Just In
- 18 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 26 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 36 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ ಮಾಡುವ ಮುನ್ನ ಇತ್ತ ನೋಡಿ...
ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸುವುದು ತಪ್ಪು ಎಂದು ತಿಳಿದಿದ್ದರೂ ಬಹುತೇಕ ವಾಹನ ಸವಾರರು ಪದೇ ಪದೇ ