Just In
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 2 hrs ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಐಜಿ ಕಾರಿಗೂ ಬಿತ್ತು ದುಬಾರಿ ದಂಡ
ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಅಧಿಕವಾಗಿವೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದೇ ಈ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಳೆದ ವರ್ಷ ನೂತನ ಸಂಚಾರಿ ನಿಯಮವನ್ನು ಜಾರಿಗೊಳಿಸಿದ್ದರು.
ನೂತನ ಸಂಚಾರಿ ನಿಯಮ ಜಾರಿಯಾದ ಬಳಿಕ ಭಾರೀ ಪ್ರಮಾಣದಲ್ಲಿ ದುಬಾರಿ ದಂಡವನ್ನು ವಿಧಿಸಿದ ಹಲವು ಪ್ರಕರಣಗಳು ವರದಿಯಾಗಿವೆ. ಇದರ ನಡುವೆ ಕೆಲವು ಕಡೆಗಳಲ್ಲಿ ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸಂಚಾರಿ ನಿಯಮವನ್ನು ಉಲ್ಲಂಘಿಸಿದಾಗ ದಂಡ ವಿಧಿಸಿದ ಪ್ರಕರಣಗಳು ವರದಿಯಾಗಿವೆ. ಅದೇ ಮಾದರಿಯಲ್ಲಿ ಚಂಡೀಗಡದ ಪೊಲೀಸ್ ಉನ್ನತ ಅಧಿಕಾರಿಯ ವಾಹನವು ಸಂಚಾರಿ ನಿಯಮವನ್ನು ಉಲ್ಲಂಘಿಸಿದೆ.
ನೂತನ ಸಂಚಾರಿ ನಿಯಮ ಕೆಲವು ರಾಜ್ಯಗಳಲ್ಲಿ ಜಾರಿಯಲ್ಲಿದೆ. ಕೆಲವು ರಾಜ್ಯಗಳು ಜಾರಿಗೊಳಿಸಿಲ್ಲ, ಇನ್ನೂ ಕೆಲವು ರಾಜ್ಯಗಳು ತಿದ್ದುಪಡಿ ನಡೆಸಿ ಜಾರಿಗೊಳಿಸಿದರು. ಅದರಂತೆ ಸರ್ಕಾರಿ ಅಧಿಕಾರಿಗಳು ಸಂಚಾರಿ ನಿಯಮವನ್ನು ಉಲ್ಲಂಘಿಸಿದರೆ ದುಪ್ಪಟು ದಂಡವನ್ನು ಪಾವತಿಸಬೇಕಾಗುತ್ತದೆ.
ಪಂಜಾಬ್ ಪೊಲೀಸರ ವಿಶೇಷ ಘಟಕಕ್ಕೆ ಸೇರಿರುವ ಟೊಯೊಟಾ ಫಾರ್ಚೂನರ್ ವಾಹನ ಒಂದು ರೆಡ್ ಸಿಗ್ನಲ್ ಇದ್ದಾಗ ಜೀಬ್ರಾ ಕ್ರಾಸ್ ಮೀರಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದೆ. ಕಳೆದ ಶನಿವಾರ ಬೆಳೆಗ್ಗೆ 8.30ಕ್ಕೆ ಚಂಡೀಗಡದ ಹಲ್ಲೋಮಜ್ರಾ ಟ್ರಾಫಿಕ್ ಸಿಗ್ನಿಲ್ ಬಳಿ ಘಟನೆ ನಡೆದಿದೆ.
ಪಂಜಾಬ್ ಪೊಲೀಸರಿಗೆ ಸೇರಿರುವ ಫಾರ್ಚೋನರ್ ವಾಹನವು ಸಂಚಾರಿ ನಿಯಮವನ್ನು ಉಲ್ಲಂಘಿಸಿರುವುದನ್ನು ಸಾರ್ವಜನಿಕರೊಬ್ಬರು ಫೋಟೋ ತೆಗೆದಿದ್ದಾರೆ. ನಂತರ ಆ ಪೋಟೋವನ್ನು ಚಂಡೀಗಡದ ಪೊಲೀಸರ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.
ಎಚ್ಚೆತ್ತ ಸಂಚಾರಿ ಪೊಲೀಸರು ಚಿತ್ರವನ್ನು ಪರಿಶೀಲಿಸಿ ಕ್ರಮ ತೆಗೆದುಕೊಂಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘಸಿದ ಟೊಯೊಟಾ ಫಾರ್ಚೂನರ್ ಎಸ್ಯುವಿಯು ವಿಶೇಷ ಸಂರಕ್ಷಣಾ ಘಟಕದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್(ಐಜಿಪಿ) ಅವರ ಹೆಸರಿನಲ್ಲಿ ನೋಂದಾಯಿಸಲಾಗಿದೆ.
