Just In
- 9 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 10 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 11 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 12 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಟ್ರೋ ಸಿಬ್ಬಂದಿ ಮತ್ತು ಪೊಲೀಸರ ನಡುವಿನ ಕಿತ್ತಾಟ-ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು..!
'ನಮ್ಮ ಮೆಟ್ರೋ' ಸಿಬ್ಬಂದಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ (ಕೆಎಸ್ ಐಎಸ್ ಎಫ್) ಸಿಬ್ಬಂದಿ ನಡುವೆ ಜುಲೈ 6ರ ನಡೆದ ಗಲಾಟೆ ಪ್ರಕರಣದ ಕಾವು ತೀವ್ರಗೊಂಡಿದ್ದು, ಮೆಟ್ರೋ ಸಂಚಾರ ಕೂಡಾ ಸ್ತಬ್ಧವಾಗಿದೆ.
'ನಮ್ಮ ಮೆಟ್ರೋ' ಸಿಬ್ಬಂದಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ (ಕೆಎಸ್ ಐಎಸ್ ಎಫ್) ಸಿಬ್ಬಂದಿ ನಡುವೆ ಜುಲೈ 6ರ ನಡೆದ ಗಲಾಟೆ ಪ್ರಕರಣದ ಕಾವು ತೀವ್ರಗೊಂಡಿದ್ದು, ಮೆಟ್ರೋ ಸಂಚಾರ ಕೂಡಾ ಸ್ತಬ್ಧವಾಗಿದೆ.
ಇದಲ್ಲದೇ ಕೆ.ಎಸ್.ಐ.ಎಸ್.ಎಫ್. ಪೊಲೀಸರು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಮೆಟ್ರೋ ಸಿಬ್ಬಂದಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮೆಟ್ರೋ ಸಿಬ್ಬಂದಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಈ ಹಿನ್ನೆಲೆ ಮುಂಜಾನೆಯಿಂದ ಆರಂಭವಾಗಬೇಕಿದ್ದ ಮೆಟ್ರೋ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಇನ್ನು ಬಂಧಿತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಟ್ಟು ಹಿಡಿದಿರುವ ಮೆಟ್ರೋ ಸಿಬ್ಬಂದಿಯೂ ಹಿರಿಯ ಅಧಿಕಾರಿಗಳ ಸಂಧಾನಕ್ಕೂ ಮಣಿಯದೇ ಹೋರಾಟ ಮುಂದುವರೆಸಿದ್ದಾರೆ.
ಆದ್ರೆ ನಮ್ಮ ಮೆಟ್ರೊ ಸಿಬ್ಬಂದಿ ಮತ್ತು ಕೆಎಸ್ ಐಎಸ್ಎಫ್ ಸಿಬ್ಬಂದಿಯ ವೈಯಕ್ತಿಕ ಜಗಳದಿಂದಾಗಿ ಸಮಸ್ಯೆ ಎದುರಿಸುತ್ತಿರುವವರು ಮಾತ್ರ ಜನಸಾಮನ್ಯರು.
ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿ ಮತ್ತು ನಾಗಸಂದ್ರದಿಂದ ಯಲಚೇನಹಳ್ಳಿ ವರೆಗಿನ ಒಟ್ಟು 42 ಕಿ.ಮೀ.ಮಾರ್ಗದಲ್ಲಿ ದಿನವೊಂದಕ್ಕೆ 3 ಲಕ್ಷ ಪ್ರಯಾಣಿಕರು ಮೆಟ್ರೋ ಸಂಚಾರವನ್ನೇ ಅವಲಂಭಿಸಿದ್ದು, ಮೆಟ್ರೋ ಬಂದ್ ಆಗಿರುವುದು ಭಾರೀ ಸಮಸ್ಯೆಯುಂಟು ಮಾಡಿದೆ.
ಹೀಗಾಗಿ ಕೂಡಲೇ ಸಮಸ್ಯೆ ಬಗೆಹರಿಸಬೇಕಿರುವ ಮೆಟ್ರೋ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯು ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕಿದೆ.