Just In
- 2 hrs ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 2 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 2 hrs ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 3 hrs ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Movies Yuva Review : ಕ್ಲಾಸ್-ಮಾಸ್ ; ಸ್ಯಾಂಡಲ್ ವುಡ್ ನ ಹೊಸ ಪರ್ವ ಈ ಯುವ, ಹೇಗಿದೆ ದೊಡ್ಮನೆ ಕುಡಿಯ ಅಬ್ಬರ..?
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಸಿಜನ್ ಆಟೋ ಮೂಲಕ ಕರೋನಾ ಸೋಂಕಿತರಿಗೆ ನೆರವಾಗುತ್ತಿರುವ ಎನ್ಜಿಒ ನಿರ್ದೇಶಕಿ
ಕರೋನಾ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಸಂಕಷ್ಟದ ಪರಿಸ್ಥಿತಿಯಲ್ಲಿ ಹಲವಾರು ಹೃದಯವಂತರು ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದಾರೆ. ಇಂತಹವರ ಬಗ್ಗೆ ಪ್ರತಿದಿನ ವರದಿಯಾಗುತ್ತಲೇ ಇರುತ್ತದೆ.
ಕರೋನಾ ವೈರಸ್'ನಿಂದ ತಾವು ಅನುಭವಿಸಿದ ಕಷ್ಟ ಬೇರೆಯವರಿಗೆ ಬರಬಾರದು ಎಂಬ ಕಾರಣಕ್ಕೆ ಸಾರ್ವಜನಿಕರಿಗೆ ನೆರವಾಗುತ್ತಿದ್ದಾರೆ. ಈಗ ಇದೇ ರೀತಿ ಸಾರ್ವಜನಿಕರಿಗೆ ನೆರವಾಗುತ್ತಿರುವ ಮತ್ತೊಬ್ಬ ವ್ಯಕ್ತಿಯ ಬಗ್ಗೆ ವರದಿಯಾಗಿದೆ. ಕರೋನಾದಿಂದ ತಮ್ಮ ತಾಯಿಯನ್ನು ಕಳೆದುಕೊಂಡ 36 ವರ್ಷದ ಆರ್.ಸೀತಾ ದೇವಿ ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಗೆ ಬರುವವರಿಗೆ ಆಕ್ಸಿಜನ್ ಆಟೋ ಮೂಲಕ ನೆರವಾಗುತ್ತಿದ್ದಾರೆ.
ಅವರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದ ತಮ್ಮ 65 ವರ್ಷದ ತಾಯಿಯನ್ನು ಚಿಕಿತ್ಸೆಗಾಗಿ ಮೇ 1 ರಂದು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಬೆಡ್ ಕೊರತೆಯಿಂದ ಆಸ್ಪತ್ರೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾ ಕುಳಿತಿದ್ದರು.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಕೊನೆಗೂ ಚಿಕಿತ್ಸೆ ದೊರೆಯದೇ ಸೀತಾ ದೇವಿ ಅವರ ತಾಯಿ ಮೃತಪಟ್ಟರು. ತಮ್ಮ ತಾಯಿಗೆ ಬಂದ ಪರಿಸ್ಥಿತಿ ಬೇರೆಯವರಿಗೆ ಬರಬಾರದು ಎಂಬ ಕಾರಣಕ್ಕೆ ಕರೋನಾ ವೈರಸ್ ಸೋಂಕಿತರಿಗೆ ನೆರವಾಗಲು ನಿರ್ಧರಿಸಿದರು.
ಬೆಡ್'ಗಾಗಿ ಈ ಆಸ್ಪತ್ರೆಯ ಹೊರಗೆ ಗಂಟೆಗಟ್ಟಲೆ ತಮ್ಮ ತಾಯಿಯೊಂದಿಗೆ ಕಾಯುತ್ತಿದ್ದ ಸೀತಾ ದೇವಿ ಈಗ ರಾಜೀವ್ ಗಾಂಧಿ ಆಸ್ಪತ್ರೆಗೆ ಬರುವವರಿಗೆ ಸಾಕ್ಷಾತ್ ದೇವಿಯಂತೆ ನಿಂತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಟೋ ಮೂಲಕ ಸಾಧ್ಯವಾದಷ್ಟು ಜನರ ಜೀವ ಉಳಿಸುತ್ತಿದ್ದಾರೆ.
