Just In
- 54 min ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
- 1 hr ago ಸಾಮಾನ್ಯನ ಸ್ಟೋರಿ: ಬಹುಕಾಲದ ಕನಸನ್ನು ನನಸು ಮಾಡಿಕೊಂಡ ವಿಘ್ನೇಶ..! ನೆಚ್ಚಿನ ವ್ಯಾಗನ್ಆರ್ ಕಾರು ಖರೀದಿ
- 2 hrs ago 900 ಕಿ.ಮೀ ಕೇವಲ 3 ಗಂಟೆ ಪ್ರಯಾಣ: ಮತ್ತೆರಡು ನಗರಗಳಿಗೆ ಬುಲ್ಲೆಟ್ ರೈಲು, ಮುನ್ನುಗ್ಗುತ್ತಿದೆ ಭಾರತ!
- 3 hrs ago ಬಡವರು ಈ ಬೈಕನ್ನು ಸುಲಭವಾಗಿ ಖರೀದಿಸಬಹುದು: EMI, ಆನ್ ರೋಡ್ ಬೆಲೆ ಎಷ್ಟು? ಇಂದೇ ಮನೆಗೆ ತನ್ನಿ
Don't Miss!
- Lifestyle ಇದು ಮಾಮೂಲಿ ರೈಸ್ ಅಲ್ಲ..ತೆಂಗಿನಕಾಯಿ ರೈಸ್..! ಮಾಡೋದು ಸುಲಭ.!
- Sports T20 World Cup: ಆರಂಭಿಕ ಸ್ಥಾನಕ್ಕಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಪೈಪೋಟಿ
- News Tejasvi Surya V/s Sowmya Reddy: ಬೆಂಗಳೂರು ದಕ್ಷಿಣವೆಂಬ ಬ್ರಾಹ್ಮಣ ಸಾಮ್ರಾಜ್ಯದಲ್ಲಿ ಹೊಸ ದಾಖಲೆ ಬರೆಯುತ್ತಾರಾ ಸೌಮ್ಯ ರೆಡ್ಡಿ
- Technology Realme: ರಿಯಲ್ಮಿ ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಗಣನೆ! ಅಮೋಲೆಡ್ ಡಿಸ್ಪ್ಲೇ ಆಯ್ಕೆ
- Movies ಚಿಕ್ಕ ವಯಸ್ಸಿನಲ್ಲಿಯೇ ಕೊನೆಯುಸಿರೆಳೆದ ಆ್ಯಂಗ್ರಿ ರ್ಯಾಂಟ್ಮ್ಯಾನ್ ; ಪ್ರಖ್ಯಾತ ಯುಟ್ಯೂಬರ್ಗೆ ಏನಾಗಿತ್ತು..?
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಲು ಕಳೆದುಕೊಂಡರೂ ಕಡಿಮೆಯಾಗದ ಆತ್ಮ ವಿಶ್ವಾಸ
ದಿನನಿತ್ಯ ಪ್ರಪಂಚದಾದ್ಯಂತ ಜನರಿಗೆ ಸ್ಫೂರ್ತಿ ನೀಡುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಂತಹ ಸ್ಪೂರ್ತಿದಾಯಕ ಘಟನೆಯೊಂದು ತಮಿಳುನಾಡಿನಿಂದ ವರದಿಯಾಗಿದೆ. ಈ ಘಟನೆಯಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು 10 ಗಂಟೆಗಳ ಕಾಲ ಸೈಕಲ್ ತುಳಿದು 165 ಕಿ.ಮೀ ಸಂಚರಿಸಿದ್ದಾರೆ.
ಈ ವ್ಯಕ್ತಿಯು ಅಪಘಾತದಲ್ಲಿ ತಮ್ಮ ಒಂದು ಕಾಲನ್ನು ಕಳೆದುಕೊಂಡಿದ್ದಾರೆ. ಅವರು ತಮ್ಮ ವಕೀಲರಿಗೆ ಕೆಲವು ಮಹತ್ವದ ದಾಖಲೆಗಳನ್ನು ನೀಡಬೇಕಾಗಿತ್ತು. ಆದರೆ ಸಾರ್ವಜನಿಕ ಸಾರಿಗೆಗಳು ಇಲ್ಲದ ಕಾರಣಕ್ಕೆ ತಮಿಳುನಾಡಿನ ತಂಜಾವೂರಿನಿಂದ ಮಧುರೈಗೆ ಸೈಕಲ್ ಮೂಲಕ ತಲುಪಿದ್ದಾರೆ.
