Just In
- 23 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 1 hr ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 1 hr ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 2 hrs ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಸರ್ಗ ಚಂಡಮಾರುತ ಎಫೆಕ್ಟ್: ಕಾರುಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ ಪುರಸಭೆ
ಇತ್ತೀಚೆಗೆ ಪ್ರಕೃತಿಯು ತುಸು ಜಾಸ್ತಿ ಎನಿಸುವಷ್ಟು ಮುನಿಸನ್ನು ಮಾನವನ ಮೇಲೆ ತೋರಿಸುತ್ತಿದೆ. ಒಂದೆಡೆ ಕರೋನಾ ವೈರಸ್ನಿಂದ ಇಡೀ ಜಗತ್ತು ತತ್ತರಿಸುತ್ತಿದ್ದರೆ, ಮತ್ತೊಂದೆಡೆ ಚಂಡಮಾರುತಗಳು ಜನಜೀವನವನ್ನು ಅಲ್ಲೋಲ ಕಲ್ಲೋಲ ಮಾಡಿವೆ.
ಇದರ ಜೊತೆಗೆ ಮರುಭೂಮಿ ಮಿಡತೆಗಳು ಉತ್ತರ ಭಾರತದ ಕೃಷಿ ಭೂಮಿಯ ಮೇಲೆ ದಾಳಿ ಮಾಡುತ್ತಿವೆ. ಇತ್ತೀಚೆಗೆ, ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳ, ಓಡಿಶಾ ಸೇರಿದಂತೆ ಹಲವು ರಾಜ್ಯಗಳನ್ನು ಅಪ್ಪಳಿಸಿತ್ತು. ಈ ಚಂಡಮಾರುತದಿಂದ ಸಾವಿರಾರು ಮರಗಳು ಧರೆಗುರುಳಿದರೆ, ಸಾವಿರಾರು ಮಂದಿ ನಿರಾಶ್ರಿತರಾಗಬೇಕಾಯಿತು. ಇಷ್ಟಕ್ಕೆ ಸುಮ್ಮನಾಗದ ಪ್ರಕೃತಿ ನಿಸರ್ಗ ಚಂಡಮಾರುತದ ರೂಪದಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಅಪ್ಪಳಿಸಿದೆ.
ಚಂಡಮಾರುತವು ಈಗಷ್ಟೇ ಶುರುವಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರನ್ನು ಸುರಕ್ಷಿತವಾಗಿಡಲು ಕ್ರಮಗಳನ್ನು ಕೈಗೊಳ್ಳುತ್ತಿವೆ. ಚಂಡಮಾರುತವು ತೀರಕ್ಕೆ ಅಪ್ಪಳಿಸುವ ಸಂದರ್ಭದಲ್ಲಿ ಮನೆಯಲ್ಲಿಯೇ ಉಳಿಯುವಂತೆ ಜನರಿಗೆ ಸೂಚಿಸಲಾಗಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ತುರ್ತು ಕಾರಣಗಳಿಂದಾಗಿ ಹೊರಹೋಗಬೇಕಾದರೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ, ಮುಂಬೈ ಪುರಸಭೆಯು ಕಾರು ಮಾಲೀಕರಿಗೆ ಕಾರುಗಳಲ್ಲಿ ಸುತ್ತಿಗೆಗಳನ್ನು ಕೊಂಡೊಯ್ಯುವಂತೆ ಹೇಳಿದೆ. ಜನರು ತಮ್ಮ ಸುರಕ್ಷತೆಯನ್ನು ಸುತ್ತಿಗೆಗಳನ್ನು ಜೊತೆಯಲ್ಲಿ ಒಯ್ಯುವಂತೆ ಸೂಚಿಸಲಾಗಿದೆ.
