Just In
- 4 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 6 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 7 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೋಗಿ ಬದಲು ಹೆಣ್ಣುಮಕ್ಕಳನ್ನು ಆಂಬುಲೆನ್ಸ್ನಲ್ಲಿ ಕೂರಿಸಿಕೊಂಡು ಬೆಂಗಳೂರು ಸುತ್ತಿದ ಭೂಪ !! ವಿಡಿಯೋ ನೋಡಿ
ನಮಗೆಲ್ಲರಿಗೂ ತಿಳಿದಿರುವಂತೆ ಆಂಬುಲೆನ್ಸ್ ಜೀವರಕ್ಷಕವಾಗಿ ಎಷ್ಟೋ ಮಂದಿ ಜನರ ಜೀವ ಉಳಿಸಿದೆ, ಆದ್ರೆ ಇಂತಹ ಆಂಬುಲೆನ್ಸ್ ಇಂದು ಮುಖ್ಯ ಉದ್ದೇಶ ಬಿಟ್ಟು ಬೇರೆಲ್ಲಾ ಕೆಲಸಗಳಿಗೆ ಉಪಯೋಗವಾಗುತ್ತಿರುವುದು ವಿಪರ್ಯಾಸ ಎನ್ನಬಹುದು.
ನಮಗೆಲ್ಲರಿಗೂ ತಿಳಿದಿರುವಂತೆ ಆಂಬುಲೆನ್ಸ್ ಜೀವರಕ್ಷಕವಾಗಿ ಎಷ್ಟೋ ಮಂದಿ ಜನರ ಜೀವ ಉಳಿಸಿದೆ, ಆದ್ರೆ ಇಂತಹ ಆಂಬುಲೆನ್ಸ್ ಇಂದು ಮುಖ್ಯ ಉದ್ದೇಶ ಬಿಟ್ಟು ಬೇರೆಲ್ಲಾ ಕೆಲಸಗಳಿಗೆ ಉಪಯೋಗವಾಗುತ್ತಿರುವುದು ವಿಪರ್ಯಾಸ ಎನ್ನಬಹುದು.
ಹೌದು, ಅಂಬುಲೆನ್ಸ್ನ ಸೈರನ್ ಕೇಳಿಸಿದ ತಕ್ಷಣ ನಾವೆಲ್ಲರೂ ನಮ್ಮ ರಸ್ತೆಯನ್ನು ಬಿಟ್ಟು ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಅನುಕೂಲ ಮಾಡಿಕೊಡುತ್ತೇವೆ, ಇದು ಸರ್ವೇಸಾಮಾನ್ಯವಾದ ಸಂಗತಿ. ಆದರೆ ಮುಂಬರುವ ದಿನಗಳಲ್ಲಿ ಆಂಬುಲೆನ್ಸ್ ಅನ್ನು ಅನುಮಾನದಿಂದ ನೋಡುವ ಪರಿಸ್ಥಿತಿ ಬಂದೊದಗಿದೆ.
ಕರ್ನಾಟಕ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ ಮತ್ತೊಂದು ಆ್ಯಂಬುಲೆನ್ಸ್ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಈ ದುರ್ಬಳಕೆ ಪ್ರಕರಣದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಹೆಚ್ಚು ಸದ್ದು ಮಾಡುತ್ತಿದೆ.
ಸಾರ್ವಜನಿಕರ ಸಹಾನೂಭೂತಿಯನ್ನೇ ದುರುಪಯೋಗ ಪಡಿಸಿಕೊಂಡ ಕುಮಾರ್ ಹಾಸ್ಪಿಟಲ್ ಸಂಸ್ಥೆಗೆ ಸೇರಿದ ಆಂಬುಲೆನ್ಸ್ನ ಚಾಲಕನೊಬ್ಬನ ವಿರುದ್ಧ ಟ್ರಾಫಿಕ್ ಪೊಲೀಸರು ಕೆಂಡಾಮಂಡಲವಾದ ಘಟನೆ ಗುರುವಾರ ಮಲ್ಲೇಶ್ವರಂನಲ್ಲಿ ನಡೆದಿದೆ.
ಮಲ್ಲೇಶ್ವರಂನ ಕುಮಾರ್ ಖಾಸಗಿ ಸಂಸ್ಥೆಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ಪರೀಕ್ಷೆ ಬರೆಯಲು ಹೊರಟಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಕೂರಿಸಿಕೊಂಡ ಆ್ಯಂಬುಲೆನ್ಸ್ ಚಾಲಕ ಸೈರನ್ ಹಾಕಿಕೊಂಡು ಪರೀಕ್ಷಾ ಕೇಂದ್ರದ ಕಡೆ ಸಂಚರಿಸುತ್ತಿದ್ದ ಎನ್ನಲಾಗಿದೆ.
ಹೆಚ್ಚು ಸದ್ದು ಮಾಡುವ ಸೈರನ್ ಹಾಕಿಕೊಂಡು ಬರುತ್ತಿದ್ದ ಆಂಬುಲೆನ್ಸ್ನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಇರುವುದು ಕಂಡು ಟ್ರಾಫಿಕ್ ಪೊಲೀಸರು ಪರಿಶೀಲನೆ ಮಾಡಿದಾದ ನಿಜ ಸಂಗತಿ ಹೊರಬಂದಿದೆ. ಈ ವೇಳೆ, ರೋಗಿ ಇಲ್ಲದೇ ಇದ್ದರೂ ಸೈರನ್ ಯಾಕೆ ಹಾಕುತ್ತಿದ್ದೀಯಾ? ಎಂದು ಸಾರ್ವಜನಿರಕ ಸಮ್ಮುಖದಲ್ಲೇ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು, ಚಾಲಕನಿಗೆ 'ಎನೋ ಹುಡ್ಗೀರ್ನಾ ಕರ್ಕೊಂಡ್ ಹೋಗ್ಲಿಕ್ಕೆ ನಿನ್ಗೆ ಸೈರನ್ ಬೇಕಲ್ಲಾ...ಇನ್ನೆಲ್ಲಾದ್ರೂ ಹಿಂಗ್ ಮಾಡಿದ್ರೆ ಜೈಲ್ಗೇ ಕಳುಹಿಸ್ತೀನಿ ಹುಷಾರ್..' ಎಂದು ಎಚ್ಚರಿಕೆ ನೀಡಿದರು.
ನಂತರ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರೂ ಸಹ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.