ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಇತ್ತೀಚೆಗೆ ಪ್ರಕೃತಿಯು ತುಸು ಜಾಸ್ತಿ ಎನಿಸುವಷ್ಟು ಮುನಿಸನ್ನು ಮಾನವನ ಮೇಲೆ ತೋರಿಸುತ್ತಿದೆ. ಒಂದೆಡೆ ಕರೋನಾ ವೈರಸ್‌ನಿಂದ ಇಡೀ ಜಗತ್ತು ತತ್ತರಿಸುತ್ತಿದ್ದರೆ, ಮತ್ತೊಂದೆಡೆ ಚಂಡಮಾರುತಗಳು ಜನಜೀವನವನ್ನು ಅಲ್ಲೋಲ ಕಲ್ಲೋಲ ಮಾಡಿವೆ.

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಇದರ ಜೊತೆಗೆ ಮರುಭೂಮಿ ಮಿಡತೆಗಳು ಉತ್ತರ ಭಾರತದ ಕೃಷಿ ಭೂಮಿಯ ಮೇಲೆ ದಾಳಿ ಮಾಡುತ್ತಿವೆ. ಇತ್ತೀಚೆಗೆ, ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳ, ಓಡಿಶಾ ಸೇರಿದಂತೆ ಹಲವು ರಾಜ್ಯಗಳನ್ನು ಅಪ್ಪಳಿಸಿತ್ತು. ಈ ಚಂಡಮಾರುತದಿಂದ ಸಾವಿರಾರು ಮರಗಳು ಧರೆಗುರುಳಿದರೆ, ಸಾವಿರಾರು ಮಂದಿ ನಿರಾಶ್ರಿತರಾಗಬೇಕಾಯಿತು. ಇಷ್ಟಕ್ಕೆ ಸುಮ್ಮನಾಗದ ಪ್ರಕೃತಿ ನಿಸರ್ಗ ಚಂಡಮಾರುತದ ರೂಪದಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಅಪ್ಪಳಿಸಿದೆ.

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಚಂಡಮಾರುತವು ಈಗಷ್ಟೇ ಶುರುವಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರನ್ನು ಸುರಕ್ಷಿತವಾಗಿಡಲು ಕ್ರಮಗಳನ್ನು ಕೈಗೊಳ್ಳುತ್ತಿವೆ. ಚಂಡಮಾರುತವು ತೀರಕ್ಕೆ ಅಪ್ಪಳಿಸುವ ಸಂದರ್ಭದಲ್ಲಿ ಮನೆಯಲ್ಲಿಯೇ ಉಳಿಯುವಂತೆ ಜನರಿಗೆ ಸೂಚಿಸಲಾಗಿದೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ತುರ್ತು ಕಾರಣಗಳಿಂದಾಗಿ ಹೊರಹೋಗಬೇಕಾದರೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ, ಮುಂಬೈ ಪುರಸಭೆಯು ಕಾರು ಮಾಲೀಕರಿಗೆ ಕಾರುಗಳಲ್ಲಿ ಸುತ್ತಿಗೆಗಳನ್ನು ಕೊಂಡೊಯ್ಯುವಂತೆ ಹೇಳಿದೆ. ಜನರು ತಮ್ಮ ಸುರಕ್ಷತೆಯನ್ನು ಸುತ್ತಿಗೆಗಳನ್ನು ಜೊತೆಯಲ್ಲಿ ಒಯ್ಯುವಂತೆ ಸೂಚಿಸಲಾಗಿದೆ.