ಮುಂಬೈ ಪುರಸಭೆ ಈ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟರ್ ಪೇಜ್ನಲ್ಲಿ ಪ್ರಕಟಿಸಿದೆ. ಯಾವ ಕಾರಣಕ್ಕೆ ಮುಂಬೈ ಪುರಸಭೆ ಕಾರಿನಲ್ಲಿ ಸುತ್ತಿಗೆಯನ್ನು ಕೊಂಡೊಯ್ಯುವಂತೆ ಸಲಹೆ ನೀಡಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಚಂಡಮಾರುತವು ಅಪ್ಪಳಿಸಿದಾಗ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸಬಹುದು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಚಂಡಮಾರುತದಿಂದಾಗಿ ಪ್ರವಾಹ ಪರಿಸ್ಥಿತಿ ಉದ್ಭವಿಸುತ್ತದೆ. ಜೊತೆಗೆ ಮರಗಳು ಧರೆಗುರುಳುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಸಿಕ್ಕಿಬಿದ್ದಾಗ ಸುತ್ತಿಗೆ ಜೊತೆಯಲ್ಲಿದ್ದರೆ ಕಾರಿನ ವಿಂಡೋಗಳನ್ನು ಒಡೆದು ಹೊರಬರಲು ಅನುಕೂಲವಾಗುತ್ತದೆ. ಈ ಕಾರಣಕ್ಕೆ ಮುಂಬೈ ಪುರಸಭೆ ಇಂತಹ ಪ್ರಕಟನೆಯನ್ನು ಹೊರಡಿಸಿದೆ.
ಈ ಹಿಂದೆ, ಸಾಮಾಜಿಕ ಜಾಲತಾಣದ ಮೂಲಕ ಜನರನ್ನು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿತ್ತು. ಮುಂಬೈನಂತಹ ಮಹಾನಗರದಲ್ಲಿ ಜನರು ಮನೆಯಲ್ಲಿಯೇ ಇರುವುದು ಸಾಧ್ಯವಿಲ್ಲ ಎಂಬುದನ್ನು ಮನಗಂಡ ಪುರಸಭೆಯು ಸುತ್ತಿಗೆಯನ್ನು ಜೊತೆಯಲ್ಲಿ ಒಯ್ಯುವಂತೆ ಸೂಚಿಸಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಸುತ್ತಿಗೆಗಳನ್ನು ಕಾರಿನಲ್ಲಿ ಸುರಕ್ಷಿತ ಸ್ಥಳದಲ್ಲಿ, ತಕ್ಷಣಕ್ಕೆ ಕೈಗೆ ಸಿಗುವಂತಹ ಸ್ಥಳದಲ್ಲಿ ಇಡಬೇಕು ಎಂದೂ ಮುಂಬೈ ಪುರಸಭೆ ಹೇಳಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಮುಂಬೈ ಹೆಚ್ಚಿನ ಹಾನಿಯನ್ನು ಅನುಭವಿಸುತ್ತಿದೆ. ಈ ಹಿಂದಿನ ಘಟನೆಗಳಿಂದ ಎಚ್ಚೆತ್ತಿರುವ ಮುಂಬೈ ಪುರಸಭೆ ಕಾರಿನಲ್ಲಿ ಸುರಕ್ಷತಾ ಸಾಧನಗಳನ್ನು ಒಯ್ಯುವಂತೆ ಸೂಚಿಸಿದೆ.
ನೀರು ಕಾರಿನೊಳಗೆ ಪ್ರವೇಶಿಸಿದಾಗ ಎಲೆಕ್ಟ್ರಾನಿಕ್ ಅಪಘಾತಕ್ಕೀಡಾಗುವ ಸಾಧ್ಯತೆಗಳಿರುತ್ತವೆ. ಇಂತಹ ಸಂದರ್ಭಗಳಲ್ಲಿ ಕಾರನ್ನು ಸ್ಟಾರ್ಟ್ ಮಾಡುವುದಕ್ಕೆ ಅಥವಾ ಡೋರ್ಗಳನ್ನು ತೆರೆಯುವುದಕ್ಕೆ ಕಷ್ಟವಾಗುತ್ತದೆ. ಕಾರಿನಲ್ಲಿ ಸುತ್ತಿಗೆಯಂತಹ ವಸ್ತುಗಳಿದ್ದರೆ ಡೋರ್ಗಳನ್ನು ಒಡೆದು ಹೊರ ಬರಲು ಅನುಕೂಲವಾಗುತ್ತದೆ.