೌಂಡೇಶನ್ ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬಹಿರಂಗವಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಈ ಅವಧಿಯಲ್ಲಿ ಸಂಭವಿಸಿದ 1,346 ರಸ್ತೆ ಅಪಘಾತಗಳಲ್ಲಿ ಒಟ್ಟು 601 ಜನರು ಸಾವನ್ನಪ್ಪಿದ್ದರೆ, ಗಾಯಗೊಂಡ ಬಹುತೇಕ ಜನರು ವಲಸೆ ಕಾರ್ಮಿಕರು ಎಂಬುದು ಗಮನಾರ್ಹ. ಭಾರತದ ರಸ್ತೆಗಳು ವಿಶ್ವದ ಅತ್ಯಂತ ಅಪಾಯಕಾರಿ ರಸ್ತೆಗಳು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.
ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಪ್ರತಿ ವರ್ಷ 1.50 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಲಾಕ್ಡೌನ್ ಅವಧಿಯಲ್ಲೂ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಲಾಕ್ಡೌನ್ ಅವಧಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಈ ಕಾರಣಕ್ಕೆ ಕೆಲವರು ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಿದ್ದೇ ಅಪಘಾತಗಳಿಗೆ ಪ್ರಮುಖ ಕಾರಣವಾಯಿತು.