ಎಲ್ಲಡೆಯೂ ವಾಹನಗಳಿಗೆ ವಿಶೇಷ ಅಲಂಕಾರ; ಆಯುಧ ಪೂಜೆ ಮಹತ್ವವೇನು?
ದೇಶದ್ಯಾಂತ ಸಾಂಪ್ರದಾಯಿಕವಾಗಿ ನವರಾತ್ರಿ ಮತ್ತು ವಿಜಯದಶಮಿ ಹಬ್ಬಗಳನ್ನು ಆಚರಿಸಲಾಗುತ್ತದೆ. ನವರಾತ್ರಿಯ ಕೊನೆಯ ದಿನವಾದ ವಿಶಜದಶಮಿಯಂದು ಆಯುಧ ಪೂಜೆಗೆ ಹೆಚ್ಚಿನ ಮಹತ್ವ
ದೇಶದ್ಯಾಂತ ಸಾಂಪ್ರದಾಯಿಕವಾಗಿ ನವರಾತ್ರಿ ಮತ್ತು ವಿಜಯದಶಮಿ ಹಬ್ಬಗಳನ್ನು ಆಚರಿಸಲಾಗುತ್ತದೆ. ನವರಾತ್ರಿಯ ಕೊನೆಯ ದಿನವಾದ ವಿಶಜದಶಮಿಯಂದು ಆಯುಧ ಪೂಜೆಗೆ ಹೆಚ್ಚಿನ ಮಹತ್ವ. ಅಡುಗೆ ಮನೆಯಲ್ಲಿ ತರಕಾರಿ ಹೆಚ್ಚುವ ಚಾಕುವನಿಂದ ಹಿಡಿದು ದೇಶದ ಗಡಿ ಕಾಯುವ ಅತ್ಯಾಧುನಿಕ ಯುದ್ಧ ವಿಮಾನಗಳಗೆ ಆಯುಧ ಪೂಜೆ ನೇರವೇರಿಸಲಾಗುತ್ತದೆ. ವಾಹನಗಳಿಗೆ ಪೂಜೆ ಸಲ್ಲಿಸುವುದರಿಂದ ಅಪಘಾತಗಳನ್ನು ತಪ್ಪಿಸಬಹುದು ಎಂಬುದು ನಂಬಿಕೆಯಾಗಿದೆ.

ಆಯುಧ ಪೂಜೆಯಂದು ಮಾಲೀಕರು ತಮ್ಮ ವಾಹನಗಳನ್ನು ತೊಳೆದು, ಹೂವುಗಳಿಂದ ಶೃಂಗರಿಸಿ, ಕುಂಕುಮ, ಅರಶಿಣವನ್ನು ಹಚ್ಚಿ, ಅದಕ್ಕೆ ನಿಂಬೆ ಹಣ್ಣು ಇಲ್ಲವೆ ಕುಂಬಳ ಕಾಯಿ ಒಡೆದು ಪೂಜೆ ಸಲ್ಲಿಸುವುದು ವಾಡಿಕೆ.

ಹೀಗಾಗಿಯೇ ಆಯುಧ ಪೂಜೆ ದಿನದಂದು ಮಾವಿನ ಸೊಪ್ಪು, ಬಾಳೆಕಂದು, ಕಬ್ಬು ಹಾಗೂ ಚಂಡು ಹೂವುಗಳಿಂದ ಆಲಂಕರಿಸಿದ್ದ ವಾಹನಗಳು ಮದುವಣಗಿತ್ತಿಯಂತೆ ರಸ್ತೆಯೆಲ್ಲೆಡೆ ಓಡಾಡುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿರುತ್ತದೆ.

ನೂತನ ವಾಹನ ಖರೀದಿಗಾರರು ಹೆಚ್ಚಾಗಿ ಆಯುಧ ಪೂಜೆಯಂದೇ ತಮ್ಮ ಕಾರು, ಬೈಕ್ಗಳಿಗೆ ಪೂಜೆ ಸಲ್ಲಿಸಿ ಮೊದಲ ಪ್ರಯಾಣ ಆರಂಭಿಸುತ್ತಾರೆ. ಹೀಗೆ ಮಾಡುವುದರಿಂದ ವಾಹನಗಳಿಗೆ ದೀರ್ಘ ಬಾಳ್ವಿಕೆ ಪ್ರಾಪ್ತಿಯಾಗುವುದರೊಂದಿಗೆ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂಬುದು ನಂಬಿಕೆಯಾಗಿದೆ.