ತಂಜಾವೂರು ಜಿಲ್ಲೆಯ ಪಿಲಿಯರಪಟ್ಟಿ ಗ್ರಾಮಕ್ಕೆ ಸೇರಿದ ರಾಜಾ 1994ರಲ್ಲಿ ತಮ್ಮ 14ನೇ ವಯಸ್ಸಿನಲ್ಲಿ ನಡೆದ ಅಪಘಾತದಲ್ಲಿ ತಮ್ಮ ಎಡಗಾಲನ್ನು ಕಳೆದುಕೊಂಡಿದ್ದಾರೆ. ಈ ಕಾರಣಕ್ಕೆ ಪರಿಹಾರ ಕೋರಿ ರಾಜಾರವರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರಿಗೆ ಯಾವುದೇ ಪರಿಹಾರ ದೊರೆತಿಲ್ಲ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ರಾಜಾರವರು ತಮ್ಮ ಪ್ರಕರಣದ ಸಂಬಂಧ ಆಗಾಗ್ಗೆ ತಂಜಾವೂರಿನಿಂದ ಮಧುರೈಗೆ ಹೋಗುತ್ತಿರುತ್ತಾರೆ. ಲಾಕ್ಡೌನ್ನಿಂದಾಗಿ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಪ್ರಕರಣವು ಅಂತಿಮ ಹಂತವನ್ನು ತಲುಪಿದ್ದು, ಅವರು ನ್ಯಾಯಾಲಯಕ್ಕೆ ಹೋಗಿ ದಾಖಲೆಗಳನ್ನು ಸಲ್ಲಿಸಲ್ಲೇ ಬೇಕಿತ್ತು.
ಈ ಕಾರಣಕ್ಕೆ ಅವರು ಸೈಕಲ್ ಮೂಲಕವೇ ಮಧುರೈಗೆ ಹೋಗಲು ತೀರ್ಮಾನಿಸಿದ್ದಾರೆ. 10 ಗಂಟೆಗಳ ಪ್ರಯಾಣದ ನಂತರ ಮಧುರೈ ತಲುಪಿದ್ದಾರೆ. ತಮ್ಮ ಸುದೀರ್ಘ ಪ್ರಯಾಣದಲ್ಲಿ ಅವರು ಎಲ್ಲಿಯೂ ತೊಂದರೆಯನ್ನು ಅನುಭವಿಸಿಲ್ಲ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ತಮಿಳುನಾಡಿನಲ್ಲಿ ಕರೋನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕ ಸಾರಿಗೆಗಳನ್ನು ಆರಂಭಿಸಿಲ್ಲ. ಇದರಿಂದಾಗಿ ಅನೇಕ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಜನರು ತಮ್ಮ ಪ್ರಮುಖ ಕೆಲಸಗಳಿಗಾಗಿ ತಮ್ಮದೇ ಬೈಕ್, ಕಾರು ಹಾಗೂ ಸೈಕಲ್ಗಳಲ್ಲಿ ಸಂಚರಿಸುತ್ತಿದ್ದಾರೆ.
ರಾಜಾರವರು ಜುಲೈ 31ರಂದು ಲಾಕ್ಡೌನ್ ಕೊನೆಗೊಂಡು ಬಸ್ಸುಗಳ ಸಂಚಾರ ಆರಂಭವಾಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ ಲಾಕ್ಡೌನ್ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ಕಾರಣಕ್ಕೆ ಅವರು ಸೈಕಲ್ ಮೂಲಕವೇ ಮಧುರೈಗೆ ಹೋಗಲು ತೀರ್ಮಾನಿಸಿದ್ದಾರೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ತಮಗೆ ಸೈಕಲ್ ತುಳಿದ ಅನುಭವವಿದ್ದು, ಯಾವುದೇ ಸಮಸ್ಯೆ ಎದುರಾಗಿಲ್ಲವೆಂದು ರಾಜಾ ಹೇಳಿದ್ದಾರೆ. ಅವರು ಸೈಕಲ್ ಮೂಲಕವೇ ಅನೇಕ ಸ್ಥಳಗಳನ್ನು ತಲುಪಿದ್ದಾರೆ. ಲಾಕ್ಡೌನ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ಮನೆಯಿಂದ 2 ಕಿ.ಮೀ ದೂರ ಬಂದವರನ್ನು ಬಂಧಿಸುತ್ತಿದ್ದರು. ಈಗ ಆ ನಿಯಮವನ್ನು ಸಡಿಲಿಸಲಾಗಿದೆ.