Just In
- 1 hr ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 1 hr ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 1 hr ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 2 hrs ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿದವರ ಫೋಟೋ ತೆಗೆದು ಕಳುಹಿಸಿದವರಿಗೆ ರೂ.500 ಬಹುಮಾನ!
ಟ್ರಾಫಿಕ್ ನಿಯಮ ಉಲ್ಲಂಘಿಸುವವರನ್ನು ದಾರಿಗೆ ತರಲು ಕೇಂದ್ರ ಸರ್ಕಾರ ಈ ಬಾರಿ ವಿಭಿನ್ನ ಆಲೋಚನೆಯೊಂದಿಗೆ ಬಂದಿದೆ. ರಸ್ತೆಗಳಲ್ಲಿ ಟ್ರಾಫಿಕ್ ನಿಯಮ ಉಲ್ಲಿಂಘಿಸುವವರ ಫೋಟೋ ತೆಗೆದು ಕಳುಹಿಸುವವರಿಗೆ ಬಹುಮಾನ ನೀಡುವ ಹೊಸ ಯೋಜನೆಯನ್ನು ತರಲಿದ್ದು, ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದೆ.
ನೋ ಪಾರ್ಕಿಂಗ್ನಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ವಾಹನ ಚಾಲಕರಿಂದ ನಿತ್ಯ ಸಂಚಾರ ನಿಯಮಗಳ ಉಲ್ಲಂಘನೆಯಾಗುತ್ತಲೇ ಇದೆ. ಇದಕ್ಕೆ ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಸವಾರರು ಪದೇ ಪದೇ ನಿಯಮಗಳನ್ನು ಲೆಕ್ಕಸುತ್ತಿಲ್ಲ. ಇವು ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಲು ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ದೇಶದ ಪ್ರತಿ ನಗರಗಳಲ್ಲೂ ಹಲವರು ರಸ್ತೆಗಳನ್ನು ಆಕ್ರಮಿಸಿಕೊಂಡು ವಾಹನಗಳನ್ನು ನಿಲ್ಲಿಸಿದರೆ, ಇನ್ನೂ ಕೆಲವರು ಪಾರ್ಕಿಂಗ್ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟು ಮಾಡುತ್ತಿದ್ದಾರೆ. ಇದರಿಂದ ಇತರೆ ವಾಹನಗಳು ಸಂಚರಿಸಲಾಗದೇ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ಕೆಲವೊಮ್ಮೆ ಆಂಬುಲನ್ಸ್ ಹಾಗೂ ಅಗ್ನಿ ಶಾಮಕದಳ ವಾಹನಗಳಿಗೆ ದಾರಿ ಸಿಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಮಸ್ಯೆ ಬಗೆಹರಿಸಲು ಕ್ರಿಯಾ ಯೋಜನೆ ರೂಪಿಸಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಅವರು ಸೂಚಿಸಿರುವ ಕೆಲವು ಸೂಚನೆಗಳು ಎಲ್ಲರ ಗಮನ ಸೆಳೆದಿವೆ. ಈ ನಿಯಮಗಳನ್ನು ಪಾಲಿಸುವ ಮೂಲಕ ನಾವು ಕೂಡ ಹಣ ಸಂಪಾದನೆ ಮಾಡಬಹುದು.
ಯಾವುದೇ ವಾಹನ ಮಾಲೀಕರು ಪಾರ್ಕಿಂಗ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಫೋಟೋ ತೆಗೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗರೀಕರಲ್ಲಿ ಮನವಿ ಮಾಡಿದ್ದಾರೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ನಿಲ್ಲಿಸಿದರೂ ಫೋಟೋ ಕಳುಹಿಸಬೇಕು ಎಂದು ಸೂಚಿಸಿದ್ದಾರೆ.
ಪಾರ್ಕಿಂಗ್ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಫೋಟೋ ಕಳುಹಿಸುವವರಿಗೆ 500 ರೂಪಾಯಿ ಬಹುಮಾನ ನೀಡುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಮೂಲಕ ನಿಯಮ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಿದರೆ, ಫೋಟೋ ಕಳುಹಿಸುವವರಿಗೆ 500 ರೂ. ಬಹುಮಾನ ದೊರೆಯಲಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡಿ, 'ದೊಡ್ಡ ನಗರಗಳಲ್ಲಿ ವಾಹನ ನಿಲುಗಡೆ ಸಮಸ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಈ ಸಮಸ್ಯೆ ಪರಿಹಾರಕ್ಕಾಗಿ ಹೊಸ ಕಾನೂನನ್ನು ತರಲಿದ್ದೇನೆ. ಈ ಕಾನೂನಿನ ಪ್ರಕಾರ, ತಪ್ಪಾದ ಸ್ಥಳದಲ್ಲಿ ವಾಹನ ನಿಲ್ಲಿಸಿದರೆ 1,000 ರೂ. ದಂಡ ವಿಧಿಸಿದರೆ, ಫೋಟೋ ಕಳುಹಿಸಿದ ವ್ಯಕ್ತಿಗೆ 500 ರೂ. ನೀಡುವುದಾಗಿ ತಿಳಿಸಿದ್ದಾರೆ.
