Just In
- 2 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 3 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 4 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 4 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಿಪಲ್ ರೈಡಿಂಗ್ನಲ್ಲಿ ಬಂದು ಪೊಲೀಸಪ್ಪನಿಗೆ ಗುದ್ದಿದ ಯುವಕರು
ಸಂಚಾರಿ ನಿಯಮಗಳ ಉಲ್ಲಂಘನೆಯು ದೇಶಾದ್ಯಂತ ಮಾರಣಾಂತಿಕ ವೈರಸ್ನಂತೆ ಹರಡುತ್ತಿದೆ. ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸಂಚಾರಿ ನಿಯಮಗಳ ಉಲ್ಲಂಘನೆಯು ಶಾಶ್ವತವಾಗಿ ಕೊನೆಯಾಗುತ್ತಿಲ್ಲ.
ಈ ಸಂಚಾರಿ ನಿಯಮಗಳ ಉಲ್ಲಂಘನೆಯಿಂದಾಗಿ ಸಾವನ್ನಪ್ಪುವವರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಪೊಲೀಸರಿಗೆ ತಲೆನೋವು ತಂದಿದೆ. ಈ ಕಾರಣಕ್ಕೆ ಪೊಲೀಸರು ವಿಶೇಷ ಕಾರ್ಯಾಚರಣೆಗಳನ್ನು ನಡೆಸುತ್ತಿರುತ್ತಾರೆ.
ಇದರ ಜೊತೆಗೆ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ಕಡಿಮೆಗೊಳಿಸುವ ಕಾರಣಕ್ಕೆ ಕೇಂದ್ರ ಸರ್ಕಾರವು ದಂಡದ ಪ್ರಮಾಣವನ್ನು ಹೆಚ್ಚಿಸಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಕಳೆದ ವರ್ಷದ ಸೆಪ್ಟೆಂಬರ್ 1ರಿಂದ ಜಾರಿಗೆ ತಂದಿದೆ.
ಆದರೂ ಸಹ ಕೆಲವರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಲೇ ಇರುತ್ತಾರೆ. ಈಗ ಇಂತಹುದೇ ಘಟನೆಯೊಂದರಲ್ಲಿ ತ್ರಿಪಲ್ ರೈಡಿಂಗ್ ಮಾಡುತ್ತಿದ್ದ ಯುವಕರು ಕರ್ತವ್ಯನಿರತ ಪೇದೆಯೊಬ್ಬರಿಗೆ ಗುದ್ದಿದ್ದಾರೆ. ಈ ಘಟನೆಯು ಮುಂಬೈ ನಗರದಲ್ಲಿ ನಡೆದಿದೆ. ಈ ಘಟನೆಯು, ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಿಸಿಟಿವಿಯ ದೃಶ್ಯಗಳು ಸೋರಿಕೆಯಾಗಿದ್ದು, ಇಂಟರ್ನೆಟ್ನಲ್ಲಿ ವೈರಲ್ ಆಗಿವೆ. ಈ ದೃಶ್ಯದಲ್ಲಿ ಪೊಲೀಸ್ ಒಬ್ಬರು ರಸ್ತೆ ಮಧ್ಯದಲ್ಲಿ ನಿಂತು ಟ್ರಿಪಲ್ ರೈಡಿಂಗ್ನಲ್ಲಿ ಬರುತ್ತಿದ್ದವರನ್ನು ತಡೆಯಲು ಮುಂದಾಗಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ತಮ್ಮ ಬೈಕ್ ಅನ್ನು ಆ ಕಡೆಯಿಂದ ಈ ಕಡೆಗೆ ಅಲುಗಾಡಿಸಿದ್ದಾರೆ. ನಂತರ ಬೈಕಿನ ನಿಯಂತ್ರಣ ಸಿಗದೇ ತಡೆಯಲು ಬಂದ ಪೊಲೀಸ್ಗೆ ಗುದ್ದಿದ್ದಾರೆ. ಈ ಘಟನೆಯಲ್ಲಿ ಆ ಪೊಲೀಸ್ ಹಾಗೂ ಬೈಕಿನಲ್ಲಿದ್ದ ಯುವಕರು ಗಾಯಗೊಂಡಿದ್ದಾರೆ.
