ಸರಣಿ ಅಪಘಾತಕ್ಕೆ ಕಾರಣವಾಯ್ತು ಶಿಲ್ಪಾ ಶೆಟ್ಟಿ ಪತಿಗೆ ಸೇರಿದ ಐಷಾರಾಮಿ ಕಾರು
ಕಳೆದ ಭಾನುವಾರ ಬೆಂಗಳೂರಿನಲ್ಲಿ ಸರಣಿ ಅಪಘಾತವೊಂದು ಸಂಭವಿಸಿದೆ. ಅಪಘಾತದ ನಂತರ ಕಾರು ಚಾಲಕನು ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿರುವ ಕಬ್ಬನ್ ಪಾರ್ಕ್ ಪೊಲೀಸರು ಕಾರಿನ ನೋಂದಣಿ ಸಂಖ್ಯೆಯ ಮೂಲಕ ತನಿಖೆ ನಡೆಸುತ್ತಿದ್ದಾರೆ.

ಅಪಘಾತಕ್ಕೆ ಕಾರಣವಾದ ಆಡಿ ಆರ್ 8 ಐಷಾರಾಮಿ ಕಾರು ಬಾಲಿವುಡ್ ನ ಜನಪ್ರಿಯ ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಅವರಿಗೆ ಸೇರಿದ್ದು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಎರಡು ತಿಂಗಳ ಹಿಂದೆಯೇ ಈ ಕಾರನ್ನು ಕಾರು ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಕಾರಿನ ದಾಖಲೆಗಳು ಇನ್ನೂ ರಾಜ್ ಕುಂದ್ರಾ ಅವರ ಹೆಸರಿನಲ್ಲಿಯೇ ಇವೆ. ಇದರಿಂದಾಗಿ ಪೊಲೀಸರಿಗೆ ಸಮಸ್ಯೆಯನ್ನು ಬಗೆಹರಿಸಲು ತೊಂದರೆ ಎದುರಾಗಿದೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಮಹಾರಾಷ್ಟ್ರದ ನೋಂದಣಿ ಸಂಖ್ಯೆ ಎಂಹೆಚ್ -02 ಬಿಪಿ -0010 ಹೊಂದಿರುವ ಈ ಐಷಾರಾಮಿ ಕಾರಿನ ಸದ್ಯದ ಮಾಲೀಕರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಸರಣಿ ಅಪಘಾತವು ಕಳೆದ ಭಾನುವಾರ ಮಧ್ಯಾಹ್ನ 2.45ರ ಸುಮಾರಿಗೆ ಸಂಭವಿಸಿದೆ. ಈ ಅಪಘಾತದಿಂದಾಗಿ ಆಟೋ ಹಾಗೂ ಹಲವು ದ್ವಿಚಕ್ರ ವಾಹನಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಅದೃಷ್ಟವಶಾತ್ ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಸಂಬಂಧ ಗಾಯಾಳುಗಳಿಂದ ದೂರು ಸ್ವೀಕರಿಸಿರುವ ಕಬ್ಬನ್ ಪಾರ್ಕ್ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಶಿಲ್ಪಾ ಶೆಟ್ಟಿಯ ಪತಿಯಿಂದ ಐಷಾರಾಮಿ ಕಾರು ಖರೀದಿಸಿದ್ದ ಬಿಟಿಎಂ 2ನೇ ಹಂತದ ನಿವಾಸಿ ಮೊಹಮ್ಮದ್ ಸದ್ದಾಂ (27) ಎಂಬ ಕಾರು ಡೀಲರ್'ನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಅಪಘಾತದ ಸಮಯದಲ್ಲಿ ತಾನು ಕಾರಿನಲ್ಲಿದ್ದುದಾಗಿ ಆತ ಒಪ್ಪಿಕೊಂಡಿದ್ದು, ಪರಿಸ್ಥಿತಿ ಹದಗೆಟ್ಟಿದ್ದರಿಂದ ಸ್ಥಳದಿಂದ ಪರಾರಿಯಾಗಿದ್ದಾಗಿ ತಿಳಿಸಿದ್ದಾನೆ. ಅಪಘಾತಕ್ಕೆ ಕಾರಣವೇನು ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಮಹಮ್ಮದ್ ಸದ್ದಾಂ ಭಾರತದ ವಿವಿಧ ಕಾರು ಡೀಲರ್ ಗಳೊಂದಿಗೆ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ. ಆತ ರಾಜ್ ಕುಂದ್ರಾರವರ ಆಡಿ ಆರ್ 8 ಐಷಾರಾಮಿ ಕಾರ್ ಅನ್ನು ಮುಂಬೈನ ಕಾರು ಮಾರಾಟಗಾರರ ಮೂಲಕ ಖರೀದಿಸಿದ್ದಾನೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಕಾರಿನ ಆರಂಭಿಕ ಬೆಲೆ ರೂ.2.30 ಕೋಟಿಗಳಾದರೆ, ಟಾಪ್ ಎಂಡ್ ಮಾದರಿಯ ಬೆಲೆ ರೂ.3 ಕೋಟಿಗಳಿಗಿಂತ ಹೆಚ್ಚು ಎಂಬುದು ಗಮನಾರ್ಹ. ಈ ಅಪಘಾತದಲ್ಲಿ ಕಾರಿನ ಮುಂಭಾಗವು ಸಂಪೂರ್ಣವಾಗಿ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟಿಸಿದೆ.


Click it and Unblock the Notifications