ಇದರಿಂದ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಸಿಗಲಿದೆ. ಆದರೆ ಈ ಕಾನೂನು ಯಾವಾಗ ಜಾರಿಗೆ ಬರಲಿದೆ? ಎಂಬುದರ ಬಗ್ಗೆ ಸದ್ಯಕ್ಕೆ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ. ಈ ಕುರಿತು ಹೇಳಿದ್ದಾರೆಯೇ ವಿನಹ ಯಾವಾಗ, ಹೇಗೆ ಎಂಬುದನ್ನು ತಿಳಿಸಿಲ್ಲ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬಹಿರಂಗವಾಗಿ ಮಾತನಾಡಬಲ್ಲರು ಎಂಬುದು ನಮಗೆ ತಿಳಿದಿದೆ. ಅವರು ರಸ್ತೆ ಸುರಕ್ಷತೆಗಾಗಿ ವಿವಿಧ ಸೃಜನಶೀಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದಕ್ಕೆ ಹಲವು ಉದಾಹರಣೆಗಳಿವೆ. ಹೀಗಾಗಿ ಪಾರ್ಕಿಂಗ್ ನಿಯಮಾವಳಿಗೆ ಸಂಬಂಧಿಸಿದಂತೆ ಈಗ ಅವರು ಪ್ರಕಟಿಸಿರುವ ಹೊಸ ಕಾನೂನು ಶೀಘ್ರವೇ ಜಾರಿಗೆ ಬಂದರೂ ಅಚ್ಚರಿಪಡಬೇಕಾಗಿಲ್ಲ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಸ್ತೆ ಸುರಕ್ಷತೆ ಮತ್ತು ಕಚ್ಚಾ ತೈಲ ಆಮದು ಕಡಿಮೆ ಮಾಡಲು ಪರ್ಯಾಯ ಇಂಧನದಲ್ಲಿ ಚಲಿಸುವ ವಾಹನಗಳಿಗೆ ಬದಲಾಯಿಸುವ ಬಗ್ಗೆ ವಿವಿಧ ಸ್ಥಳಗಳಲ್ಲಿ ಮಾತನಾಡುತ್ತಿದ್ದಾರೆ. ಈ ಎರಡೂ ಸಂದರ್ಭಗಳಲ್ಲಿ ಅವರ ಸಚಿವಾಲಯವು ಭಾರತವನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ಮೂಲಸೌಕರ್ಯಗಳನ್ನು ಸುಧಾರಿಸಲು ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ತ್ವರಿತ ವೇಗ, ಸಂಚಾರ ನಿಯಮಗಳನ್ನು ಬಿಗಿಗೊಳಿಸುವುದು ಮತ್ತು ಎಲೆಕ್ಟ್ರಿಕ್ ಮತ್ತು ಸಿಎನ್ಜಿ ವಾಹನಗಳ ಹೆಚ್ಚಿಸಲು ಪ್ರಯತ್ನಗಳನ್ನು ವೇಗಗೊಳಿಸುತ್ತಿದ್ದಾರೆ. ಈ ನಡುವೆ ಎಲೆಕ್ಟ್ರಿಕ್ ವಾಹನಗಳಲ್ಲಿ ಪ್ರಮಾಣಿತ ಬ್ಯಾಟರಿ ಅಳವಡಿಕೆಗೆ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಇವಿಗಳ ಮೇಲೆ ಹೆಚ್ಚಿನ ನಂಬಿಕೆ ಬರಲು ತಯಾರಕರ ಗುಣಮಟ್ಟದ ಉತ್ಪನ್ನಗಳಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ವಾಹನ ತಯಾರಕರು ಬ್ಯಾಟರಿಗಳ ಅಳವಡಿಕೆಯಲ್ಲಿ ಯಾವುದೇ ಸಮಸ್ಯೆ ಇರದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ವಾಹನಗಳಲ್ಲಿನ ಬೆಂಕಿ ಅವಘಡಗಳು ಮತ್ತೆ ಕಾಣಿಸಿಕೊಂಡರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಡ್ರೈವ್ಸ್ಪಾರ್ಕ್ ಅಭಿಪ್ರಾಯ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ಪಾರ್ಕಿಂಗ್ ಸಮಸ್ಯೆಗೆ ಶೀಘ್ರದಲ್ಲೇ ಉತ್ತಮ ಪರಿಹಾರವನ್ನು ಕಂಡುಕೊಳ್ಳಲಿದೆ ಎಂಬ ನಿರೀಕ್ಷೆಯಿದೆ. ಗಡ್ಕರಿ ಅವರ ಘೋಷಣೆಗೆ ಪ್ರಸ್ತುತ ದೊಡ್ಡ ನಗರಗಳಲ್ಲಿ ಟ್ರಾಫಿಕ್ ದಟ್ಟಣೆ ಸಮಸ್ಯೆಯಿಂದ ಬಳಲುತ್ತಿರುವವರು ಶ್ಲಾಘಿಸುತ್ತಿದ್ದಾರೆ. ಅವರ ಹೊಸ ನಿಯಮಗಳು ಜಾರಿಯಾದ ನಂತರ ಯಾವ ಮಟ್ಟಿಗೆ ಯಶಸ್ವಿಯಾಗಲಿವೆ ಕಾದುನೋಡಬೇಕಿದೆ.