Just In
- 10 min ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 1 hr ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- 2 hrs ago ಅತ್ಯಾಧುನಿಕ ಅಡಾಸ್ನೊಂದಿಗೆ ಬರಲಿದೆ ಈ ಕಿಯಾ ಕಾರು: ಟಾಟಾ ಪಂಚ್ಗೆ ಇನ್ನು ದೇವರೇ ಗತಿ!
- 2 hrs ago ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್.. ಕಡಿಮೆ ಖರ್ಚಿನಲ್ಲಿ ಹೋಗಬಹುದು!
Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Movies ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲ ಬಾರಿಗೆ ವಿಮಾನದಲ್ಲಿ ಬಯೊ ಫ್ಯೂಯಲ್ ಬಳಸಿದ ವಾಯುಸೇನೆ
ಭಾರತದ ಪ್ರತಿಯೊಂದು ಮನೆಯಲ್ಲಿಯೂ ಒಂದು ವಾಹನಗಳಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಮನೆಯಾದರೂ ಸರಿ ಕನಿಷ್ಟ ಪಕ್ಷ ಒಂದಾದರೂ ವಾಹನವು ಇದ್ದೇ ಇರುತ್ತದೆ. ಜನರು ಕಾರು ಹಾಗೂ ಬೈಕ್ಗಳ ಬಳಕೆಯನ್ನು ಹೆಚ್ಚಿಸಿದ್ದಾರೆ.
ಇತ್ತೀಚಿಗಷ್ಟೇ ಭಾರತದ ಆಟೋಮೊಬೈಲ್ ಉದ್ಯಮವು ಸಂಕಷ್ಟವನ್ನು ಎದುರಿಸಿತ್ತು. ಆದರೂ ವಾಹನಗಳ ಮಾರಾಟದಲ್ಲಿ ಕುಸಿತವಾಗಿರಲಿಲ್ಲ. ಡೀಸೆಲ್ ಹಾಗೂ ಪೆಟ್ರೋಲ್ಗಾಗಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಬೇಡಿಕೆ ಹೆಚ್ಚುತ್ತಿರುವ ಕಾರಣಕ್ಕೆ ಭಾರತವು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ.
ಭಾರತದಲ್ಲಿ ಬಳಕೆಯಾಗುವ 85% ಡೀಸೆಲ್ - ಪೆಟ್ರೋಲ್ ಅನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಭಾರತವು ಪ್ರಪಂಚದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ದೇಶವಾಗಿದೆ. ಇದು ಹೆಮ್ಮೆ ಪಡುವ ವಿಷಯವಲ್ಲ.
ಈ ರೀತಿ ಆಮದು ಮಾಡಿಕೊಳ್ಳಲು ಭಾರತವು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಇದು ಭಾರತದ ಅರ್ಥ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತಿದೆ. ಇದಿಷ್ಟು ಮಾತ್ರವಲ್ಲದೇ ಡೀಸೆಲ್ ಪೆಟ್ರೋಲ್ ವಾಹನಗಳಿಂದ ಪರಿಸರದ ಮೇಲೂ ಪರಿಣಾಮ ಉಂಟಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿರವರು ಕಚ್ಚಾ ತೈಲದ ಆಮದನ್ನು ಕಡಿಮೆಗೊಳಿಸಲು ಬಯಸಿದ್ದಾರೆ. ಈ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಪರ್ಯಾಯ ಇಂಧನವನ್ನು ಬಳಸುವ ವಾಹನಗಳಿಗೂ ಉತ್ತೇಜನ ನೀಡಲಾಗುತ್ತಿದೆ.
ಈ ನಿಟ್ಟಿನಲ್ಲಿ ಭಾರತೀಯ ವಾಯು ಸೇನೆಯು ಸಹ ಹೆಜ್ಜೆ ಇಟ್ಟಿದೆ. ಭಾರತೀಯ ವಾಯು ಸೇನೆಯು ಹಲವಾರು ವಿಮಾನಗಳನ್ನು ಹೊಂದಿದೆ. ಇವುಗಳಲ್ಲಿ ಎಎನ್ 32 ಕೂಡ ಒಂದು. ಈ ವಿಮಾನವನ್ನು ಏರ್ಕ್ರಾಫ್ಟ್ ಸಾಗಾಣೆಗೆ ಬಳಸಲಾಗುತ್ತದೆ.
ಈ ಎಎನ್ 32 ವಿಮಾನದಲ್ಲಿ ಬಯೊ ಫ್ಯೂಯಲ್ ಅನ್ನು ಬಳಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿರವರು ಎಎನ್ 32 ವಿಮಾನದ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಬಯೊ ಫ್ಯೂಯಲ್ ಅನ್ನು ಹೊಂದಿರುವ ಈ ವಿಮಾನವು ಲೇಹ್ನಲ್ಲಿರುವ ಕುಶೋಕ್ ಬಗುಲಾ ರಿಂಬೋಶ್ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿದೆ.
ಎಎನ್ 32 ವಿಮಾನದಲ್ಲಿ 10% ಬಯೊ ಜೆಟ್ ಫ್ಯೂಯಲ್ ಅನ್ನು ಬಳಸಲಾಗಿದೆ. ಈ ಬಯೊ ಫ್ಯೂಯಲ್ ಅನ್ನು ಸ್ಥಳೀಯವಾಗಿ ತಯಾರಿಸಲಾಗಿದೆ. ಪ್ರಧಾನ ಮಂತ್ರಿಗಳು ಇದನ್ನೂ ಸಹ ಶ್ಲಾಘಿಸಿದ್ದಾರೆ. ಈ ರೀತಿಯ ಕ್ರಮಗಳಿಂದಾಗಿ ಮಾಲಿನ್ಯ ಪ್ರಮಾಣವು ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಆಮದು ಮಾಡಿಕೊಳ್ಳಲಾಗುವ ತೈಲದ ಮೇಲಿನ ಅವಲಂಬನೆಯು ಸಹ ಕಡಿಮೆಯಾಗಲಿದೆ. ಹೆಚ್ಚಿನ ಎತ್ತರದಲ್ಲಿರುವ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿ ಈ ವಿಮಾನವು ಇತಿಹಾಸವನ್ನು ಸೃಷ್ಟಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿರವರು ಮನ್ ಕೀ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
ಎಎನ್ 32 ವಿಮಾನವು ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಅತಿ ಎತ್ತರದ ಸ್ಥಳದಲ್ಲಿರುವ ವಿಮಾನ ನಿಲ್ದಾಣದಿಂದ ನಿರ್ಗಮಿಸಿದೆ ಎಂದು ಮೋದಿರವರು ಹೇಳಿದ್ದಾರೆ. ಮಾಲಿನ್ಯ ನಿಯಮವನ್ನು ನಿಯಂತ್ರಿಸಲು ಕೈಜೋಡಿಸಿರುವ ಭಾರತೀಯ ವಾಯು ಸೇನೆಗೆ ಅಭಿನಂದನೆಗಳು.