Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 1 hr ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 1 hr ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 3 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆಇಇ ಪರೀಕ್ಷೆಗೆ ಹಾಜರಾಗಲು ನಾನಾ ಸಂಕಷ್ಟಗಳನ್ನು ಎದುರಿಸಿದ ವಿದ್ಯಾರ್ಥಿ
ಇತ್ತೀಚೆಗೆ ಜೆಇಇ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಯಿತು. ಈ ಸಮಯದಲ್ಲಿ ವಿದ್ಯಾರ್ಥಿಗಳು ನಾನಾ ಸಮಸ್ಯೆಗಳನ್ನು ಎದುರಿಸಬೇಕಾಯಿತು. ಕರೋನಾ ವೈರಸ್ ಅಬ್ಬರದಿಂದಾಗಿ ಸಾರ್ವಜನಿಕ ಸಾರಿಗೆಗಳು ಮೊದಲಿನಂತೆ ಕಾರ್ಯನಿರ್ವಹಿಸುತ್ತಿಲ್ಲ.
ಇದರಿಂದಾಗಿ ದೂರದ ಪ್ರದೇಶಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇದೇ ರೀತಿ ಪಶ್ಚಿಮ ಬಂಗಾಳದಲ್ಲಿ ತಂದೆ ಮಗ ಇಬ್ಬರು ಪರೀಕ್ಷಾ ಕೇಂದ್ರವನ್ನು ತಲುಪಲು ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಆರು ಗಂಟೆಗಳ ಕಾಲ 75 ಕಿ.ಮೀಗಳಷ್ಟು ದೂರ ಸೈಕಲ್ ತುಳಿದ ಬಳಿಕ ಪರೀಕ್ಷಾ ಕೇಂದ್ರವನ್ನು ತಲುಪಿದ್ದಾರೆ.
ದೇಶಾದ್ಯಂತ ಈ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಲಾಗುತ್ತಿತ್ತು. ಆದರೆ ಅಂತಿಮವಾಗಿ ಪರೀಕ್ಷೆಗಳನ್ನು ನಡೆಸಲಾಯಿತು. 19 ವರ್ಷದ ವಿದ್ಯಾರ್ಥಿ ತನ್ನ ತಂದೆ ರಬಿಯವರೊಂದಿಗೆ ಮಂಗಳವಾರ ಸಂಜೆ 6 ಗಂಟೆಗೆ ಎರಡು ಸೈಕಲ್ ಗಳ ಮೂಲಕ ಪ್ರಯಾಣವನ್ನು ಆರಂಭಿಸಿದ್ದಾನೆ. ನಂತರ ಅವರಿಬ್ಬರು ದೋಣಿ ಮೂಲಕ ಬಿದ್ಯಾದರಿ ನದಿ ದಾಟಿದ್ದಾರೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
ನಂತರ ಸತತ ನಾಲ್ಕು ಗಂಟೆಗಳ ಕಾಲ ಸೈಕಲ್ ಪ್ರಯಾಣದ ನಂತರ ಪಿಯಾಲಿ ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆ ತಲುಪಿದ್ದಾರೆ. ಆ ರಾತ್ರಿ ಅಲ್ಲಿ ತಂಗಿದ್ದ ನಂತರ ಮರು ದಿನ ಒಂದು ಸೈಕಲ್ ನಲ್ಲಿ ಪ್ರಯಾಣ ಆರಂಭಿಸಿದ್ದಾರೆ.
ಈ ವೇಳೆ ತಂದೆ ರಬಿ ಸೈಕ್ಲಿಂಗ್ ಮಾಡುತ್ತಿದ್ದರೆ ಅವರ ಮಗ ಹಿಂದೆ ಕುಳಿತು ಓದುತ್ತಿದ್ದ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಸೋನಾರ್ಪುರ ತಲುಪಿ ತಮ್ಮ ಸೈಕಲ್ ಅನ್ನು ಅಲ್ಲಿಯೇ ನಿಲ್ಲಿಸಿ ಆಟೋದಲ್ಲಿ ಪ್ರಯಾಣಿಸಿದ್ದಾರೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಎರಡು ಸಾರ್ವಜನಿಕ ಬಸ್ಸುಗಳನ್ನು ಬದಲಿಸಿ ಬೆಳಿಗ್ಗೆ 11 ಗಂಟೆ ವೇಳೆಗೆ ಕೋಲ್ಕತ್ತಾದ ಸಾಲ್ಟ್ ಲೇಕ್ ಸೆಕ್ಟರ್ 5 ತಲುಪಿದ್ದಾರೆ. ಮೂಲಗಳ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ಆರಂಭವಾಗುವುದಕ್ಕೆ ಮುಂಚೆಯೇ ಪರೀಕ್ಷಾ ಕೇಂದ್ರವನ್ನು ತಲುಪಿದ್ದಾರೆ.
ರೈಲುಗಳ ಸಂಚಾರವಿದ್ದರೆ ಪ್ರಯಾಣವು ಇಷ್ಟೊಂದು ತ್ರಾಸದಾಯಕವಾಗುತ್ತಿರಲಿಲ್ಲವೆಂದು ವಿದ್ಯಾರ್ಥಿ ದಿಗಂತಾ ಹೇಳಿದ್ದಾನೆ. ಕಳೆದ ಎರಡು ವರ್ಷಗಳಿಂದ ಈ ಪರೀಕ್ಷೆಗೆ ತಯಾರಿ ನಡೆಸಿದ್ದ ಕಾರಣ ಪರೀಕ್ಷೆಗೆ ಹಾಜರಾಗಲು ಬಯಸಿದ್ದೆ. ಯಾವುದೇ ಕಾರಣಕ್ಕೂ ಈ ಪರೀಕ್ಷೆಗೆ ತಪ್ಪಿಸಿಕೊಳ್ಳಲು ಸಿದ್ಧನಿರಲಿಲ್ಲವೆಂದು ಆತ ಹೇಳಿದ್ದಾನೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಈ ಪ್ರಯಾಣದ ಬಗ್ಗೆ ಮಾತನಾಡಿರುವ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿರುವ ರಬಿರವರು ನನ್ನ ಮಗನ ಪರೀಕ್ಷಾ ಸಿದ್ದತೆಯು 75 ಕಿ.ಮೀ ಸೈಕಲ್ ತುಳಿಯಲು ನನಗೆ ಪ್ರೇರಣೆ ನೀಡಿತು. ಸೋಂಕು ಹರಡಬಹುದೆಂಬ ಭಯ ನನ್ನ ಮನಸ್ಸಿನಲ್ಲಿ ಮನೆ ಮಾಡಿತ್ತು ಎಂದು ಹೇಳಿದ್ದಾರೆ. ಜೆಇಇ ಪರೀಕ್ಷೆಗೆ ಸಿದ್ದತೆ ನಡೆಸುತ್ತಿರುವ ದಿಗಂತಾ 12ನೇ ತರಗತಿಯಲ್ಲಿ 85% ಅಂಕಗಳನ್ನು ಗಳಿಸಿದ್ದಾನೆ. ಆತನ ಭವಿಷ್ಯಕ್ಕೆ ಶುಭ ಹಾರೈಸೋಣ.