ಹಿಂದೂ ಸಂಸ್ಕೃತಿಯ ಪ್ರಕಾರ ಯಂತ್ರಗಳಿಗೂ ದೈವಿಕ ಶಕ್ತಿ ಇದ್ದೇ ಇರುತ್ತದೆ. ಇದರಿಂದಾಗಿ ಆಯುಧ ಪೂಜೆಯಂದು ವಾಹನಗಳಿಗೆ ಪೂಜೆ ಸಲ್ಲಿಸಿದರೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗುವುದಿಲ್ಲ.
Recommended Video


ಗ್ರಾಮೀಣ ಪ್ರದೇಶದಲ್ಲೂ ಆಯುಧ ಪೂಜೆಗೆ ಅತಿ ಹೆಚ್ಚು ಮಹತ್ವವಿದ್ದು, ರೈತರು ತಮ್ಮ ಕೃಷಿ ಸಾಮಾಗ್ರಿಗಳನ್ನು ಪೂಜಿಸುತ್ತಾರೆ. ಅತ್ತ ಗ್ಯಾರೇಜ್ ನಲ್ಲಿ ಆಯುಧ ಪೂಜೆಯಂದು ವಿಶೇಷ ಪೂಜೆಯನ್ನು ನಡೆಸಿ ಮಾಲಿಕರು ತಮ್ಮ ಕೆಲಸಗಾರರಿಗೆ ವಿಶೇಷ ಬೋನಸ್, ವಸ್ತ್ರಗಳನ್ನು ನೀಡಿ ಸಂಭ್ರಮವನ್ನು ಹಂಚಿಕೊಳ್ಳುತ್ತಾರೆ.

ಜೀವನದಲ್ಲಿ ನಿತ್ಯ ಉಪಯೋಗಿಸುವ ಆಯುಧಗಳನ್ನು ದೇವರ ಮುಂದಿಟ್ಟು ಭಕ್ತಿಭಾವದಿಂದ ಪೂಜಿಸಲಾಗುತ್ತದೆ. ಸಾಫ್ಟ್ ವೇರ್ ಕಂಪನಿಗಳು ಕೂಡಾ ಆಯುಧ ಪೂಜೆಯನ್ನು ಸಂಭ್ರಮ ಸಡಗರದಿಂದ ಆಚರಿಸಿಕೊಳ್ಳುತ್ತಾರೆ.

ಆಯುಧಗಳ ಪೂಜೆಯ ಹಿಂದಿನ ಸತ್ಯ
ದ್ವಾಪರ ಯುಗದಲ್ಲಿ ಪಾಂಡವರು 13 ವರ್ಷಗಳ ವನವಾಸ ಮುಗಿಸಿ ಬಂದ ಬಳಿಕ ಒಂದು ವರ್ಷದ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಅಜ್ಞಾತವಾಸದ ಸಮಯದಲ್ಲಿ ಪಾಂಡವರು ತಮ್ಮ ಶಸ್ತ್ರಾಸ್ತ್ರಗಳನ್ನು ಬನ್ನಿ ಮರದಲ್ಲಿ ಬಚ್ಚಿಡುತ್ತಾರೆ. ವನವಾಸದ ನಂತರ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಆಯುಧಗಳನ್ನು ತೆಗೆದು ಪೂಜಿಸಿದ್ದರು ಎಂಬ ಐತಿಹ್ಯವಿದೆ. ಬಳಿಕ ಆಯುಧಗಳನ್ನು ತೆಗೆದು ವಿರಾಟರಾಜನ ಶತ್ರುಗಳ ವಿರುದ್ಧ ವಿಜಯವನ್ನು ಸಾಧಿಸುತ್ತಾರೆ. ಹೀಗಾಗಿ ಇದೇ ಪ್ರತೀತಿ ಮುಂದುವರಿದುಕೊಂಡು ಬಂದಿರುವುದು ವಿಶೇಷ.

ದೇಶದೆಲ್ಲೆಡೆ ಆಯುಧ ಪೂಜೆಯ ಸಂಭ್ರಮದ ಮನೆ ಮಾಡಿರುವಂತೆಯೇ ಮುಂಚೂಣಿಯ ವಾಹನ ಸಂಸ್ಥೆಗಳು ಕಾರು, ಬೈಕ್ ಗಳ ಖರೀದಿ ಮೇಲೆ ಆಕರ್ಷಕ ಆಫರುಗಳನ್ನು ನೀಡುತ್ತಲ್ಲದೆ ತನ್ಮೂಲಕ ಗರಿಷ್ಠ ಮಾರಾಟ ಮಾಡುವ ಯೋಜನೆ ಹೊಂದಿರುತ್ತವೆ.

ಈ ಸಂಬಂಧ ಓದುಗರ ಜೊತೆಗೆ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಲು ಹಾಗೂ ನಿಮ್ಮ ಅಭಿಪ್ರಾಯಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ಹಂಚಿಕೊಳ್ಳಲು ಮರೆಯದಿರಿ.


Click it and Unblock the Notifications








