Just In
- 11 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 12 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
- 12 hrs ago ಈ ಹ್ಯುಂಡೈ ಕಾರಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!
- 13 hrs ago ಈ ತಿಂಗಳಲ್ಲಿ ಕೈಗೆಟಕುವ ಬೆಲೆಯ ಎಸ್ಯುವಿಗಳು: ಮಿಸ್ ಮಾಡಬೇಡಿ, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
Don't Miss!
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- News DV Sadananda Gowda: ಕಾಂಗ್ರೆಸ್ ನತ್ತ ಡಿ ವಿ ಸದಾನಂದಗೌಡ? ನಾಲ್ಕು ಕ್ಷೇತ್ರಗಳ ಆಫರ್ ಕೊಟ್ಟ ಕೈ ನಾಯಕರು?
- Movies 'ಹಿಟ್ಲರ್ ಕಲ್ಯಾಣ' ಧಾರಾವಾಹಿ ಅಂತ್ಯ: ಪ್ರೋತ್ಸಾಹ ನೀಡಿದ ವೀಕ್ಷಕರಿಗೆ ಧನ್ಯವಾದ ಎಂದ ನಟಿ ರಜಿನಿ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಿಂದ ಪಾರಾದರೂ ನೆಲಕ್ಕುರುಳಿದ ಸ್ಕೂಟರ್ ಸವಾರ
ಭಾರತದ ರಸ್ತೆಗಳಲ್ಲಿ ಪ್ರತಿದಿನ ನೂರಾರು ಅಪಘಾತಗಳು ಸಂಭವಿಸುತ್ತವೆ. ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ನಿರ್ಲಕ್ಷ್ಯ ಈ ಅಪಘಾತಗಳಿಗೆ ಮುಖ್ಯ ಕಾರಣಗಳಾಗಿವೆ. ಈ ರೀತಿಯ ಅಪಘಾತಗಳ ವೀಡಿಯೊಗಳನ್ನು ಕಾಲಕಾಲಕ್ಕೆ ಅಪ್ ಲೋಡ್ ಮಾಡಲಾಗುತ್ತದೆ.
ಕೇರಳದಲ್ಲಿ ನಡೆದ ಇದೇ ರೀತಿಯ ಅಪಘಾತದ ವೀಡಿಯೊವೊಂದು ವೈರಲ್ ಆಗಿದೆ.ಈ ವೀಡಿಯೊದಲ್ಲಿ ವೃದ್ಧರೊಬ್ಬರು ಸ್ಕೂಟರ್ನಲ್ಲಿ ರಸ್ತೆ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಅಡ್ಡ ರಸ್ತೆಯಲ್ಲಿದ್ದ ಹೋಂಡಾ ಅಮೇಜ್ ಕಾರು ಎಡಕ್ಕೆ ತಿರುಗಿ ಮುಖ್ಯ ರಸ್ತೆಗೆ ಬರುತ್ತದೆ. ಮಾರುತಿ ವ್ಯಾಗನ್ ಆರ್ ಕಾರು ಬಲಕ್ಕೆ ತಿರುಗಿ ಮುಖ್ಯ ರಸ್ತೆಗೆ ಬರಲು ತಯಾರಾಗುತ್ತದೆ.
ಹೋಂಡಾ ಅಮೇಜ್ ಕಾರಿನ ಡ್ರೈವರ್ ಸ್ಕೂಟರ್ ಮೇಲಿದ್ದ ವೃದ್ಧರಿಗೆ ಹಾರ್ನ್ ಮಾಡಿ ದಾರಿ ಬಿಡುವಂತೆ ಕೋರಿದ್ದಾನೆ. ಸ್ಕೂಟರ್ ಮೇಲಿದ್ದವರು ಸ್ವಲ್ಪ ಮುಂದೆ ಹೋಗಿ ಮತ್ತೆ ನಿಂತಿದ್ದಾರೆ. ಈ ಕಾರಣಕ್ಕೆ ಹೋಂಡಾ ಅಮೇಜ್ ಕಾರಿನ ಚಾಲಕ ಸ್ಕೂಟರ್ ಅನ್ನು ಹಿಂದಿಕ್ಕಿದ್ದಾನೆ.
MOST READ:ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು
ಈ ವೇಳೆ ಅದೇ ಮಾರ್ಗವಾಗಿ ಬಂದ ಮತ್ತೊಂದು ಸ್ಕೂಟರ್ನ ಸವಾರ, ಸ್ಕೂಟರ್ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್ ಮೇಲಿನ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾನೆ. ಸ್ಕೂಟರ್ ಸವಾರ ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ತಲೆಗೆ ಪೆಟ್ಟು ಬೀಳದೇ ಪಾರಾಗಿದ್ದಾನೆ.
ಉರುಳಿಬಿದ್ದ ಸ್ಕೂಟರ್ ಸವಾರ ವೇಗವಾಗಿ ಸ್ಕೂಟರ್ ಚಾಲನೆ ಮಾಡಿಕೊಂಡು ಬಂದಿರುವುದು ಸ್ಪಷ್ಟವಾಗಿದೆ. ವೇಗವಾಗಿ ವಾಹನ ಚಾಲನೆ ಮಾಡುವುದು ಅಪಾಯಕಾರಿ ಎಂದು ತಿಳಿದಿದ್ದರೂ ಡಿವೈಡರ್ ಗಳಿಲ್ಲದ ಸಿಂಗಲ್ ಲೇನ್ ರಸ್ತೆಯಲ್ಲಿ ಬೇರೆ ವಾಹನಗಳನ್ನು ಹಿಂದಿಕ್ಕಲು ಹೋಗಿ ಕಂಟ್ರೋಲ್ ತಪ್ಪಿ ನೆಲಕ್ಕುರುಳಿದ್ದಾನೆ.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಸ್ಥಳದಲ್ಲಿದ್ದವರು ಕೆಳಗೆ ಬಿದ್ದ ಸ್ಕೂಟರ್ ಸವಾರನ ನೆರವಿಗೆ ಧಾವಿಸಿದ್ದಾರೆ. ವ್ಯಾಗನ್ ಆರ್ ಕಾರಿನ ಮುಂದೆಯೇ ಸ್ಕೂಟರ್ ಬಿದ್ದ ಕಾರಣಕ್ಕೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರಸ್ತೆಬದಿ ಸ್ಕೂಟರ್ನಲ್ಲಿ ನಿಂತಿದ್ದ ವೃದ್ಧನೇ ಈ ಅಪಘಾತಕ್ಕೆ ಕಾರಣ.
ಕಿರಿದಾದ ರಸ್ತೆಗಳಲ್ಲಿ ವಿನಾಕಾರಣ ನಿಲ್ಲುವುದರಿಂದ ಬೇರೆಯವರಿಗೆ ತೊಂದರೆಯಾಗುವ ಸಾಧ್ಯತೆಗಳಿರುತ್ತವೆ. ಘಟನೆಯ ನಂತರ ಹೋಂಡಾ ಅಮೇಜ್ ಕಾರಿನ ಚಾಲಕ ಕಾರು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು
ಈ ಅಪಘಾತವು ಭಾರತದ ರಸ್ತೆಗಳಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಒಂದು ಉದಾಹರಣೆಯಾಗಿದೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸುವುದು. ಮಿತ ವೇಗದಲ್ಲಿ ವಾಹನಗಳನ್ನು ಚಾಲನೆ ಮಾಡುವುದು ಒಳ್ಳೆಯದು.