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಮುಂಬೈ ಪುರಸಭೆ ಈ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟರ್ ಪೇಜ್‌ನಲ್ಲಿ ಪ್ರಕಟಿಸಿದೆ. ಯಾವ ಕಾರಣಕ್ಕೆ ಮುಂಬೈ ಪುರಸಭೆ ಕಾರಿನಲ್ಲಿ ಸುತ್ತಿಗೆಯನ್ನು ಕೊಂಡೊಯ್ಯುವಂತೆ ಸಲಹೆ ನೀಡಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಚಂಡಮಾರುತವು ಅಪ್ಪಳಿಸಿದಾಗ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸಬಹುದು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಚಂಡಮಾರುತದಿಂದಾಗಿ ಪ್ರವಾಹ ಪರಿಸ್ಥಿತಿ ಉದ್ಭವಿಸುತ್ತದೆ. ಜೊತೆಗೆ ಮರಗಳು ಧರೆಗುರುಳುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಸಿಕ್ಕಿಬಿದ್ದಾಗ ಸುತ್ತಿಗೆ ಜೊತೆಯಲ್ಲಿದ್ದರೆ ಕಾರಿನ ವಿಂಡೋಗಳನ್ನು ಒಡೆದು ಹೊರಬರಲು ಅನುಕೂಲವಾಗುತ್ತದೆ. ಈ ಕಾರಣಕ್ಕೆ ಮುಂಬೈ ಪುರಸಭೆ ಇಂತಹ ಪ್ರಕಟನೆಯನ್ನು ಹೊರಡಿಸಿದೆ.

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಈ ಹಿಂದೆ, ಸಾಮಾಜಿಕ ಜಾಲತಾಣದ ಮೂಲಕ ಜನರನ್ನು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿತ್ತು. ಮುಂಬೈನಂತಹ ಮಹಾನಗರದಲ್ಲಿ ಜನರು ಮನೆಯಲ್ಲಿಯೇ ಇರುವುದು ಸಾಧ್ಯವಿಲ್ಲ ಎಂಬುದನ್ನು ಮನಗಂಡ ಪುರಸಭೆಯು ಸುತ್ತಿಗೆಯನ್ನು ಜೊತೆಯಲ್ಲಿ ಒಯ್ಯುವಂತೆ ಸೂಚಿಸಿದೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ಸುತ್ತಿಗೆಗಳನ್ನು ಕಾರಿನಲ್ಲಿ ಸುರಕ್ಷಿತ ಸ್ಥಳದಲ್ಲಿ, ತಕ್ಷಣಕ್ಕೆ ಕೈಗೆ ಸಿಗುವಂತಹ ಸ್ಥಳದಲ್ಲಿ ಇಡಬೇಕು ಎಂದೂ ಮುಂಬೈ ಪುರಸಭೆ ಹೇಳಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಮುಂಬೈ ಹೆಚ್ಚಿನ ಹಾನಿಯನ್ನು ಅನುಭವಿಸುತ್ತಿದೆ. ಈ ಹಿಂದಿನ ಘಟನೆಗಳಿಂದ ಎಚ್ಚೆತ್ತಿರುವ ಮುಂಬೈ ಪುರಸಭೆ ಕಾರಿನಲ್ಲಿ ಸುರಕ್ಷತಾ ಸಾಧನಗಳನ್ನು ಒಯ್ಯುವಂತೆ ಸೂಚಿಸಿದೆ.

ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ

ನೀರು ಕಾರಿನೊಳಗೆ ಪ್ರವೇಶಿಸಿದಾಗ ಎಲೆಕ್ಟ್ರಾನಿಕ್ ಅಪಘಾತಕ್ಕೀಡಾಗುವ ಸಾಧ್ಯತೆಗಳಿರುತ್ತವೆ. ಇಂತಹ ಸಂದರ್ಭಗಳಲ್ಲಿ ಕಾರನ್ನು ಸ್ಟಾರ್ಟ್ ಮಾಡುವುದಕ್ಕೆ ಅಥವಾ ಡೋರ್‌ಗಳನ್ನು ತೆರೆಯುವುದಕ್ಕೆ ಕಷ್ಟವಾಗುತ್ತದೆ. ಕಾರಿನಲ್ಲಿ ಸುತ್ತಿಗೆಯಂತಹ ವಸ್ತುಗಳಿದ್ದರೆ ಡೋರ್‌ಗಳನ್ನು ಒಡೆದು ಹೊರ ಬರಲು ಅನುಕೂಲವಾಗುತ್ತದೆ.

Article Published On: Thursday, June 4, 2020, 10:21 [IST]
English summary
Mumbai city municipal authorities requests motorists to keep hammer in cars. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+