ಪೊಲೀಸ್ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ವಾಹನಗಳನ್ನು ತಡೆಯಲು ಪೊಲೀಸರು ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ಗಳನ್ನು ಬಳಸುವಂತೆ ಸೂಚಿಸಲಾಗಿದೆ. ಆದರೆ ಬಹುತೇಕ ಪೊಲೀಸರು ಈ ನಿಯಮಗಳನ್ನು ಪಾಲಿಸುವುದಿಲ್ಲ.
ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರು ಕಂಡು ಬಂದ ತಕ್ಷಣವೇ ರಸ್ತೆ ಮಧ್ಯೆ ನಿಲ್ಲುತ್ತಾರೆ. ನಿಯಮಗಳನ್ನು ಉಲ್ಲಂಘಿಸುವವರಿಗಾಗಿಯೇ ಇ-ಚಲನ್ ವ್ಯವಸ್ಥೆಯನ್ನು ಸಹ ಜಾರಿಗೆ ತರಲಾಗಿದೆ. ಇದರಿಂದಾಗಿ ಅಪಘಾತಗಳನ್ನು ತಪ್ಪಿಸಬಹುದು.
ವಾಹನ ಚಾಲಕರು ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಗುದಿಯುವುದು ತಪ್ಪುತ್ತದೆ. ಈ ಘಟನೆಯಲ್ಲಿ ರಸ್ತೆ ಮಧ್ಯೆದಲ್ಲಿರುವ ಪೊಲೀಸ್, ರಸ್ತೆಯಲ್ಲಿ ಉಂಟಾಗುವ ಟ್ರಾಫಿಕ್ ಜಾಮ್ ಅನ್ನು ಸರಿಪಡಿಸಲು ನಿಂತಿರುವಂತೆ ಕಾಣುತ್ತದೆ.
ಟ್ರಪಲ್ ರೈಡಿಂಗ್ ಮಾಡುತ್ತಿದ್ದವರನ್ನು ಕಂಡ ತಕ್ಷಣ ಪೊಲೀಸ್ ಅವರನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಬೈಕಿನ ನಿಯಂತ್ರಣ ಸಿಗದೇ ಬೈಕ್ ಸವಾರನು ಪೊಲೀಸ್ಗೆ ಗುದ್ದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಪೊಲೀಸ್ ಅನ್ನು ಮುಂಬೈನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಯಮಗಳನ್ನು ಉಲ್ಲಂಘಿಸುವವರನ್ನು ಹಿಂಬಾಲಿಸಿಕೊಂಡು ಹೋಗಿ ಹಿಡಿಯುವಂತಿಲ್ಲವೆಂಬ ನಿಯಮವಿದೆ. ಇದರಿಂದಾಗಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುವವರಿಗೆ ಮಾತ್ರವಲ್ಲದೇ ಸ್ಥಳದಲ್ಲಿರುವ ಸಾರ್ವಜನಿಕರಿಗೂ ತೊಂದರೆಯಾಗುತ್ತದೆ.
ಪೊಲೀಸರಾಗಲಿ, ಸಾರ್ವಜನಿಕರಾಗಲಿ ನಿಯಮಗಳನ್ನು ಪರಿಗಣಿಸುತ್ತಿಲ್ಲ. ಈ ರೀತಿಯ ಘಟನೆಗಳು ನಡೆಯುತ್ತಿರುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆಯೂ ಸಹ ವಾಹನ ಸವಾರರು ಪೊಲೀಸರಿಗೆ ಗುದ್ದಿದ್ದ ಹಲವಾರು ಘಟನೆಗಳು ವರದಿಯಾಗಿವೆ.