Just In
- 2 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 2 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 4 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 5 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯ್ಯಪ್ಪ ದರ್ಶನಕ್ಕೆ ಹೋಗುವವರಿಗೆ ಸಿಗಲಿದೆ ಬಾಡಿಗೆ ಬೈಕ್
ಶಬರಿಮಲೆ ಯಾತ್ರೆಗೆ ತೆರಳುವವರು ಚೆಂಗಾನೂರ್ ರೈಲ್ವೆ ನಿಲ್ದಾಣದಿಂದ ಪಂಪಾವರೆಗೆ ಬೈಕ್ ಅನ್ನು ಬಾಡಿಗೆಗೆ ಪಡೆದು ಪ್ರಯಾಣಿಸಬಹುದು. ಈ ಯೋಜನೆಯನ್ನು ದಕ್ಷಿಣ ರೈಲ್ವೆಯ ತಿರುವನಂತಪುರ ವಿಭಾಗವು ಶಬರಿಮಲೆಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಆರಂಭಿಸಿದೆ.
ಈ ಯೋಜನೆಗೆ ಕಳೆದ ಗುರುವಾರ ಚಾಲನೆ ನೀಡಲಾಗಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ ತಿರುವನಂತಪುರ ಹಾಗೂ ಪಲಕ್ಕಾಡ್ ವಿಭಾಗದಲ್ಲಿ ಬರುವ ಎಲ್ಲಾ ಪ್ರಮುಖ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ನೀಡಲಾಗುವುದು.
ರೈಲ್ವೆ ಇಲಾಖೆಯು ಇದೇ ಮೊದಲ ಬಾರಿಗೆ ಈ ಯೋಜನೆಯನ್ನು ಆರಂಭಿಸಿದೆ. ತಿರುವನಂತಪುರ ವಿಭಾಗದ ಕಮರ್ಶಿಯಲ್ ಮ್ಯಾನೇಜರ್ ಎಂ ಬಾಲಮುರಳಿರವರು ಮಾತನಾಡಿ, ಈ ಸೇವೆಯನ್ನು ಕೊಚ್ಚಿ ಮೂಲದ ಕೆಫೆ ರೈಡರ್ಸ್ ಬೈಕ್ ಸೇವಾ ಸಂಸ್ಥೆಯು ನೀಡಲಿದೆ ಎಂದು ಹೇಳಿದರು.
ಶಬರಿಮಲೆ ಯಾತ್ರೆಗೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ಚೆಂಗಾನೂರ್ ಅನ್ನು ಮೊದಲ ನಿಲ್ದಾಣವನ್ನಾಗಿ ಆಯ್ಕೆ ಮಾಡಲಾಯಿತು ಎಂದು ಅವರು ಹೇಳಿದರು. ಯಾತ್ರಿಗಳು ಈ ಯೋಜನೆಯಡಿಯಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಹಾಗೂ ಹಾರ್ಲೆ ಡೇವಿಡ್ಸನ್ ಬೈಕ್ಗಳನ್ನು ಬಾಡಿಗೆಗೆ ಪಡೆಯಬಹುದು.
ಆರಂಭಿಕ ಹಂತದಲ್ಲಿ 10 ರಾಯಲ್ ಎನ್ಫೀಲ್ಡ್ ಬೈಕ್ಗಳನ್ನು ಈ ಯೋಜನೆಗಾಗಿ ಬಳಸಲಾಗುವುದು. ಈ ಎಲ್ಲಾ ಬೈಕ್ಗಳೂ ಚೆಂಗಾನೂರ್ ರೈಲ್ವೆ ನಿಲ್ದಾಣದಲ್ಲಿ ಬಾಡಿಗೆಗೆ ದೊರೆಯಲಿವೆ. ಈ ಬೈಕ್ಗಳ ಬಾಡಿಗೆಯನ್ನು ಪ್ರತಿದಿನಕ್ಕೆ 200 ಕಿ.ಮೀಗಳವರೆಗೆ ರೂ.1,200 ಎಂದು ನಿಗದಿಪಡಿಸಲಾಗಿದೆ.
