ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಕರೋನಾ ವೈರಸ್‌ನಿಂದ ಇಡೀ ಜಗತ್ತು ತತ್ತರಿಸುತ್ತಿದೆ. ಇದರಿಂದ ಭಾರತವು ಹೊರತಾಗಿಲ್ಲ. ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳು ಕರೋನಾ ವೈರಸ್‌ನಿಂದ ಹೆಚ್ಚು ತತ್ತರಿಸಿವೆ.

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಕರೋನಾ ವೈರಸ್ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸಂಕಷ್ಟಕ್ಕೆ ದೂಡಿದೆ. ಕರೋನಾ ವೈರಸ್ ಹರಡದಂತೆ ತಡೆಯಲು ಲಾಕ್‌ಡೌನ್ ಜಾರಿಗೊಳಿಸಲಾಯಿತು. ಈ ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಇರುವಂತಾಯಿತು.

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಈ ಕಾರಣದಿಂದಾಗಿ ಅವರು ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಸಾರ್ವಜನಿಕ ಸಾರಿಗೆ ಸೇವೆಗಳಿಲ್ಲದ ಕಾರಣಕ್ಕೆ ಕಾಲ್ನಡಿಗೆ ಹಾಗೂ ಸೈಕಲ್‌ಗಳಲ್ಲಿ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಬೇಸಿಗೆಯ ಉರಿ ಬಿಸಿಲಿನಲ್ಲೂ ಸಾವಿರಾರು ಕಿಲೋಮೀಟರ್ ನಡೆದು ಕೊಂಡೇ ಇಲ್ಲವೇ ಸೈಕಲ್ ಮೂಲಕ ತಮ್ಮ ತಮ್ಮ ಮನೆಗಳನ್ನು ತಲುಪುತ್ತಿದ್ದಾರೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಕುಸಿದಿರುವ ಆರ್ಥಿಕ ವ್ಯವಸ್ಥೆಯನ್ನು ಸರಿದಾರಿಗೆ ತರಲು ಲಾಕ್‌ಡೌನ್‌ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಇದರಿಂದಾಗಿ ಬಸ್‌, ಆಟೋ ಹಾಗೂ ಟ್ಯಾಕ್ಸಿ ಸೇವೆಗಳನ್ನು ಪುನರಾರಂಭಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ಬಸ್ಸುಗಳು ಸಂಚರಿಸುತ್ತಿದ್ದರೆ, ಇನ್ನೂ ಕೆಲವು ರಾಜ್ಯಗಳಲ್ಲಿ ಸಂಚರಿಸುತ್ತಿಲ್ಲ.

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಮತ್ತೊಂದೆಡೆ ಹೊರ ರಾಜ್ಯದ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ವಾಪಸ್ ಕಳುಹಿಸಲು ವಿಶೇಷ ರೈಲುಗಳ ಏರ್ಪಾಡು ಮಾಡಲಾಗಿದೆ. ಪ್ರಯಾಣದ ಶುಲ್ಕವನ್ನು ಭರಿಸಲಾಗದ ಕೆಲವರು ಕಾಲ್ನಡಿಗೆ ಹಾಗೂ ಸೈಕಲ್ ಮೂಲಕವೇ ವಾಪಸಾಗುತ್ತಿದ್ದಾರೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಕಾಲ್ನಡಿಗೆ ಹಾಗೂ ಸೈಕಲ್ ಮೂಲಕ ತೆರಳುತ್ತಿರುವ ವಲಸೆ ಕಾರ್ಮಿಕರು ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತ್ತಿದ್ದಾರೆ. ಈ ರೀತಿಯ ಪ್ರಯಾಣದಲ್ಲಿ ವಲಸೆ ಕಾರ್ಮಿಕರು ರಸ್ತೆ ಅಪಘಾತಗಳಿಗೆ ಸಿಲುಕುವ ಸಾಧ್ಯತೆಗಳಿರುತ್ತವೆ.

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಮಾರ್ಚ್ 24ರಂದು ಲಾಕ್‌ಡೌನ್ ಜಾರಿಗೆ ಬಂದ ನಂತರ ಈ ರೀತಿ ತಮ್ಮ ಊರುಗಳಿಗೆ ವಾಪಸಾಗುತ್ತಿದ್ದ 196 ಕಾರ್ಮಿಕರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಸೇವ್‌ಲೈಫ್ ಫೌಂಡೇಶನ್ ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬಹಿರಂಗವಾಗಿದೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಈ ಅವಧಿಯಲ್ಲಿ ಸಂಭವಿಸಿದ 1,346 ರಸ್ತೆ ಅಪಘಾತಗಳಲ್ಲಿ ಒಟ್ಟು 601 ಜನರು ಸಾವನ್ನಪ್ಪಿದ್ದರೆ, ಗಾಯಗೊಂಡ ಬಹುತೇಕ ಜನರು ವಲಸೆ ಕಾರ್ಮಿಕರು ಎಂಬುದು ಗಮನಾರ್ಹ. ಭಾರತದ ರಸ್ತೆಗಳು ವಿಶ್ವದ ಅತ್ಯಂತ ಅಪಾಯಕಾರಿ ರಸ್ತೆಗಳು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಪ್ರತಿ ವರ್ಷ 1.50 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಲಾಕ್‌ಡೌನ್ ಅವಧಿಯಲ್ಲೂ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತಿರುವ ವಲಸೆ ಕಾರ್ಮಿಕರು

ಲಾಕ್‌ಡೌನ್ ಅವಧಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಈ ಕಾರಣಕ್ಕೆ ಕೆಲವರು ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಿದ್ದೇ ಅಪಘಾತಗಳಿಗೆ ಪ್ರಮುಖ ಕಾರಣವಾಯಿತು.

Most Read Articles

Kannada
English summary
Migrant Workers travelling home during lockdown detailed report by savelife foundation. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X