Just In
- 7 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 9 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 9 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
51ನೇ ವಯಸ್ಸಿನಲ್ಲೂ ಸೈಕಲ್ಲೇ ಈ ಪೊಲೀಸಪ್ಪನ ಸಾರಥಿ
ಹಲವು ವರ್ಷಗಳ ಹಿಂದೆ ಸೈಕಲ್ ಗಳು ಜನರ ಜೀವನದ ಪ್ರಮುಖ ಭಾಗವಾಗಿದ್ದವು. ಬಹು ಸಂಖ್ಯೆಯ ಸಾರಿಗೆಗಾಗಿ ಸೈಕಲ್ಗಳನ್ನು ಅವಲಂಬಿಸಿದ್ದರು. ಬಹುತೇಕ ಎಲ್ಲರ ಮನೆಯಲ್ಲಿ ಸೈಕಲ್ ಗಳಿದ್ದವು. ಸೈಕಲ್ ಗಳು ಜನರ ಆರೋಗ್ಯವನ್ನು ಕಾಪಾಡುತ್ತಿದ್ದವು.
ರೋಗಗಳಿಂದ ಹಾಗೂ ಖಿನ್ನತೆಯಿಂದ ಜನರನ್ನು ಕಾಪಾಡುತ್ತಿದ್ದವು. ಈಗ ಸೈಕಲ್ ಬದಲಿಗೆ ಬೈಕ್ ಗಳು ಬಂದಿವೆ. ಬೈಕ್ ಗಳು ಸಂಚಾರವನ್ನು ಸುಲಭವಾಗಿಸಿವೆ. ಜೊತೆಗೆ ದೇಹಕ್ಕೆ ಆರಾಮವನ್ನು ನೀಡುತ್ತವೆ. ಇದರ ಜೊತೆಗೆ ಅನೇಕ ರೋಗಗಳನ್ನು ಆಹ್ವಾನಿಸಿವೆ. ಈ ಆಧುನಿಕ ಯುಗದಲ್ಲೂ ಕೆಲವರು ಸೈಕಲ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಪ್ರತಿದಿನವು ತಮ್ಮ ಓಡಾಟಕ್ಕಾಗಿ ಸೈಕಲ್ ಗಳನ್ನೇ ಬಳಸುತ್ತಿದ್ದಾರೆ.
ಸೈಕಲ್ ಬಳಕೆಯಿಂದಾಗಿ ಮೊದಲಿನಂತೆಯೇ ಆರೋಗ್ಯವಾಗಿದ್ದಾರೆ. ತಮಿಳುನಾಡಿನ 51 ವರ್ಷದ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರು ಕಚೇರಿಗೆ ಸೈಕಲ್ ನಲ್ಲಿಯೇ ಹೋಗುತ್ತಿದ್ದಾರೆ. ಶ್ರವಣನ್ ಎಂಬುವವರೇ ಈ ವಯಸ್ಸಿನಲ್ಲೂ ಸೈಕಲ್ ಸವಾರಿ ಮಾಡುತ್ತಿರುವವರು.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಅವರು 23 ವರ್ಷಗಳಿಂದ ಸೈಕಲ್ ಸವಾರಿ ಮಾಡುತ್ತಿದ್ದಾರೆ. ಪ್ರತಿದಿನ ಸೈಕಲ್ ಮೂಲಕವೇ ತಮ್ಮ ಕಚೇರಿಗೆ ಹೋಗುತ್ತಾರೆ. ಸೈಕಲ್ ಸವಾರಿಯಿಂದಾಗಿ ತಾವು ಸ್ಥೂಲಕಾಯವನ್ನು ಹೊಂದದೇ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
ತಮ್ಮ ಅನೇಕ ಸಹೋದ್ಯೋಗಿಗಳು ಮಧುಮೇಹ ಹಾಗೂ ಸ್ಥೂಲಕಾಯದಿಂದ ಬಳಲುತ್ತಿದ್ದಾರೆಂದು ಶ್ರವಣನ್ ಹೇಳುತ್ತಾರೆ. ನಂದಂಬಕ್ಕಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರವಣನ್ ಪ್ರತಿದಿನ ಸುಮಾರು 40 ಕಿ.ಮೀ ಸೈಕಲ್ ಸವಾರಿ ಮಾಡುತ್ತಾರೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಯಾರನ್ನಾದರೂ ಭೇಟಿ ಮಾಡಲು ಸೈಕಲ್ ಮೂಲಕವೇ ಹೋಗುವುದಾಗಿ ಹೇಳಿದ್ದಾರೆ. ಅವರಿಂದ ಸ್ಫೂರ್ತಿ ಪಡೆದ ಅನೇಕರು ಸೈಕಲ್ ಸವಾರಿಯನ್ನು ಆರಂಭಿಸಿದ್ದಾರೆ. ಹಿಂದಿನ ಕಾಲದ ಪೊಲೀಸರು ಸೈಕಲ್ಗಳನ್ನು ಮಾತ್ರ ಬಳಸುತ್ತಿದ್ದರು.
ಪೊಲೀಸರು ಸೈಕಲ್ ಗಳನ್ನು ಬಳಸುತ್ತಿದ್ದಾಗ ಅವರ ದೇಹವು ಆರೋಗ್ಯಕರವಾಗಿತ್ತು. ಆದರೆ ಈಗ ಆ ರೀತಿಯ ಪರಿಸ್ಥಿತಿಯಿಲ್ಲ ಎಂದು ಶ್ರವಣನ್ ಹೇಳುತ್ತಾರೆ. ಸೈಕಲ್ ತುಳಿಯುವುದರಿಂದ ಒಳ್ಳೆಯ ನಿದ್ರೆ ಮಾಡುತ್ತಿರುವುದಾಗಿ ಹೇಳುತ್ತಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಜೊತೆಗೆ ಸೈಕಲ್ ನಿಂದ ಯಾವುದೇ ರೀತಿಯ ಮಾಲಿನ್ಯ ಉಂಟಾಗುವುದಿಲ್ಲ. ತಾವು ಎಂದಿಗೂ ಬೈಕು ಖರೀದಿಸಿಲ್ಲ. ಇದಕ್ಕಾಗಿ ತಮ್ಮ ಸ್ನೇಹಿತರು ತಮ್ಮನ್ನು ಹೀಯಾಳಿಸಿದರೆಂದು ಅವರು ಹೇಳುತ್ತಾರೆ. ಸೈಕಲ್ ಬಳಕೆಯಿಂದಾಗಿ ಕಾಯಿಲೆಗಳಿಂದ ದೂರವಾಗಿದ್ದೇನೆ ಎಂದು ಸಹ ಹೇಳಿದ್ದಾರೆ.