Just In
- 22 min ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 12 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 13 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 15 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Movies Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಕೊನೆಗೂ ತಗ್ಲಾಕಿಕೊಂಡ ಯುವತಿಯರು..!
ಕರೋನಾ ಹರಡದಿರಲಿ ಎಂಬ ಕಾರಣಕ್ಕೆ ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಒಂದು ತಿಂಗಳಿಗಿಂತ ಹೆಚ್ಚು ಕಾಲದಿಂದ ಜಾರಿಯಲ್ಲಿರುವ ಲಾಕ್ಡೌನ್ನಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. 2020, ಕ್ಯಾಲೆಂಡರ್ನಿಂದ ಅಳಿಸಬೇಕಾದ ವರ್ಷ ಎಂದು ಹಲವರು ವಿಷಾದ ವ್ಯಕ್ತಪಡಿಸುತ್ತಿದ್ದಾರೆ.
ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಬಹುತೇಕ ಎಲ್ಲ ದೇಶಗಳಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ಕರೋನಾ ವೈರಸ್ನಿಂದ ಜನರನ್ನು ಕಾಪಾಡಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಆಧಾರದ ಮೇಲೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಆದರೆ ಕೆಲವರು ಈ ಲಾಕ್ಡೌನ್ ಅನ್ನು ಉಲ್ಲಂಘಿಸುತ್ತಲೇ ಇದ್ದಾರೆ.
ಪೊಲೀಸರು ಅಗತ್ಯವಿಲ್ಲದೆ ಹೊರಬರುವ ಜನರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಪೊಲೀಸರಿಗೆ ಯಾಮಾರಿಸಿ ತಪ್ಪಿಸಿಕೊಳ್ಳುತ್ತಿದ್ದಾರೆ. ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೊರಬಂದ ಇಬ್ಬರು ಯುವತಿಯರು ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟ ಘಟನೆ ನಡೆದಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊವನ್ನು ಯುಸಿಎನ್ ಎಂಬ ಸುದ್ದಿ ಸಂಸ್ಥೆ ಬಿಡುಗಡೆಗೊಳಿಸಿದೆ. ತಪಾಸಣೆ ನಡೆಸುವ ವೇಳೆಯಲ್ಲಿ ಹೋಂಡಾ ಆಕ್ಟಿವಾ ಸ್ಕೂಟರ್ನಲ್ಲಿ ಬರುತ್ತಿದ್ದ ಇಬ್ಬರು ಮಹಿಳೆಯರನ್ನು ತಡೆಯಲು ಪೊಲೀಸರು ಮುಂದಾಗಿದ್ದಾರೆ. ಆದರೆ ಆ ಮಹಿಳೆಯರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಅವರು ಹೊರಬರಲು ಯತ್ನಿಸಿದ ಪ್ರದೇಶವನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಕಾರಣಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಅಲ್ಲಿ ನಿಯೋಜಿಸಲಾಗಿದೆ. ಆದರೂ ಮುಖ ಮುಚ್ಚಿ ಕೊಂಡಿದ್ದ ಇಬ್ಬರು ಯುವತಿಯರು ತಪ್ಪಿಸಿಕೊಂಡು ಹೊರಬರಲು ಪ್ರಯತ್ನಿಸಿದ್ದಾರೆ. ಎಲ್ಲಾ ಕಡೆ ಪೊಲೀಸರಿದ್ದ ಕಾರಣಕ್ಕೆ ಬೇರೆ ದಾರಿ ಕಾಣದೇ ಪೊಲೀಸರಿಗೆ ಶರಣಾಗಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಪೊಲೀಸರು ಅವರ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಯುವತಿಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಗೆ ಕರೆದೊಯ್ಯುವ ಮೊದಲು ಅವರಿಗೆ ಲಾಠಿ ರುಚಿ ತೋರಿಸಿ, ಬಸ್ಕಿ ಹೊಡೆಸಿದ್ದಾರೆ. ಯುವತಿಯರು ಯಾವ ಕಾರಣಕ್ಕೆ ಹೊರಬಂದರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಹೊರಬರಲು ಆ ಯುವತಿಯರು ಯಾವುದೇ ಪಾಸ್ ಹೊಂದಿರಲಿಲ್ಲ. ವಿಶೇಷ ಪಾಸ್ ಹೊಂದಿದ್ದರೂ ಸಹ, ಪೊಲೀಸರ ಪರಿಶೀಲನೆಯ ನಂತರವೇ ಮುಂದುವರಿಯಬೇಕು. ಆದರೆ ಈ ಯುವತಿಯರು ಹೊರಬರಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಲಾಕ್ಡೌನ್ ಸಂದರ್ಭದಲ್ಲಿ ವಿಶೇಷ ಪಾಸ್ ಪಡೆಯುವುದು ಅಗತ್ಯವಾಗಿದೆ. ಮಹಾರಾಷ್ಟ್ರವು ದೇಶದಲ್ಲಿಯೇ ಹೆಚ್ಚಿನ ಸಂಖ್ಯೆಯ ಸೋಂಕಿತರನ್ನು ಹೊಂದಿರುವ ರಾಜ್ಯವಾಗಿದೆ. ಈ ಕಾರಣಕ್ಕೆ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.
ಇದರಿಂದಾಗಿ ಅನೇಕ ಭಾಗಗಳಲ್ಲಿ, ಚೆಕ್ ಪೋಸ್ಟ್ ಸ್ಥಾಪಿಸಿ, ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಹೊರಗೆ ಸುತ್ತಾಡುತ್ತಿದ್ದು, ಪೊಲೀಸರಿಗೆ ಸಿಕ್ಕಿಬಿದ್ದು ತೊಂದರೆಗೀಡಾಗುತ್ತಿದ್ದಾರೆ.
ಮಾಹಾಮಾರಿ ಕರೋನಾ ವೈರಸ್ ತಡೆಯಲು ದೇಶಾದ್ಯಂತ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನಸಂದಣಿ ಉಂಟಾಗದಂತೆ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಇಡೀ ದೇಶವೇ ಸ್ತಬ್ದವಾಗಿದ್ದು, ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಸ್ ಹರಡುವಿಕೆಯನ್ನು ಮಟ್ಟಹಾಕಬಹುದು ಎನ್ನುವ ಆಲೋಚನೆ ಮಾಡಲಾಗುತ್ತಿದೆ.
ಆದರೆ ಕೆಲವರಿಗೆ ಲಾಕ್ ಡೌನ್ ಮಾಡಿರುವ ಅರ್ಥವೇ ಗೊತ್ತಾಗದೆ ರಸ್ತೆಗಳು ಖಾಲಿ ಇದೆ ಅಂತಾ ಜಾಲಿ ರೈಡ್ ಮಾಡುವ ಮನಸ್ಥಿತಿಗೆ ತಲುಪಿದ್ದಾರೆ. ಹೀಗೆ ಇಲ್ಲೊಬ್ಬ ಲಾಕ್ ಡೌನ್ ವೇಳೆ ಜಾಲಿ ರೈಡ್ ಮಾಡಲು ಹೋಗಿ ಪೊಲೀಸರ ಕೈ ಸಿಲುಕಿ ಒದೆ ತಿಂದಿದ್ದಾನೆ.
ಕೊನೆಗೆ ತಾನು ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡು ಕ್ಷಮೆ ಕೋರಿದ್ದಲ್ಲದೆ ಇನ್ನೊಂದು ಬಾರಿ ಇಂತಹ ತಪ್ಪು ಮಾಡುವುದಿಲ್ಲ ಎನ್ನುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದಾನೆ.
ಲಾಕ್ ಡೌನ್ನಿಂದ ಸಂಚಾರಿ ವ್ಯವಸ್ಥೆಯು ಸಂಪೂರ್ಣವಾಗಿ ಬಂದ್ ಆಗಿರುವುದಿಂದ ತುರ್ತು ವಾಹನಗಳ ಸಂಚಾರವನ್ನು ಹೊರತುಪಡಿಸಿ ಯಾವುದೇ ವಾಹನಗಳನ್ನು ಹೊರಗೆ ಬಿಡುತ್ತಿಲ್ಲ. ಇದರಿಂದ ಸಣ್ಣಪುಟ್ಟ ರಸ್ತೆಗಳು ಮಾತ್ರವಲ್ಲದೆ ಹೆದ್ದಾರಿಗಳಲ್ಲೂ ಯಾವುದೇ ವಾಹನಗಳು ಓಡಾತ್ತಿಲ್ಲ.
ಈ ವೇಳೆ ದಿನನಿತ್ಯದ ಸಾಮಾಗ್ರಿಗಳ ಖರೀದಿಗೆ ಬಂದಿದ್ದ ವ್ಯಕ್ತಿವೊಬ್ಬ ಸಾಮಗ್ರಿಗಳನ್ನು ತೆಗೆದುಕೊಂಡು ಸುಮ್ಮನೆ ಮನೆ ಸೆರುವುದನ್ನು ಬಿಟ್ಟು ಮುಖ್ಯ ರಸ್ತೆಯಲ್ಲೇ ರಾಂಗ್ ಸೈಡ್ನಲ್ಲಿ ಬರುವ ಮೂಲಕ ಜಾಲಿ ರೈಡ್ ವಿಡಿಯೋ ಮಾಡಿದ್ದಾನೆ.
