Just In
- 2 hrs ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- 2 hrs ago ಯಾವುದೇ ಬೆಟ್ಟ, ಗುಡ್ಡಗಳು ಇದರ ಮುಂದೆ ಲೆಕ್ಕಕ್ಕಿಲ್ಲ: ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು
- 2 hrs ago 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- 3 hrs ago ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Movies ಸುಶಾಂತ್ ಸಿಂಗ್ ರಜಪೂತ್ ಸತ್ತಾಗ ಯಾರು ದು:ಖಿಸಲಿಲ್ಲ ; ಜನರಿಗೆ ಬೇಕಿದ್ದಿದ್ದು 'ಮಸಾಲೆಯುಕ್ತ ಗಾಸಿಪ್' ಅಷ್ಟೇ..!
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಸ್ ಮತ್ತು ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ; 9 ಮಂದಿ ಸಾವು
ಬಸ್ ಮತ್ತು ಟೆಂಪೋ ನಡುವೆ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 12 ಮಂದಿ ತೀವ್ರ ಗಾಯಗೊಂಡ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ನೆಡೆದಿದೆ.
ಬಸ್ ಮತ್ತು ಟೆಂಪೋ ನಡುವೆ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 12 ಮಂದಿ ತೀವ್ರ ಗಾಯಗೊಂಡ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ನೆಡೆದಿದೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ನಾರಾಯಣಗಾಂವ್ ಪ್ರದೇಶದಲ್ಲಿ ನಿಂತಿದ್ದ ಟೆಂಪೋಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಪ್ರಯಾಣಿಕರು ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡ ದುರ್ಘಟನೆ ನೆಡೆದಿದೆ. ಬಸ್ ಚಾಲಕ ಟೆಂಪೋ ನಿಂತಿರುವುದನ್ನು ಗಮನಿಸದೆ ಈ ದುರ್ಘಟನೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ಈ ಅಪಘಾತ ನಸುಕಿನಲ್ಲಿ ಸಂಭವಿಸಿದ್ದು, ಈ ಘಟನೆ ನೆಡೆದ ಸಮಯದಲ್ಲಿ ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿತ್ತು ಎಂಬ ಮಾಹಿತಿ ಹೊರಬಂದಿದೆ.
ಪುಣೆಯಿಂದ ನಾಸಿಕ್ನ ತ್ರಯಂಬಕೇಶ್ವರ್ಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತೆರಳುತ್ತಿದ್ದಾಗ ಪುಣೆಯಿಂದ 77 ಕಿ.ಮೀ. ದೂರದಲ್ಲಿ ಮುಂಜಾನೆ 1.45ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ನಾರಾಯಣಗಾಂವ್ ಪೊಲೀಸರು ತಿಳಿಸಿದ್ದಾರೆ.
"ಸತ್ತವರ ಗುರುತನ್ನು ಇನ್ನೂ ಪತ್ತೆಹಚ್ಚಬೇಕಾಗಿದೆ ಹಾಗು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ" ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಗಾಲದ ಸಮಯದಲ್ಲಿ ಮುಂದಿರುವ ವಸ್ತು ಕಾಣಿಸದೆ ಇರುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದ್ದು, ವಿಶೇಷವಾಗಿ ಕತ್ತಲೆಯ ಸಮಯದಲ್ಲಿ ಚಾಲಕ ಹೆಚ್ಚು ಜಾಗರೂಕನಾಗಿ ಇರಬೇಕಾಗುತ್ತದೆ. ಹೆಡ್ಲೈಟ್ನಿಂದ ಚೆಲ್ಲುವ ಬೆಳಕು ಸಾಕಷ್ಟು ಪರಿಣಾಮಕಾರಿಯಾಗಿರುವುದಿಲ್ಲ ಎಂಬ ಮಾತುಗಳು ಸಹ ಆಗಾಗ ಕೇಳಿಬರುತ್ತಿರುವುದನ್ನು ನಾವು ಗಮನಿಸಬಹುದಾಗಿದೆ.