Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 2 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 2 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 4 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಿಂದ ಪಾರಾದರೂ ನೆಲಕ್ಕುರುಳಿದ ಸ್ಕೂಟರ್ ಸವಾರ
ಭಾರತದ ರಸ್ತೆಗಳಲ್ಲಿ ಪ್ರತಿದಿನ ನೂರಾರು ಅಪಘಾತಗಳು ಸಂಭವಿಸುತ್ತವೆ. ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ನಿರ್ಲಕ್ಷ್ಯ ಈ ಅಪಘಾತಗಳಿಗೆ ಮುಖ್ಯ ಕಾರಣಗಳಾಗಿವೆ. ಈ ರೀತಿಯ ಅಪಘಾತಗಳ ವೀಡಿಯೊಗಳನ್ನು ಕಾಲಕಾಲಕ್ಕೆ ಅಪ್ ಲೋಡ್ ಮಾಡಲಾಗುತ್ತದೆ.
ಕೇರಳದಲ್ಲಿ ನಡೆದ ಇದೇ ರೀತಿಯ ಅಪಘಾತದ ವೀಡಿಯೊವೊಂದು ವೈರಲ್ ಆಗಿದೆ.ಈ ವೀಡಿಯೊದಲ್ಲಿ ವೃದ್ಧರೊಬ್ಬರು ಸ್ಕೂಟರ್ನಲ್ಲಿ ರಸ್ತೆ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಅಡ್ಡ ರಸ್ತೆಯಲ್ಲಿದ್ದ ಹೋಂಡಾ ಅಮೇಜ್ ಕಾರು ಎಡಕ್ಕೆ ತಿರುಗಿ ಮುಖ್ಯ ರಸ್ತೆಗೆ ಬರುತ್ತದೆ. ಮಾರುತಿ ವ್ಯಾಗನ್ ಆರ್ ಕಾರು ಬಲಕ್ಕೆ ತಿರುಗಿ ಮುಖ್ಯ ರಸ್ತೆಗೆ ಬರಲು ತಯಾರಾಗುತ್ತದೆ.
ಹೋಂಡಾ ಅಮೇಜ್ ಕಾರಿನ ಡ್ರೈವರ್ ಸ್ಕೂಟರ್ ಮೇಲಿದ್ದ ವೃದ್ಧರಿಗೆ ಹಾರ್ನ್ ಮಾಡಿ ದಾರಿ ಬಿಡುವಂತೆ ಕೋರಿದ್ದಾನೆ. ಸ್ಕೂಟರ್ ಮೇಲಿದ್ದವರು ಸ್ವಲ್ಪ ಮುಂದೆ ಹೋಗಿ ಮತ್ತೆ ನಿಂತಿದ್ದಾರೆ. ಈ ಕಾರಣಕ್ಕೆ ಹೋಂಡಾ ಅಮೇಜ್ ಕಾರಿನ ಚಾಲಕ ಸ್ಕೂಟರ್ ಅನ್ನು ಹಿಂದಿಕ್ಕಿದ್ದಾನೆ.
MOST READ:ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು
ಈ ವೇಳೆ ಅದೇ ಮಾರ್ಗವಾಗಿ ಬಂದ ಮತ್ತೊಂದು ಸ್ಕೂಟರ್ನ ಸವಾರ, ಸ್ಕೂಟರ್ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್ ಮೇಲಿನ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾನೆ. ಸ್ಕೂಟರ್ ಸವಾರ ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ತಲೆಗೆ ಪೆಟ್ಟು ಬೀಳದೇ ಪಾರಾಗಿದ್ದಾನೆ.
ಉರುಳಿಬಿದ್ದ ಸ್ಕೂಟರ್ ಸವಾರ ವೇಗವಾಗಿ ಸ್ಕೂಟರ್ ಚಾಲನೆ ಮಾಡಿಕೊಂಡು ಬಂದಿರುವುದು ಸ್ಪಷ್ಟವಾಗಿದೆ. ವೇಗವಾಗಿ ವಾಹನ ಚಾಲನೆ ಮಾಡುವುದು ಅಪಾಯಕಾರಿ ಎಂದು ತಿಳಿದಿದ್ದರೂ ಡಿವೈಡರ್ ಗಳಿಲ್ಲದ ಸಿಂಗಲ್ ಲೇನ್ ರಸ್ತೆಯಲ್ಲಿ ಬೇರೆ ವಾಹನಗಳನ್ನು ಹಿಂದಿಕ್ಕಲು ಹೋಗಿ ಕಂಟ್ರೋಲ್ ತಪ್ಪಿ ನೆಲಕ್ಕುರುಳಿದ್ದಾನೆ.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಸ್ಥಳದಲ್ಲಿದ್ದವರು ಕೆಳಗೆ ಬಿದ್ದ ಸ್ಕೂಟರ್ ಸವಾರನ ನೆರವಿಗೆ ಧಾವಿಸಿದ್ದಾರೆ. ವ್ಯಾಗನ್ ಆರ್ ಕಾರಿನ ಮುಂದೆಯೇ ಸ್ಕೂಟರ್ ಬಿದ್ದ ಕಾರಣಕ್ಕೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರಸ್ತೆಬದಿ ಸ್ಕೂಟರ್ನಲ್ಲಿ ನಿಂತಿದ್ದ ವೃದ್ಧನೇ ಈ ಅಪಘಾತಕ್ಕೆ ಕಾರಣ.
ಕಿರಿದಾದ ರಸ್ತೆಗಳಲ್ಲಿ ವಿನಾಕಾರಣ ನಿಲ್ಲುವುದರಿಂದ ಬೇರೆಯವರಿಗೆ ತೊಂದರೆಯಾಗುವ ಸಾಧ್ಯತೆಗಳಿರುತ್ತವೆ. ಘಟನೆಯ ನಂತರ ಹೋಂಡಾ ಅಮೇಜ್ ಕಾರಿನ ಚಾಲಕ ಕಾರು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು
ಈ ಅಪಘಾತವು ಭಾರತದ ರಸ್ತೆಗಳಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಒಂದು ಉದಾಹರಣೆಯಾಗಿದೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸುವುದು. ಮಿತ ವೇಗದಲ್ಲಿ ವಾಹನಗಳನ್ನು ಚಾಲನೆ ಮಾಡುವುದು ಒಳ್ಳೆಯದು.