Just In
- 12 min ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- 2 hrs ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 2 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 2 hrs ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
Don't Miss!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಸಕರ ಸ್ಟಿಕ್ಕರ್ ಹೊಂದಿದ್ದ ಕಾರಿಗೆ ದಂಡ ವಿಧಿಸಿದ ಪೊಲೀಸರು..!
ಕರೋನಾ ವೈರಸ್ ಹರಡದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ ದೇಶಾದ್ಯಂತ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಸಹ ಸೇರಿದೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚಿವೆ. ಕರೋನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಲಾಕ್ ಡೌನ್ ನಿಂದಾಗಿ ರಸ್ತೆಗಳು ನಿರ್ಜನವಾಗಿವೆ. ಜನರು ಹೊರಬಾರದಂತೆ ನಿರ್ಬಂಧ ವಿಧಿಸಲಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಕಠಿಣ ತಪಾಸಣೆ ನಡೆಸುತ್ತಿದ್ದಾರೆ. ಹಲವೆಡೆ ತಪಾಸಣೆಗಳನ್ನು ನಡೆಸಲಾಗುತ್ತಿದೆ. ಜನರು ತಮ್ಮ ಅಗತ್ಯ ವಸ್ತುಗಳ ಖರೀದಿಗೆ ಹೊರತುಪಡಿಸಿ ಹೊರಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಹೆಚ್ಚಿನ ಸಂಖ್ಯೆಯ ಜನರು ಮನೆಯಲ್ಲಿಯೇ ಇದ್ದರೆ, ಕೆಲವು ಕಿಡಿಗೇಡಿಗಳು ಮಾತ್ರ ಬೀದಿ ಬೀದಿ ಸುತ್ತುತ್ತಿದ್ದಾರೆ. ಕೆಲವರು ಪೊಲೀಸರಿಗೆ ಮೋಸಮಾಡಿ ಓಡಾಡುತ್ತಿರುವ ಘಟನೆಗಳು ವರದಿಯಾಗಿವೆ.
ಇದೇ ರೀತಿಯ ಮತ್ತೊಂದು ಘಟನೆ ಉತ್ತರ ಭಾರತದಲ್ಲಿ ನಡೆದಿದೆ. ಈ ಘಟನೆಯಲ್ಲಿ, ಬಿಳಿ ಬಣ್ಣದ ಟೊಯೊಟಾ ಫಾರ್ಚೂನರ್ ಕಾರಿನ ಮೇಲೆ ಶಾಸಕರ ಸ್ಟಿಕ್ಕರ್ ಬಳಸಲಾಗಿತ್ತು. ಈ ಕಾರಿನಲ್ಲಿ ಇಬ್ಬರು ಯುವಕರು ಪ್ರಯಾಣಿಸುತ್ತಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರಚಲು ಕಾರಿನ ಮೇಲೆ ಈ ಸ್ಟಿಕ್ಕರ್ ಅಂಟಿಸಲಾಗಿತ್ತೆಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
ಈ ಯುವಕರು ತಮ್ಮನ್ನು ಶಾಸಕರ ಸಂಬಂಧಿಕರೆಂದು ಹೇಳಿಕೊಂಡಿದ್ದಾರೆ. ಹೊರಗೆ ಓಡಾಡಲು ತಮಗೆ ವಿಶೇಷ ಪಾಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಆ ಯುವಕರು ಶಾಸಕರ ಹೆಸರನ್ನು ಹೇಳಿಲ್ಲ. ಪೊಲೀಸರ ಕೆಲವು ಪ್ರಶ್ನೆಗಳಿಗೆ ಆ ಯುವಕರು ತಬ್ಬಿಬ್ಬಾಗಿದ್ದಾರೆ.
ಪೊಲೀಸರು ಆ ಯುವಕರಿಗೆ ರೂ.10,500 ದಂಡ ವಿಧಿಸಿದ್ದಾರೆ. ಈ ಘಟನೆ ದೆಹಲಿಯ ಪಕ್ಕದಲ್ಲಿರುವ ಹರಿಯಾಣ ರಾಜ್ಯದಲ್ಲಿ ನಡೆದಿದೆ. ಗುರುಗ್ರಾಮದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಈ ಯುವಕರನ್ನು ತಪಾಸಣೆಗೆ ಒಳಪಡಿಸಲಾಗಿದೆ.
ಕರೋನಾ ವೈರಸ್ ಬರದಂತೆ ತಡೆಯುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ. ಈ ಮಹಾಮಾರಿ ವೈರಸ್ ಒಬ್ಬರಿಗೆ ಇನ್ನೊಬ್ಬರಿಗೆ ಸುಲಭವಾಗಿ ಹರಡುತ್ತದೆ. ಈ ಕಾರಣಕ್ಕೆ ಜನರಿಗೆ ತಮ್ಮನ್ನು ತಾವು ಪ್ರತ್ಯೇಕವಾಗಿರುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನವಿ ಮಾಡಿಕೊಳ್ಳುತ್ತಿವೆ.
ಆದರೆ ಕೆಲವರು ರಜಾ ನೀಡಲಾಗಿದೆ ಎಂಬಂತೆ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಇದರಿಂದ ಅವರಿಗೆ ಮಾತ್ರವಲ್ಲದೇ ಅವರ ಅವಲಂಬಿತರೂ ಸಹ ಕರೋನಾ ವೈರಸ್ ಸೋಂಕಿಗೆ ಒಳಗಾಗಲಿದ್ದಾರೆ.
ಈ ಕಾರಣಕ್ಕೆ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ. ದಂಡ ವಿಧಿಸುವಂತಹ ಹಾಗೂ ವಾಹನ ವಶಕ್ಕೆ ಪಡೆಯುವಂತಹ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಚಿತ್ರ ಮೂಲ: ಅಮರ್ ಉಜಲಾ