Just In
- 39 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 3 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊಬೈಲ್ನಲ್ಲಿ ಮಾತನಾಡಲು ಹೋಗಿ ಮಕ್ಕಳ ಪ್ರಾಣ ತೆಗೆದ !!
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲಾ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲೇ ಸಾವನ್ನಪ್ಪಿದ್ದು, 6 ವಿದ್ಯಾರ್ಥಿಗಳು ಗಂಬೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನೆಡೆದಿದೆ.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲಾ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲೇ ಸಾವನ್ನಪ್ಪಿದ್ದು, 6 ವಿದ್ಯಾರ್ಥಿಗಳು ಗಂಬೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನೆಡೆದಿದೆ.
ರಾಮನಗರದ ಜಿಲ್ಲೆಯ ಹಾರೋಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮರಳುವಾಡಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮರಳವಾಡಿ ಹೋಬಳಿಯ ಗೆಂಡೇಗೌಡನದೊಡ್ಡಿ ಗ್ರಾಮದ ಜಯಲಕ್ಷ್ಮೀ ಮತ್ತು ಗಣೇಶ್ ದಂಪತಿಯ 7ವರ್ಷದ ಮಗು ಚರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತೀವ್ರವಾಗಿ ಗಾಯಗೊಂಡಿರುವ ಶರತ್, ಹೇಮಚಂದ್ರ, ಮಹೇಶ್, ಹರ್ಷಿತಾ ಹಾಗೂ ಲಿಖಿತಾಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ, ದಿವ್ಯಾ, ದೀಪು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಲಾ ವಾಹನ ಚಾಲಕ ದಾನಪ್ಪ ಮೊಬೈಲ್ನಲ್ಲಿ ಮಾತನಾಡಿಕೊಂಡು ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಇಷ್ಟೆಲ್ಲಾ ಅವಘಡಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಶಾಲಾ ಬಸ್ ಸಂಪೂರ್ಣ ಜಖಂಗೊಂಡಿದ್ದು, ಎರಡೂ ಬಸ್ಗಳ ಚಾಲಕರು ಗಾಯಗೊಂಡಿದ್ದಾರೆ.
ಹಲವು ಗ್ರಾಮಗಳ ಸುಮಾರು 20 ಮಕ್ಕಳು ಪ್ರಭಾಕರ್ ಗುರೂಜಿ ಆಶ್ರಮಕ್ಕೆ ಸೇರಿದ ಭಾರತೀಯ ಋಷಿ ಸಂಸ್ಕೃತಿ ವಿದ್ಯಾಶಾಲೆಗೆ ವಾಹನದಲ್ಲಿ ತೆರಳುತ್ತಿದ್ದರು. ಸತ್ತ ವಿದ್ಯಾರ್ಥಿ ಶರಣ್ ಆಗಿದ್ದು, ಆಶ್ರಮದ 1ನೇ ತರಗತಿ ವಿದ್ಯಾರ್ಥಿ ಎನ್ನಲಾಗಿದ್ದು, ಮರಳವಾಡಿ ಗ್ರಾಮದ ಗೆಂಡೆಕಟ್ಟೆದೊಡ್ಡಿ ಗ್ರಾಮದವನು ಎಂಬ ಮಾಹಿತಿ ಸಿಕ್ಕಿದೆ.
ಆಶ್ರಮಕ್ಕೆ ಸೇರಿದ ಶಾಲೆಯ ವಾಹನದ ಚಾಲಕ ದಾನಪ್ಪನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿ ಮಗು ಮೃತಪಟ್ಟಿದೆ. ಉಳಿದ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರೂ ಶಾಲೆಗೆ ಸಂಬಂಧಿಸಿದವರು ಮಕ್ಕಳ ಆರೋಗ್ಯ ವಿಚಾರಿಸಿಲ್ಲ ಎಂದು ಆಕ್ರೋಶಗೊಂಡ ಮಕ್ಕಳ ಪೋಷಕರು ಆಶ್ರಮದ ಮುಂದೆ ಮಗುವಿನ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಡಾ.ಮಮತಾ, ಆಸ್ಪತ್ರೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
Trending on DriveSpark kannada :
ಡಿಸೆಂಬರ್ 1ರ ನಂತರ ಟೋಲ್ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ !!
ವಿಡಿಯೋ- ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಅಪಘಾತದ ಕ್ಷಣಗಳು
ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!
ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!