Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 13 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 14 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- News ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣ ಉಳಿಸಿಕೊಂಡ ಬೈಕ್ ಸವಾರ
ಭಾರತದಲ್ಲಿ ಪ್ರತಿದಿನ ನೂರಾರು ಅಪಘಾತಗಳು ಸಂಭವಿಸುತ್ತವೆ. ಹೆಚ್ಚಿನ ಅಪಘಾತಗಳಲ್ಲಿ ದ್ವಿಚಕ್ರ ವಾಹನಗಳು ಭಾಗಿಯಾಗಿರುತ್ತವೆ. ಈ ಕಾರಣಕ್ಕಾಗಿ ಭಾರತದ ಮೋಟಾರು ವಾಹನ ಕಾಯ್ದೆಯನ್ವಯ ದ್ವಿಚಕ್ರ ವಾಹನದಲ್ಲಿ ಸವಾರರಿಗೆ ಮಾತ್ರವಲ್ಲದೇ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಆದರೂ ಬಹುತೇಕ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುತ್ತಿಲ್ಲ. ಇದರಿಂದಾಗಿ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾದರೆ ಸವಾರರ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ದ್ವಿಚಕ್ರ ವಾಹನ ಸವಾರರು ನಿಗದಿತ ವೇಗಕ್ಕಿಂತ ವೇಗವಾಗಿ ಚಲಿಸುತ್ತಾರೆ. ಇದೂ ಸಹ ಅಪಘಾತಕ್ಕೆ ಕಾರಣವಾಗುತ್ತಿದೆ.
ಇತ್ತೀಚಿಗೆ ಕೇರಳದಲ್ಲಿ ನಡೆದ ಘಟನೆಯಲ್ಲಿ ಬೈಕ್ ಸವಾರ ಇನ್ನೇನು ಸತ್ತೇ ಹೋದ ಅಂದು ಕೊಳ್ಳುವಷ್ಟರಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ವೀಡಿಯೊದಲ್ಲಿ ಬೈಕ್ ಸವಾರ ದೊಡ್ಡ ಅಪಘಾತದಿಂದ ಪಾರಾಗುವುದನ್ನು ಕಾಣಬಹುದು. ಬಸ್ ಚಾಲಕನ ಚಾಣಾಕ್ಷತನದಿಂದ ಬೈಕ್ ಸವಾರ ಪಾರಾಗಿದ್ದಾನೆ. ಬಸ್ ಚಾಲಕ ಚಾತುರ್ಯದಿಂದ ದೊಡ್ಡ ಅಪಘಾತವು ತಪ್ಪಿದೆ.
ಅಪಘಾತ ಸಂಭವಿಸಿದ ಪ್ರದೇಶದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ವೀಡಿಯೊದಲ್ಲಿ ಬೈಕ್ ಸವಾರ ಇದ್ದಕ್ಕಿದ್ದಂತೆ ಜಾರಿ ಬೀಳುತ್ತಿರುವುದನ್ನು ಕಾಣಬಹುದು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು
ಬೈಕ್ ಸವಾರ ಮಳೆ ನೀರಿನಿಂದ ಒದ್ದೆಯಾಗಿದ್ದ ರಸ್ತೆಯಲ್ಲಿ ಬ್ರೇಕ್ ಹಾಕಿದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಸವಾರನು ಸಹ ರಸ್ತೆಯ ಮೇಲೆ ಬಿದ್ದಿದ್ದಾನೆ. ಈ ವೇಳೆ ಖಾಸಗಿ ಬಸ್ ಬೈಕಿನ ಹಿಂದೆಯೇ ಬಂದಿದೆ.
ಬಸ್ ಚಾಲಕ ತಕ್ಷಣವೇ ಬಸ್ ಅನ್ನು ಪಕ್ಕಕ್ಕೆ ತಿರುಗಿಸಿ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ದೊಡ್ಡ ಅಪಘಾತವು ತಪ್ಪಿದೆ. ರಸ್ತೆ ತೇವವಾಗಿದ್ದ ಕಾರಣ ಬಸ್ಸಿನ ಮೇಲೆ ನಿಯಂತ್ರಣ ತಪ್ಪಿ, ಬಸ್ ಬೈಕ್ ಸವಾರನಿಗೆ ಗುದಿಯುವ ಸಾಧ್ಯತೆಗಳಿದ್ದವು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಆದರೆ ಬಸ್ ಚಾಲಕನು ಸಮಯಪ್ರಜ್ಞೆಯಿಂದ ಅಪಘಾತವನ್ನು ತಪ್ಪಿಸಿದ್ದಾನೆ. ಬೈಕಿಗೆ ಒಂದು ಸಣ್ಣ ಗೆರೆಯೂ ತಾಗದಂತೆ ನೋಡಿಕೊಂಡಿದ್ದಾನೆ. ಬೈಕ್ ಸವಾರ ಕೆಳಗೆ ಬಿದ್ದ ನಂತರ ಹಾಗೂ ಬಸ್ ಬ್ರೇಕ್ ಹಾಕಿ ನಿಲ್ಲಿಸಿದ ನಂತರ ಸ್ಥಳದಲ್ಲಿ ಜನ ಸೇರಿದ್ದಾರೆ.
ಈ ಘಟನೆ ನಡೆಯುವ ಮೊದಲು ಹಲವು ವಾಹನಗಳು ಇದೇ ರಸ್ತೆಯಲ್ಲಿ ಹಾದುಹೋಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆದರೆ ಯಾರಿಗೂ ತೊಂದರೆಯಾಗಿಲ್ಲ. ಆದರೆ ಈ ಬೈಕ್ ಸವಾರ ಏಕಾಏಕಿ ಬೈಕಿನ ಬ್ರೇಕ್ ಹಾಕಿದ ಕಾರಣ ಕೆಳಗೆ ಬಿದ್ದಿದ್ದಾನೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಸ್ಥಳದಲ್ಲಿದ್ದವರು ತಕ್ಷಣವೇ ಬೈಕಿನೊಂದಿಗೆ ಬೈಕ್ ಸವಾರನನ್ನು ಸಹ ಪಕ್ಕಕ್ಕೆ ಕರೆದೊಯ್ದಿದ್ದಾರೆ. ಒದ್ದೆಯಾದ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರು ವೇಗವಾಗಿ ಹೋಗಬಾರದು ಎಂಬುದನ್ನು ಈ ಘಟನೆಯ ಮೂಲಕ ತಿಳಿಯಬಹುದು.
ಒದ್ದೆ ರಸ್ತೆಗಳಲ್ಲಿ ವಾಹನಗಳ ಟ್ರಾಕ್ಷನ್ ಹಾಗೂ ಸ್ಟೆಬಿಲಿಟಿ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಹೀಗಾಗಿ ವಾಹನವು ನಿಯಂತ್ರಣವನ್ನು ಕಳೆದುಕೊಳ್ಳುತ್ತದೆ. ಈ ಪರಿಸ್ಥಿತಿಯೇ ದೊಡ್ಡ ಅಪಘಾತಗಳಿಗೆ ಕಾರಣವಾಗುತ್ತದೆ. ಇದಕ್ಕಾಗಿ ಮಳೆ ಬಂದಾಗ ನಿಧಾನವಾಗಿ ಚಲಿಸುವುದು ಸೂಕ್ತ.