MOST READ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ತಮ್ಮ ತಾಯಿಗೆ ಸರಿಯಾದ ಸಮಯದಲ್ಲಿ ಆಕ್ಸಿಜನ್ ದೊರೆತಿದ್ದರೆ ಅವರ ಜೀವವನ್ನು ಉಳಿಸಬಹುದಿತ್ತು ಎಂದು ಹೇಳುವ ಸೀತಾ ದೇವಿ, ಸ್ಟ್ರೀಟ್ ವಿಷನ್ ಎಂಬ ಎನ್ಜಿಒವೊಂದನ್ನು ನಡೆಸುತ್ತಿದ್ದಾರೆ. ಅವರು ಈ ಎನ್ಜಿಒದ ನಿರ್ದೇಶಕಿಯೂ ಹೌದು.
ಈ ಚಾರಿಟಿ ಮೂಲಕ ಅವರು ತೃತೀಯ ಲಿಂಗಿಗಳಿಗೆ, ಹೆಚ್ಐವಿ ಸೋಂಕಿತ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ನೆರವಾಗುತ್ತಿದ್ದಾರೆ. ಇದರ ಜೊತೆಗೆ ಅವರು ಸುತ್ತ ಮುತ್ತ ಇರುವ ಕೊಳಗೇರಿ ಪ್ರದೇಶದ ಮಕ್ಕಳಿಗೆ ಫ್ರೀಯಾಗಿ ಟ್ಯೂಷನ್ ನಡೆಸುತ್ತಾರೆ.
MOST READ: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಆಕ್ಸಿಜನ್ ಅಳವಡಿಸುವ ಮುನ್ನ ಈ ಆಟೋ ರಿಕ್ಷಾವನ್ನು ಮನೆಯಿಲ್ಲದವರನ್ನು ರಕ್ಷಿಸಲು ಬಳಸಲಾಗುತ್ತಿತ್ತು. ಅವರ ತಾಯಿಯ ನಿಧನದ ನಂತರ ಮೇ 6ರಿಂದ ಈ ಆಟೋವನ್ನು ಆಕ್ಸಿಜನ್ ಆಟೋ ಆಗಿ ಬದಲಿಸಲಾಗಿದೆ.
ತುರ್ತಾಗಿ ಮೆಡಿಕಲ್ ಆಕ್ಸಿಜನ್ ಅಗತ್ಯವಿರುವವರನ್ನು ನಮ್ಮ ಸಿಬ್ಬಂದಿ ಆಟೋ ರಿಕ್ಷಾದಲ್ಲಿ ಕೂರಿಸಿ ಆಕ್ಸಿಜನ್ ಒದಗಿಸುತ್ತಾರೆ. ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನಮ್ಮ ಸಿಬ್ಬಂದಿ ಪಿಪಿಇ ಕಿಟ್ ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.
MOST READ: ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಇದುವರೆಗೂ ಸೀತಾ ದೇವಿಯವರ ಆಕ್ಸಿಜನ್ ಸಿಲಿಂಡರ್ಗಳಿಂದ ಸುಮಾರು 300 ಜನರು ಪ್ರಯೋಜನ ಪಡೆದಿದ್ದಾರೆ. ಇನ್ನಷ್ಟು ಆಟೋ ರಿಕ್ಷಾಗಳ ಮೂಲಕ ಈ ಸೇವೆಯನ್ನು ವಿಸ್ತರಿಸಲು ಬಯಸಿದ್ದರೂ ಹಣಕಾಸಿನ ಕೊರತೆ ಎದುರಾಗಿದೆ ಎಂದು ಸೀತಾ ದೇವಿ ಹೇಳಿದ್ದಾರೆ.
ಗಮನಿಸಿ: ಈ ಲೇಖನದಲ್ಲಿ ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.