Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 9 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಡಗಿನಲ್ಲಿದ್ದ 37 ಜನರ ಪ್ರಾಣ ತೆಗೆದ ತೌಕ್ತೆ ಚಂಡಮಾರುತ
ಕರೋನಾ ವೈರಸ್ ಎರಡನೇ ಅಲೆ ಹರಡಬಾರದು ಎಂಬ ಕಾರಣಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಜನರ ಓಡಾಟವನ್ನು ನಿರ್ಬಂಧಿಸಲಾಗಿರುವುದರಿಂದ ಜನರು ಮನೆಯಲ್ಲಿಯೇ ಇರುವಂತಾಗಿದೆ.
ಒಂದೆಡೆ ಕರೋನಾ ವೈರಸ್ ಮಹಾಮಾರಿ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಇದರ ಜೊತೆಗೆ ತೌಕ್ತೆ ಚಂಡಮಾರುತ ಜನ ಜೀವನವನ್ನು ತತ್ತರಿಸುವಂತೆ ಮಾಡಿದೆ. ತೌಕ್ತೆ ಚಂಡಮಾರುತವು ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹೆಚ್ಚು ಹಾನಿಯನ್ನುಂಟು ಮಾಡಿದೆ.
ತೌಕ್ತೆ ಚಂಡಮಾರುತದಿಂದಾಗಿ ಒಎನ್ಜಿಸಿ ಒಡೆತನದ ತೈಲ ಟ್ಯಾಂಕರ್ ಅರೇಬಿಯನ್ ಸಮುದ್ರದಲ್ಲಿ ಮುಳುಗಿತ್ತು. ಇದರ ಜೊತೆಗೆ ಈ ಚಂಡಮಾರುತದಿಂದಾಗಿ ಜನರು ವಿದ್ಯುತ್ ಹಾಗೂ ನೀರಿಲ್ಲದೆ ಪರದಾಡುವಂತಾಗಿತ್ತು.
MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು
ಈ ಹಡಗಿನಲ್ಲಿದ್ದ 37 ಜನರು ಸಾವನ್ನಪ್ಪಿದರೆ, ಇನ್ನೂ 38 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಚಂಡಮಾರುತದಿಂದ ಹಡಗಿನ ಆಂಕರ್'ಗಳು ನಾಶವಾಗಿದ್ದರಿಂದ ಹಡಗನ್ನು ಎಳೆದು ಬದಿಗೆ ತರಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಹಡಗಿನಲ್ಲಿದ್ದ 800ಕ್ಕೂ ಹೆಚ್ಚು ಜನರನ್ನು ಹಾಗೂ ಹತ್ತಿರದ ಹಡಗುಗಳನ್ನು ರಕ್ಷಿಸಲಾಗಿದೆ. ಆದರೆ ಈ ಹಡಗಿನಲ್ಲಿದ್ದ 37 ಜನರ ಸಾವು ಸಹೋದ್ಯೋಗಿಗಳನ್ನು ದುಃಖಕ್ಕೆ ತಳ್ಳಿದೆ.
MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್
ಲಕ್ಷದ್ವೀಪ ಬಳಿಯ ಅರೇಬಿಯನ್ ಸಮುದ್ರದಲ್ಲಿ ರೂಪುಗೊಂಡ ತೌಕ್ತೆ ಚಂಡಮಾರುತವು ಮೇ 17ರಂದು ಗುಜರಾತ್ ತೀರಕ್ಕೆ ಅಪ್ಪಳಿಸಿತ್ತು. ತೌಕ್ತೆ ಚಂಡಮಾರುತವು ಮಹಾರಾಷ್ಟ್ರ ಹಾಗೂ ಗುಜರಾತ್ನಲ್ಲಿ ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದಲ್ಲೂ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿದೆ.
ಕೇರಳದಲ್ಲಿ ತೌಕ್ತೆ ಚಂಡಮಾರುತದಿಂದ ಭಾರಿ ಮಳೆಯಾಗಿದೆ. ಇದರಿಂದಾಗಿ ಕೇರಳದ ಕರಾವಳಿ ಜಿಲ್ಲೆಗಳು ತೀವ್ರವಾಗಿ ತತ್ತರಿಸಿದ್ದವು. ಕರ್ನಾಟಕದಲ್ಲಿ ಕರಾವಳಿ ತೀರದಲ್ಲಿರುವ 200ಕ್ಕೂ ಗ್ರಾಮಗಳು ಈ ಚಂಡಮಾರುತದಿಂದ ಬಾಧಿತವಾಗಿವೆ.
MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು
ಈ ಚಂಡಮಾರುತದಿಂದ ಮುಂಬೈನಲ್ಲಿ ಶೇ.70ರಷ್ಟು ಮರಗಳು ಧರೆಗುರುಳಿವೆ ಎಂದು ವರದಿಯಾಗಿದೆ. ಗುಜರಾತ್ನಲ್ಲಿ ತೌಕ್ತೆ ಚಂಡಮಾರುತದಿಂದ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. 23 ವರ್ಷಗಳ ನಂತರ ಗುಜರಾತ್ನಲ್ಲಿ ಈ ರೀತಿಯ ಚಂಡಮಾರುತ ಅಪ್ಪಳಿಸಿದೆ.
ಗುಜರಾತ್ನ ಹಲವಾರು ಜಿಲ್ಲೆಗಳಲ್ಲಿ ವಿದ್ಯುತ್ ಕಡಿತವಾಗಿದ್ದು, ಸೆಲ್ಫೋನ್ ಸೇವೆ ಇಲ್ಲವಾಗಿದೆ. ಪ್ರಧಾನಿ ಮೋದಿ ಅವರು ಹೆಲಿಕಾಪ್ಟರ್ ಮೂಲಕ ಚಂಡಮಾರುತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ್ದಾರೆ. ನೆರೆಯ ತಮಿಳುನಾಡಿನಲ್ಲೂ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.