Just In
- 2 min ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 6 min ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 21 min ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
- 1 hr ago ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
Don't Miss!
- News 2nd Phase Election: ಇಂದಿನಿಂದ 12 ರಾಜ್ಯಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Movies ಲೋಕಸಭೆ ಚುನಾವಣೆ: ಬಿಜೆಪಿ 7ನೇ ಪಟ್ಟಿಯಲ್ಲಿ ದರ್ಶನ್ ಜೊತೆ ನಟಿಸಿದ್ದ ನಟಿಗೂ ಸಿಕ್ತು ಟಿಕೆಟ್
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ರಿಕ್ಷಾಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತವೆ. ಈ ಕಾರಣಕ್ಕೆ ಢಾಕಾವನ್ನು ರಿಕ್ಷಾಗಳ ನಗರ ಎಂದು ಕರೆಯಲಾಗುತ್ತದೆ. ಆದರೆ ನಿಧಾನವಾಗಿ ಚಲಿಸುವ ರಿಕ್ಷಾಗಳಿಂದಾಗಿ ಢಾಕಾದ ರಸ್ತೆಗಳಲ್ಲಿ ವಿವಿಧ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಹೇಳಲಾಗಿದೆ.
ಈಗ ಆ ಸಮಸ್ಯೆಗಳನ್ನು ಪರಿಹರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಢಾಕಾದಲ್ಲಿ ಎಂಜಿನ್-ಚಾಲಿತ ಹಾಗೂ ಬ್ಯಾಟರಿ-ಚಾಲಿತ ರಿಕ್ಷಾಗಳನ್ನು ನಿಷೇಧಿಸಲಾಗಿದೆ. ಡಿಎಸ್ಸಿಸಿ (ಢಾಕಾ ಸೌತ್ ಸಿಟಿ ಕಾರ್ಪೊರೇಷನ್) ಢಾಕಾದ ರಸ್ತೆಗಳಲ್ಲಿ ನಿಷೇಧಿತ ರಿಕ್ಷಾಗಳನ್ನು ಚಾಲನೆ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದೆ.
ಸಂಚಾರ ದಟ್ಟಣೆಯಿಂದ ತತ್ತರಿಸಿರುವ ಢಾಕಾದ ರಸ್ತೆಗಳಿಗೆ ಪರಿಹಾರ ನೀಡುವ ಸಲುವಾಗಿ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ. ಆದರೆ ಅಧಿಕಾರಿಗಳ ಈ ಕ್ರಮ ಅನೇಕ ರಿಕ್ಷಾ ಚಾಲಕರ ಜೀವನವನ್ನು ಕಸಿದುಕೊಂಡಿದೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
ಅಂತಹವರಲ್ಲಿ ಫಜ್ಲೂರ್ ರಹಮಾನ್ ಸಹ ಒಬ್ಬರು. ಕರೋನಾ ವೈರಸ್ ಕಾರಣಕ್ಕೆ ಜಾರಿಗೊಳಿಸಲಾದ ಲಾಕ್ ಡೌನ್ ನಿಂದ ಫಜ್ಲೂರ್ ರಹಮಾನ್ ಭಾದಿತರಾಗಿದ್ದರು. ಲಾಕ್ ಡೌನ್ ನಂತರ ಅವರು ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದರು.
ಆದರೆ ಕಾರಣಾಂತರಗಳಿಂದ ಆ ಕೆಲಸವನ್ನು ಕಳೆದುಕೊಂಡರು. ನಂತರ ಫಜ್ಲೂರ್ ರಹಮಾನ್ ರಿಕ್ಷಾ ಓಡಿಸಲು ನಿರ್ಧರಿಸಿದರು. 80 ಸಾವಿರ ರೂಪಾಯಿ ಸಾಲ ಪಡೆದು ಬ್ಯಾಟರಿ ಚಾಲಿತ ರಿಕ್ಷಾ ಖರೀದಿಸಿದರು.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಆದರೆ ಹೊಸ ನಿಯಮಗಳನ್ವಯ ಅಧಿಕಾರಿಗಳು ರಿಕ್ಷಾವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಜೀವನಕ್ಕೆ ದಾರಿಯಾಗಿದ್ದ ರಿಕ್ಷಾವನ್ನು ಕಳೆದುಕೊಂಡ ಫಜ್ಲೂರ್ ರಹಮಾನ್ ಕಣ್ಣೀರಿಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವೀಡಿಯೊ ನೋಡಿ ಜನ ದುಃಖಿತರಾಗಿದ್ದಾರೆ. ಅವರಲ್ಲಿ ಕೆಲವರು ಸ್ವಯಂಪ್ರೇರಿತರಾಗಿ ಫಜ್ಲೂರ್ ರಹಮಾನ್ಗೆ ನೆರವಿಗೆ ಧಾವಿಸಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಹೀಗೆ ಫಜ್ಲೂರ್ ರಹಮಾನ್ಗೆ ನೆರವಿಗೆ ಧಾವಿಸಿದವರಲ್ಲಿ ಅಹ್ಸಾನ್ ಬೂಯಾನ್ ಸಹ ಒಬ್ಬರು. ಅಹ್ಸಾನ್ ಬೂಯಾನ್ ಫಜ್ಲೂರ್ ರಹಮಾನ್ ರವರಿಗೆ ಹೊಸ ರಿಕ್ಷಾವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಅಗತ್ಯ ಬಿದ್ದಾಗ ನಾವು ವಿಷಯಗಳನ್ನು ಬದಲಿಸಬಹುದು ಎಂದು ಹೇಳಿರುವ ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಫಜ್ಲೂರ್ ರಹಮಾನ್ ಅವರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಹೊಸ ರಿಕ್ಷಾ ನೀಡಿ ಜೀವನಕ್ಕೆ ಆಸರೆಯಾದ ಅಹ್ಸಾನ್ ಬೂಯಾನ್ ಅವರನ್ನು ಜನರು ಶ್ಲಾಘಿಸುತ್ತಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಹಲವು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.