ಐಜಿ ಅವರು ಈ ವಾಹನವನ್ನು ವೈಯಕ್ತಿಕವಾಗಿ ಬಳಸುತ್ತಾರೆಯೇ ಅಥವಾ ಅದು ಬೆಂಗಾವಲಿನ ವಾಹನವೇ ಎಂದು ತಿಳಿದಿಲ್ಲ. ಹೆಚ್ಚಿನ ಪೋಲಿಸ್ ಇಲಾಖೆಗಳು ತಮ್ಮ ವಾಹನಗಳನ್ನು ತಂಡದ ಹಿರಿಯ ಅಧಿಕಾರಿಗಳ ಹೆಸರಿನ ಮೇಲೆ ನೋಂದಾಯಿಸಿಕೊಳ್ಳುತ್ತಾರೆ.
ರೆಡ್ ಸಿಗ್ನಲ್ ಇದ್ದಾಗ ಜೀಬ್ರಾ ಕಾಸ್ ಅನ್ನು ಮೀರಿ ವಾಹನವನ್ನು ನಿಲ್ಲಿಸಿರುವುದಕ್ಕೆ ರೂ.500ರಷ್ಟು ದಂಡವನ್ನು ಪಂಜಾಬ್ ಸಂಚಾರಿ ಪೊಲೀಸರು ವಿಧಿಸಿದ್ದಾರೆ. ಪಂಚಾಬ್ ಪೊಲೀಸರಿಗೆ ಸೇರಿರುವುದರಿಂದ ನೂತನ ಸಂಚಾರಿ ನಿಯಮದ ಪ್ರಕಾರ ದುಪ್ಪಟ್ಟು ದಂಡವನ್ನು ಪಾವತಿಸಬೇಕಾಗುತ್ತದೆ.
ಆನ್ಲೈನ್ ದಾಖಲೆಯಲ್ಲಿ ರೂ.500ರಷ್ಟು ದಂಡದ ಚಲನ್ ಅನ್ನು ಸಂಚಾರಿ ಪೊಲೀಸರು ನೀಡಿದ್ದಾರೆ. ಆದರೆ ನೂತನ ಸಂಚಾರಿ ನಿಯಮದ ಪ್ರಕಾರ ಪೊಲೀಸರು ನಿಯಮವನ್ನು ಉಲ್ಲಂಘಿಸಿದರೆ ದುಪ್ಪಟು ದಂಡವನ್ನು ಪಾವತಿಸಬೇಕು.
ವಿಶ್ವದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳಲ್ಲಿ ಭಾರತವು ಒಂದಾಗಿದೆ. ಭಾರತದ ರಸ್ತೆಗಳಲ್ಲಿ ಪ್ರತಿವರ್ಷವು ಅಪಘಾತದಲ್ಲಿ ಸಾವಿರಾರು ಜನರ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇಂತಹ ಭೀಕರ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಹೊಸ ಮೋಟಾರು ಕಾಯ್ದೆಯನ್ನು ಜಾರಿಗೊಳಿಸಿದ್ದರು.
ಆದರೆ ತೀವ್ರ ಅಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಕೆಲವು ರಾಜ್ಯಗಳನ್ನು ಇದನ್ನು ಜಾರಿಗೊಳಿಸಿಲ್ಲ, ಇನ್ನೂ ಕೆಲವು ರಾಜ್ಯಗಳಲ್ಲಿ ತಿದ್ದುಪಡಿಗೊಳಿಸಿ ಜಾರಿಗೊಳಿಸಿದ್ದಾರೆ. ದಂಡದ ಪ್ರಮಾಣವು ಹೆಚ್ಚಾದರೂ ಸಂಚಾರಿ ನಿಯಮ ಉಲ್ಲಂಘನೆಯು ಕಡಿಮೆಯಾಗುತ್ತದೆ ಎಂಬುದನ್ನು ಅರಿಯಬೇಕು
ಕಾನೂನು ಎಲ್ಲರಿಗೂ ಒಂದೇ. ಬಡವರು, ಶ್ರೀಮಂತರು ಅಥವಾ ಅಧಿಕಾರಿ ವರ್ಗ ಎನ್ನುವ ಬೇಧಭಾವ ಕಾನೂನಿನಲ್ಲಿಲ್ಲ ಅದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಆದರೆ ಕಾನೂನು ಪಾಲಕರೇ ಕಾನೂನು ಉಲ್ಲಂಘಿಸುವುದು ವಿಪರ್ಯಾಸವಾಗಿದೆ.