ಒಂದು ಕೈಲಿಯಲ್ಲಿ ಮೊಬೈಲ್ ಮತ್ತು ಮತ್ತೊಂದು ಕೈಯಲ್ಲಿ ಬೈಕ್ ಹ್ಯಾಂಡಲ್ ಹಿಡಿದುಕೊಂಡಿರುವ ಈ ವ್ಯಕ್ತಿಯ ಸುಮಾರು 1 ಕಿ.ಮೀ ನಷ್ಟು ಜಾಲಿ ರೈಡ್ ಮಾಡಿಕೊಂಡು ಮೊಬೈಲ್ ಸೆಲ್ಪಿ ವಿಡಿಯೋ ಮಾಡಿದ್ದಾನೆ. ಈ ವೇಳೆ ಸರ್ಕಲ್ ಒಂದರ ಬಳಿಯಲ್ಲೇ ಕಾವಲಿಗೆ ನಿಂತಿದ್ದ ಪೊಲೀಸರು ಬೈಕ್ ಹಿಡಿದುಹಾಕಿದ್ದಲ್ಲದೇ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.
ಲಾಕ್ ಡೌನ್ ಇರುವಾಗ ಹೊರಗೆ ಬರದಿರುವಂತೆ ಎಚ್ಚರಿಸಿದ ಪೊಲೀಸರು ಮೊಬೈಲ್ ವಿಡಿಯೋ ಆನ್ನಲ್ಲೇ ಇರುವುದನ್ನು ಗಮನನಿಸಿದ್ದಾರೆ.
ಆಗ ಅನುಮಾನ ಬಂದ ಪೊಲೀಸರು ಯಾವ ವಿಡಿಯೋ ಮಾಡುತ್ತಿದ್ದೆ ಎಂದು ಪ್ರಶ್ನಿಸಿದಾಗ ಬೈಕ್ ಸವಾರ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಮೊಬೈಲ್ ಚೆಕ್ ಮಾಡಿದಾಗ ಕೆಲವೇ ನಿಮಿಷ ಹಿಂದೆ ಸೆಲ್ಪಿ ವಿಡಿಯೋ ಮಾಡಿರುವುದು ಗೊತ್ತಾಗಿದೆ.
ಇದರಿಂದ ಮತ್ತಷ್ಟು ಕುಪಿತಗೊಂಡ ಪೊಲೀಸರು ಬೈಕ್ ಸವಾರರನ್ನು ನೆರವಾಗಿ ಠಾಣೆಗೆ ಕರೆತಂದು ತಮ್ಮದೇ ಶೈಲಿಯಲ್ಲಿ ಉಪಚಾರ ಮಾಡಿದ್ದಾರೆ. ತದನಂತರ ಮುಂದೆ ಇಂತಹ ತಪ್ಪು ಮಾಡುವುದಿಲ್ಲ ಎನ್ನುವ ಕ್ಷಮಾಪಣಾ ಪತ್ರವನ್ನು ಬರೆಸಿಕೊಂಡು ವಿಡಿಯೋವನ್ನು ಕೂಡಾ ಮಾಡಿಸಿದ್ದಾರೆ.
ಮಾಹಿತಿಗಳ ಇದು ಮಹಾರಾಷ್ಟ್ರದ ಜಲಗಾಂ ಹೊರವಲಯದಲ್ಲಿ ನಡೆದಿದೆ ಎನ್ನಲಾಗಿದ್ದು, ಇದೀಗ ಜಾಲಿ ರೈಡ್ ವಿಡಿಯೋ ಮತ್ತು ಒದೆ ತಿಂದ ನಂತರ ಕ್ಷಮೆ ಕೇಳುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇನ್ನು ಕರೋನಾ ವೈರಸ್ ಹರಡುವಿಕೆಯನ್ನು ತಡೆಯುಲು ಸರ್ಕಾರಗಳು, ವೈದ್ಯರು, ಪೊಲೀಸರು ಹರಸಾಹಸಪಡುತ್ತಿದ್ದು, ಲಾಕ್ ಡೌನ್ ಅರ್ಥ ಮಾಡಿಕೊಳ್ಳದ ಕೆಲವರು ಪೊಲೀಸರ ಕಣ್ಣು ತಪ್ಪಿಸಿ ಹೊರಗೆ ತಿರುಗುವ ಮೂಲಕ ಅಪಾಯ ತಾವೇ ತಂದುಕೊಳ್ಳುತ್ತಿದ್ದಾರೆ.
ಅನಾವಶ್ಯಕವಾಗಿ ಹೊರಗೆ ತಿರುವ ಮೂಲಕ ವೈರಸ್ ಹರಡುವಿಕೆಯನ್ನು ಸುಲಭವಾಗಿಸುತ್ತಿದ್ದು, ಇಂತವರ ವಿರುದ್ಧ ಪೊಲೀಸರು ಈಗಾಗಲೇ ಹಲವು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ನೀವು ಕೂಡಾ ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಹೊರಗೆ ತಿರಗದೆ, ಅವಶ್ಯವಿದ್ದಲ್ಲಿ ಅಗತ್ಯ ಸುರಕ್ಷಾ ಸಾಧನ ಬಳಕೆ ಮಾಡಿಕೊಂಡು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ.