Just In
- 1 hr ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 2 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 3 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 5 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್, ಡೀಸೆಲ್ ಇಂಧನಗಳಿಗೆ ಪರ್ಯಾಯ ಇಂಧನ ಒದಗಿಸಲಿದೆ ರಾವ್ಮತ್ ಇಂಡಸ್ಟ್ರೀಸ್
ರಾವ್ಮತ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಕಂಪನಿಯು ವೈವಿಧ್ಯಮಯ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ. ರಾವ್ಮತ್ ಕಂಪನಿಯು ಬಯೋ ಸಿಎನ್ಜಿ ಹಾಗೂ ನೈಸರ್ಗಿಕ ಅನಿಲ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ.
ಕಂಪನಿಯು ಈಗ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ನೆರವಾಗುವಂತಹ ವಾಹನವನ್ನು ಉತ್ಪಾದಿಸಿದೆ. ಕಂಪನಿಯು ಮಾಡಿದ ಪ್ರಯತ್ನವನ್ನು ಆಧರಿಸಿ ಈ ವಾಹನವನ್ನು ರಚಿಸಲಾಗಿದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳಿಂದ ಪರಿಸರ ವಾಯುಮಾಲಿನ್ಯ ದಿನೇ ದಿನೇ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಇಂಧನಗಳಿಗೆ ಪರ್ಯಾಯವಾಗಿರುವ ಇಂಧನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಇವುಗಳಲ್ಲಿ ನೈಸರ್ಗಿಕ ಅನಿಲ ಹಾಗೂ ಜೈವಿಕ ಅನಿಲಗಳು ಸಹ ಸೇರಿವೆ. ಪೆಟ್ರೋಲ್, ಡೀಸೆಲ್ ಇಂಧನಗಳಿಗೆ ಹೋಲಿಸಿದರೆ ಈ ಇಂಧನಗಳು ಕಡಿಮೆ ವಾಯು ಮಾಲಿನ್ಯ ಉಂಟು ಮಾಡುತ್ತವೆ.
ಕಂಪನಿಯು ಈ ವರ್ಷದ ಫೆಬ್ರವರಿ 12 ರಂದು ತನ್ನ ಮೊದಲ ಸಿಎನ್ಜಿ ಚಾಲಿತ ಟ್ರಾಕ್ಟರ್ ಅನ್ನು ಬಿಡುಗಡೆಗೊಳಿಸಿತು. ಇದು ಭಾರತದ ಮೊದಲ ಸಿಎನ್ಜಿ ಟ್ರಾಕ್ಟರ್ ಆಗಿದೆ. ಈ ಟ್ರಾಕ್ಟರ್ ಅನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಡುಗಡೆಗೊಳಿಸಿದರು.
ರಾಷ್ಟ್ರ ರಾಜಧಾನಿ ದೆಹಲಿಯ ಮೋತಿಲಾಲ್ ನೆಹರು ಅರಮನೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿಎನ್ಜಿ ಟ್ರ್ಯಾಕ್ಟರ್ ಬಿಡುಗಡೆ ಸಮಾರಂಭದಲ್ಲಿ ನರೇಂದ್ರ ಸಿಂಗ್ ತೋಮರ್, ಧರ್ಮೇಂದ್ರ ಪ್ರಧಾನ್, ಜನರಲ್ ವಿಕೆ ಸಿಂಗ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.
ಜೈವಿಕ ಅನಿಲವು ನೈಸರ್ಗಿಕ ತ್ಯಾಜ್ಯಗಳಿಂದ ಉತ್ಪತ್ತಿಯಾಗುವ ಅನಿಲವಾಗಿದೆ. ಈ ಅನಿಲವನ್ನು ಕೃಷಿ ತ್ಯಾಜ್ಯ, ಆಹಾರ ತ್ಯಾಜ್ಯ, ಕಾಂಪೋಸ್ಟ್, ಪುರಸಭೆ ತ್ಯಾಜ್ಯ, ಸಸ್ಯಗಳ ತ್ಯಾಜ್ಯ ಹಾಗೂ ಒಳಚರಂಡಿಗಳ ತ್ಯಾಜ್ಯದಿಂದ ತಯಾರಿಸಲಾಗುತ್ತದೆ.
ರಾವ್ಮತ್ ಮೋಟಾರ್ಸ್ ಈ ಅನಿಲವನ್ನು ಉತ್ಪಾದಿಸುತ್ತಿದೆ. ಈ ಅನಿಲವನ್ನು ವಾಹನಗಳಲ್ಲಿ ಮಾತ್ರವಲ್ಲದೆ ರೆಸ್ಟೋರೆಂಟ್ಗಳಲ್ಲಿ ಹಾಗೂ ಕಾರ್ಖಾನೆಗಳಲ್ಲಿಯೂ (ವೆಲ್ಡಿಂಗ್ ಕಾರ್ಯಾಗಾರಗಳು) ಬಳಸಲಾಗುತ್ತದೆ.
ಇತ್ತೀಚೆಗೆ ಭಾರತದಲ್ಲಿ ಸಿಎನ್ಜಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಿಎನ್ಜಿ ವಾಹನಗಳು ಕಡಿಮೆ ಮಾಲಿನ್ಯವನ್ನು ಹೊರ ಸೂಸುವುದರ ಜೊತೆಗೆ ಹೆಚ್ಚು ಇಂಧನ ಆರ್ಥಿಕತೆಯನ್ನು ಹೊಂದಿರುತ್ತವೆ.
ಈ ಕಾರಣಕ್ಕಾಗಿಯೇ ಸಿಎನ್ಜಿ ವಾಹನಗಳ ಜನಪ್ರಿಯತೆ ಹೆಚ್ಚಾಗುತ್ತಿದೆ. ಬಯೋ ಸಿಎನ್ಜಿ ವಾಹನಗಳನ್ನು ಹೆಚ್ಚು ಬಳಸುವುದರಿಂದ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಬಹುದು. ಜೊತೆಗೆ ವಿದೇಶಿ ವಿನಿಮಯದಲ್ಲಿ ಕೋಟ್ಯಂತರ ರೂಪಾಯಿಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ. ಈ ಬಗ್ಗೆ ಇಟಿ ಆಟೋ ವರದಿ ಮಾಡಿದೆ.