Just In
- 6 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 7 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 8 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 8 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಟಿಸೆಪ್ಟಿಕ್ ಮಷಿನ್ಗಳಾಗಿ ಬದಲಾದ ಪೊಲೀಸ್ ವ್ಯಾನ್ಗಳು
ಕರೋನಾ ವೈರಸ್ ವಿಶ್ವದ ಎಲ್ಲಾ ದೇಶಗಳಿಗೆ ಸವಾಲನ್ನು ಒಡ್ಡಿದೆ. ಈ ವೈರಸ್ ಪ್ರತಿದಿನ ಹೆಚ್ಚು ಹೆಚ್ಚು ಜನರಿಗೆ ಹರಡುತ್ತಿದೆ. ಇದರಿಂದಾಗಿ ಜಾಗತಿಕ ಸಮುದಾಯವು ಆನಾರೋಗ್ಯದ ಭೀತಿಯನ್ನು ಎದುರಿಸುತ್ತಿದೆ. ಕರೋನಾ ವೈರಸ್ನಿಂದಾಗಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ.
ಭಾರತದಲ್ಲಿಯೂ ಈ ಮಹಾಮಾರಿ ವೈರಸ್ ತನ್ನ ಕ್ರೂರತೆಯನ್ನು ತೋರಿಸಲು ಆರಂಭಿಸಿದೆ. ಮುಂದಿನ ದಿನಗಳಲ್ಲಿ ವೈರಸ್ ಹರಡುವ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಕಾರಣಕ್ಕೆ ಏಪ್ರಿಲ್ 14ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ.
ಈ ಎರಡನೇ ಹಂತದ ಲಾಕ್ಡೌನ್ ಜನರನ್ನು ಗೊಂದಲಕ್ಕೀಡು ಮಾಡಿದೆ. ಮೊದಲ ಹಂತದ ಲಾಕ್ಡೌನ್ನಿಂದ ಚೇತರಿಸಿಕೊಳ್ಳುವ ಮುನ್ನವೇ ಎರಡನೇ ಹಂತದ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಆದರೆ ಕರೋನಾದ ಕಪಿಮುಷ್ಟಿಯಿಂದ ಪಾರಾಗಲು ಈ ರೀತಿಯ ಕ್ರಮಗಳು ಅವಶ್ಯಕವಾಗಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಆಯಾ ರಾಜ್ಯಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ, ಮುಂಬೈ ಪೊಲೀಸರು ತಮ್ಮ ವ್ಯಾನ್ಗಳನ್ನು ಆಂಟಿಸೆಪ್ಟಿಕ್ ಮಷಿನ್ಗಳನ್ನಾಗಿ ಬಳಸಲು ನಿರ್ಧರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ದೇಶದಲ್ಲಿಯೇ ಹೆಚ್ಚಿನ ಸಂಖ್ಯೆಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ 3 ಸಾವಿರಕ್ಕೂ ಹೆಚ್ಚು ಜನರಿಗೆ ವೈರಸ್ ಇರುವುದು ಪತ್ತೆಯಾಗಿದೆ. ಇದರಿಂದಾಗಿ ಮಹಾರಾಷ್ಟ್ರವು ಭಾರತದಲ್ಲಿ ಕರೋನಾದಿಂದ ಹೆಚ್ಚು ಬಳಲುತ್ತಿರುವ ರಾಜ್ಯವಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಮಹಾರಾಷ್ಟ್ರದ ಪ್ರಮುಖ ನಗರಗಳಾದ ಮುಂಬೈ ಹಾಗೂ ಪುಣೆ ನಗರಗಳಲ್ಲಿ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರ ಸರ್ಕಾರವು ಅನೇಕ ಕ್ರಮಗಳೊಂದಿಗೆ, ಕರೋನಾ ವಿರುದ್ಧ ಹೋರಾಡುತ್ತಿದೆ. ಇದರಲ್ಲಿ ಆಂಟಿಸೆಪ್ಟಿಕ್ ಸ್ಪ್ರೇ ಸಹ ಸೇರಿದೆ.
ಈ ಉದ್ದೇಶದಿಂದ ಮುಂಬೈ ನಗರ ಪೊಲೀಸರ ವಾಹನಗಳನ್ನು ವಿಶೇಷ ತಾಂತ್ರಿಕ ಉಪಕರಣಗಳ ಸಹಾಯದಿಂದ ಆಂಟಿಸೆಪ್ಟಿಕ್ ಸ್ಪ್ರೇ ಸಿಂಪಡಿಸುವ ವಾಹನವನ್ನಾಗಿ ಮಾರ್ಪಡಿಸಲಾಗಿದೆ. ಈ ವಾಹನಗಳು ನಗರದ ಮೂಲೆ ಮೂಲೆಗೂ ಹೋಗಿ ಆಂಟಿಸೆಪ್ಟಿಕ್ ಸ್ಪ್ರೇ ಸಿಂಪಡಿಸುತ್ತವೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಈ ಹೊಸ ಯೋಜನೆಯ ಬಗ್ಗೆ ಮುಂಬೈ ನಗರ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ಪೇಜ್ನಲ್ಲಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ನಲ್ಲಿರುವ ಫೋಟೋಗಳಲ್ಲಿ ಪೊಲೀಸ್ ವ್ಯಾನ್ಗಳು ಆಂಟಿಸೆಪ್ಟಿಕ್ ಸ್ಪ್ರೇ ಸಿಂಪಡಿಸುವ ವಾಹನಗಳಾಗಿ ಬದಲಾಗಿರುವುದನ್ನು ಕಾಣಬಹುದು.
ಪ್ರತಿ ಪ್ರದೇಶಕ್ಕೆ ಒಂದು ವ್ಯಾನ್ನಂತೆ ಈ ವ್ಯಾನ್ಗಳನ್ನು ಸಿದ್ಧಪಡಿಸಲಾಗಿದೆ. ಈ ವ್ಯಾನ್ಗಳು ಈಗಾಗಲೇ ತಮ್ಮ ಕೆಲಸವನ್ನು ಆರಂಭಿಸಿವೆ. ಕರೋನಾ ವೈರಸ್ನಿಂದ ಜನರನ್ನು ರಕ್ಷಿಸಲು ಪೊಲೀಸರು ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ದೇಶದ ಹಲವು ಭಾಗಗಳಲ್ಲಿ ಕಹಿ ಘಟನೆಗಳು ನಡೆದಿದ್ದರೂ, ಪೊಲೀಸರು ತಮ್ಮ ಕುಟುಂಬದವರಿಂದ ದೂರವಿದ್ದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವುಗಳ ಜೊತೆಗೆ ತಮ್ಮ ವ್ಯಾನ್ಗಳನ್ನೇ ಆಂಟಿಸೆಪ್ಟಿಕ್ ಮಷಿನ್ಗಳನ್ನಾಗಿ ಬಳಸುತ್ತಿರುವ ಪೊಲೀಸರ ಕಾರ್ಯ ಶ್ಲಾಘನೀಯ.