ನಿಗದಿತ ಸಮಯವನ್ನು ಮೀರಿದರೆ ಪ್ರತಿ ಗಂಟೆಗೆ ರೂ.100 ಹೆಚ್ಚುವರಿಯಾಗಿ ನೀಡಬೇಕಾಗುತ್ತದೆ. ನಿಗದಿಪಡಿಸಲಾಗಿರುವ 200 ಕಿ.ಮೀ ದೂರವನ್ನು ಮೀರಿದರೆ ಪ್ರತಿ ಕಿ.ಮೀಗೆ ರೂ.6 ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ.
ಮುಂದಿನ ಒಂದು ತಿಂಗಳ ಅವಧಿಯಲ್ಲಿ ಎರ್ನಾಕುಲಂ, ತಿರುವನಂತಪುರಂ, ಕೊಟ್ಟಾಯಂ, ಆಲಾಪುಲ ಹಾಗೂ ತ್ರಿಶೂರ್ಗಳಲ್ಲಿ ಈ ಬೈಕ್ ಸೇವೆಯನ್ನು ಆರಂಭಿಸುವುದಾಗಿ ಬಾಲಮುರಳಿರವರು ತಿಳಿಸಿದರು.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
ಹಲವು ಕಂಪನಿಗಳು ಪ್ರಯಾಣಿಕರಿಗೆ ತೊಂದರೆರಹಿತ ಸೇವೆಯನ್ನು ನೀಡುವ ಉದ್ದೇಶದಿಂದ ಟೆಂಡರ್ಗಳನ್ನು ಸಲ್ಲಿಸಿವೆ ಎಂದು ಅವರು ತಿಳಿಸಿದರು. ರೈಲ್ವೆ ಇಲಾಖೆಯು ಸದ್ಯದಲ್ಲೇ ಪ್ರಯಾಣಿಕರಿಗೆ ಕಾರುಗಳನ್ನು ಬಾಡಿಗೆಗೆ ನೀಡುವ ಯೋಜನೆಯನ್ನು ಆರಂಭಿಸುವ ಯೋಜನೆಯನ್ನು ಹೊಂದಿದೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಈ ಸೇವೆಯನ್ನು ನೀಡುವ ಕಂಪನಿಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದ್ದು, ಸದ್ಯದಲ್ಲೇ ಯೋಜನೆಯು ಶುರುವಾಗಲಿದೆಯೆಂದು ಬಾಲಮುರಳಿರವರು ಹೇಳಿದರು. ರೈಲ್ವೆ ಇಲಾಖೆಯು ತ್ರಿಶೂರ್, ಎರ್ನಾಕುಲಂ ಹಾಗೂ ಕೊಟ್ಟಾಯಂಗಳಿಗಾಗಿ ಟೆಂಡರ್ಗಳನ್ನು ಸ್ವೀಕರಿಸಿದೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಈ ಯೋಜನೆಯ ಬಗ್ಗೆ ಮಾತನಾಡಿದ, ಕೆಫೆ ರೈಡ್ಸ್ ಮ್ಯಾನೇಜಿಂಗ್ ಪಾರ್ಟ್ನರ್ ಸನೀಶ್ ರಾಜಪ್ಪನ್ರವರು ನಾವು ಈಗ ಚೆಂಗಾನೂರ್ ರೈಲ್ವೆ ನಿಲ್ದಾಣದಲ್ಲಿ 500 ಸಿಸಿಯ ರಾಯಲ್ ಎನ್ಫೀಲ್ಡ್ ಬೈಕುಗಳನ್ನು ಬಾಡಿಗೆಗೆ ನೀಡುತ್ತಿದ್ದೇವೆ ಎಂದು ಹೇಳಿದರು.
ಹಾರ್ಲೆ ಡೇವಿಡ್ಸನ್ ಕಂಪನಿಯು ಎಷ್ಟು ಸಂಖ್ಯೆಯ ಬೈಕ್ಗಳನ್ನು ನೀಡಲಿದೆ ಎಂಬುದು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ತಿಳಿದು ಬರಲಿದೆ ಎಂದು ಅವರು ತಿಳಿಸಿದರು.
Image Courtesy: Sujith Viswanath, Chengannur