Just In
- 5 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 8 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 8 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 10 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾತನ ಕೃಷಿ ಕಾರ್ಯಕ್ಕೆ ನೆರವಾಗಲು ಹೊಸ ವಾಹನ ಅಭಿವೃದ್ಧಿಪಡಿಸಿದ ಶಾಲಾ ಬಾಲಕ
ಕರೋನಾ ವೈರಸ್ ಹರಡಬಹುದೆಂಬ ಕಾರಣಕ್ಕೆ ಶಾಲೆ ಹಾಗೂ ಕಾಲೇಜುಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ಮನೆಯೊಳಗೆ ಬಂಧಿಯಾಗಿದ್ದಾರೆ. ಕೆಲವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ.
ಕೆಲ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರಿಯಾಶೀಲತೆಯನ್ನು ಹೊರ ಹಾಕಿದ್ದಾರೆ. ಹಳೆಯ ವಾಹನಗಳ ಬಿಡಿ ಭಾಗಗಳೊಂದಿಗೆ ವಿದ್ಯಾರ್ಥಿಗಳು ಹೊಸ ಬೈಕ್ ಹಾಗೂ ಸೈಕಲ್ಗಳನ್ನು ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ವರದಿಗಳಾಗಿವೆ. ಈಗ ಕೇರಳದ ಕೋಝಿಕೋಡ್ ಬಳಿಯ ಕೊಯಿಲಾಂಡಿ ಪ್ರದೇಶದ ಅದ್ವೈತ್ ಎಂಬ ವಿದ್ಯಾರ್ಥಿ ಹೊಸ ಸೇರ್ಪಡೆಯಾಗಿದ್ದಾನೆ.
ಆತ ಹೊಸ ಹೊಸ ಯಂತ್ರಗಳನ್ನು ರಚಿಸಲು ಆಸಕ್ತಿ ಹೊಂದಿದ್ದಾನೆ. ಶಾಲೆಗಳು ಮುಚ್ಚಿರುವ ಈ ಸಂದರ್ಭದಲ್ಲಿ ಆತ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಹೊಸ ವಾಹನವನ್ನು ಅಭಿವೃದ್ಧಿಪಡಿಸಿದ್ದಾನೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ಈ ವಾಹನವನ್ನು ಅಭಿವೃದ್ಧಿಪಡಿಸಲು ಅದ್ವೈತ್ ಹಳೆಯ ಬೈಕ್ ಬಳಸಿದ್ದಾನೆ. ಈ ವಾಹನವನ್ನು ವಿವಿಧ ಕೃಷಿ ಕಾರ್ಯಗಳಿಗೆ ಬಳಸಬಹುದು. ಈ ವಾಹನವನ್ನು ಹುಲ್ಲು ಕೊಯ್ಯಲು ಹಾಗೂ ಕೃಷಿ ಭೂಮಿಯನ್ನು ಉಳುಮೆ ಮಾಡಲು ಬಳಸಬಹುದು.
ಈ ವಾಹನವನ್ನು ಬಿತ್ತನೆ ಬೀಜಗಳನ್ನು ಬಿತ್ತಲು ಹಾಗೂ ನೀರು ಹಾಕಲು ಸಹ ಬಳಸಬಹುದು. ಅದ್ವೈತ್ ಈ ವಾಹನವನ್ನು ಚಾಲನೆ ಮಾಡುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು
ಅದ್ವೈತ್ ನ ಅಜ್ಜ ಕೃಷಿಕರಾಗಿದ್ದು, ಭೂಮಿ ಉಳುಮೆ ಮಾಡುವಾಗ ಹಾಗೂ ಬೀಜಗಳನ್ನು ಬಿತ್ತನೆ ಮಾಡುವಾಗ ಅವರು ಎದುರಿಸಿದ ತೊಂದರೆಗಳನ್ನು ಗಮನಿಸಿದ ಅದ್ವೈತ್ ಕೃಷಿ ಕೆಲಸಕ್ಕೆ ಬಳಸುವ ವಾಹನವನ್ನು ತಯಾರಿಸಲು ಮುಂದಾಗಿದ್ದಾನೆ.
ಹೊಸ ಯಂತ್ರದ ಬಗ್ಗೆ ಮಾತನಾಡಿರುವ ಅದ್ವೈತ್ ಈ ಯಂತ್ರವನ್ನು ಅಭಿವೃದ್ಧಿಪಡಿಸಿ, ಪರೀಕ್ಷಿಸಲು ನನಗೆ ಸುಮಾರು 6 ತಿಂಗಳು ಬೇಕಾಯಿತು. ಈ ವಾಹನದಲ್ಲಿ ಬಳಸಲಾಗಿರುವ 80%ಗಿಂತ ಹೆಚ್ಚು ಬಿಡಿಭಾಗಗಳು ಬಳಕೆಯಲ್ಲಿಲ್ಲದ ಹಳೆಯ ವಸ್ತುಗಳಾಗಿವೆ. ಈ ವಾಹನದಲ್ಲಿ ಹೀರೋ ಹೋಂಡಾ ಸ್ಪ್ಲೆಂಡರ್ ಎಂಜಿನ್ ಅಳವಡಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ನಮ್ಮ ಚಿಕ್ಕಪ್ಪನ ಬೈಕಿನಲ್ಲಿದ ಎಂಜಿನ್ ಅನ್ನು ಈ ವಾಹನದಲ್ಲಿ ಅಳವಡಿಸಲಾಗಿದೆ. ಈ ವಾಹನವು ಪೆಟ್ರೋಲ್ ಮೂಲಕ ಚಲಿಸುತ್ತದೆ. ಎಂಜಿನ್ ಹೊರತು ಪಡಿಸಿ ಬೇರೆ ಭಾಗಗಳು ಸೌರಶಕ್ತಿಯಿಂದ ಚಾಲನೆಯಾಗುತ್ತವೆ ಎಂದು ಹೇಳಿದ್ದಾನೆ. ಈ ವಾಹನದಲ್ಲಿ ವಾಟರ್ ಟ್ಯಾಂಕ್ ಸಹ ಅಳವಡಿಸಲಾಗಿದೆ. ಇದರಿಂದ ಬಿತ್ತನೆ ಬೀಜಗಳ ಮೇಲೆ ನೀರು ಸಿಂಪಡಿಸಲು ಅನುಕೂಲವಾಗಲಿದೆ.
ಹುಲ್ಲು ಕತ್ತರಿಸಲು ಈ ವಾಹನದಲ್ಲಿ ಕಟರ್ ಜೋಡಿಸಲಾಗಿದೆ. ಲಾಕ್ ಡೌನ್ ಅವಧಿಯನ್ನು ಸರಿಯಾಗಿ ಬಳಸಿಕೊಂಡು, ವಿವಿಧ ಕೃಷಿ ಕಾರ್ಯಗಳಿಗೆ ಬಳಸಬಹುದಾದ ವಾಹನವನ್ನು ಅಭಿವೃದ್ಧಿಪಡಿಸಿದ ಅದ್ವೈತನ ಕಾರ್ಯ ಶ್ಲಾಘನೀಯ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸೂಚನೆ: ಕೆಲವು ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.