Just In
- 11 min ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 30 min ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 1 hr ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 1 hr ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
300ಕ್ಕೂ ಹೆಚ್ಚು ವಾಹನಗಳನ್ನು ಕಳುವು ಮಾಡಿ ಸಿಕ್ಕಿ ಬಿದ್ದ ಪಿಹೆಚ್ಡಿ ಪದವೀಧರ
ಕಾರುಗಳ ಕಳ್ಳತನವಾಗುವುದನ್ನು ತಡೆಯಲು ಕಾರುಗಳಲ್ಲಿ ಆಧುನಿಕ ಸುರಕ್ಷತಾ ಫೀಚರ್'ಗಳನ್ನು ಅಳವಡಿಸಲಾಗುತ್ತಿದೆ. ಎಷ್ಟೇ ಆಧುನಿಕ ಫೀಚರ್'ಗಳನ್ನು ಅಳವಡಿಸಿದರೂ ಕಾರುಗಳ್ಳರು ಆಧುನಿಕ ಉಪಕರಣಗಳ ಸಹಾಯದಿಂದ ಕಾರುಗಳನ್ನು ಕಳುವು ಮಾಡುತ್ತಿದ್ದಾರೆ.
ಇದರಿಂದ ಕಾರು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ದೆಹಲಿ ಪೊಲೀಸರು ಇತ್ತೀಚಿಗೆ ಕಾರು ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರೂ ಉನ್ನತ ಶಿಕ್ಷಣ ಪಡೆದವರು ಎಂಬುದು ಗಮನಾರ್ಹ. ಅವರಲ್ಲಿ ಒಬ್ಬ ಪಿಹೆಚ್ಡಿ ಪದವೀಧರನಾದರೆ ಮತ್ತೊಬ್ಬ ದೆಹಲಿ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ.
ಬಂಧಿತರಿಂದ ಕಳುವು ಮಾಡಲಾದ ಮಣಿಪುರದ 12 ದುಬಾರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತನ ಹೆಸರು ಮೆಹ್ತಾಬ್ ಎಂದು ತಿಳಿದುಬಂದಿದೆ. ಆತ ಪಿಹೆಚ್ಡಿ ಪದವೀಧರನಾಗಿದ್ದು, ನ್ಯಾಷನಲ್ ಎಲಿಜಬಿಲಿಟಿ ಟೆಸ್ಟ್'ನಲ್ಲಿ ತೇರ್ಗಡೆಯಾಗಿದ್ದ.
ಮತ್ತೊಬ್ಬನ ಹೆಸರು ತದ್ರಿಶ್ ಎಂದು ತಿಳಿದುಬಂದಿದೆ. ಆತ ದೆಹಲಿ ವಿಶ್ವವಿದ್ಯಾಲಯಕ್ಕೆ ಸೇರಿರುವ ಪ್ರತಿಷ್ಠಿತ ಕಾಲೇಜಿನಿಂದ ಪದವಿ ಪಡೆದಿದ್ದಾನೆ. ಆತ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ದುಬಾರಿ ಬೆಲೆಯ ಕಾರುಗಳು ಕಳುವಾಗುತ್ತಿರುವ ಬಗ್ಗೆ ದೂರುಗಳು ದಾಖಲಾಗುತ್ತಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದ ದೆಹಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದಾರೆ.
ಅವರು ಕಾರುಗಳನ್ನು ಮಾತ್ರವಲ್ಲದೆ ದುಬಾರಿ ಬೆಲೆಯ ಬೈಕ್'ಗಳನ್ನು ಕಳುವು ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಕಳುವು ಮಾಡಲು ಅವರು ಮಣಿಪುರದಿಂದ ದೆಹಲಿಗೆ ವಿಮಾನದಲ್ಲಿ ಬರುತ್ತಿದ್ದರು. ಈ ಗ್ಯಾಂಗ್ ಇದುವರೆಗೂ 300ಕ್ಕೂ ಹೆಚ್ಚು ವಾಹನಗಳನ್ನು ಕಳುವು ಮಾಡಿರುವುದು ತಿಳಿದು ಬಂದಿದೆ.
ಕದ್ದ ವಾಹನಗಳಿಗೆ ನಕಲಿ ದಾಖಲೆಗಳನ್ನು ಸಿದ್ಧಪಡಿಸಿ ಮಣಿಪುರದಲ್ಲಿ ಮಾರಾಟ ಮಾಡಿದ್ದಾರೆ. ವಾಹನಗಳನ್ನು ಖರೀದಿಸಿರುವವರಲ್ಲಿ ಸಮಾಜ ಘಾತುಕರು ಸಹ ಸೇರಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೂ ಸಹ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಸದ್ಯಕ್ಕೆ ವಾಹನ ಕಳ್ಳತನದ ಗ್ಯಾಂಗ್ನ ಇಬ್ಬರು ಸದಸ್ಯರು ಮಾತ್ರ ಸಿಕ್ಕಿಬಿದ್ದಿದ್ದಾರೆ. ಗ್ಯಾಂಗ್ನ ಇತರ ಸದಸ್ಯರನ್ನು ಬಂಧಿಸಲು ಮಣಿಪುರದ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರು ಮಣಿಪುರ ಪೊಲೀಸರೊಂದಿಗೆ ಕೈಜೋಡಿಸಿದ್ದಾರೆ.
ಪೊಲೀಸರು ಬಿಡುಗಡೆಗೊಳಿಸಿರುವ ಫೋಟೋಗಳಲ್ಲಿ ಟೊಯೊಟಾ ಫಾರ್ಚೂನರ್, ಹ್ಯುಂಡೈ ಕ್ರೆಟಾ, ಮಹೀಂದ್ರಾ ಸ್ಕಾರ್ಪಿಯೋ, ಮಾರುತಿ ಸುಜುಕಿ ವಿಟಾರಾ ಬ್ರೆಝಾ ಸೇರಿದಂತೆ ಹಲವು ಕಾರುಗಳನ್ನು ಕಾಣಬಹುದು. ಈ ಎಲ್ಲಾ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಕಾರುಗಳಾಗಿವೆ ಎಂಬುದು ಗಮನಾರ್ಹ.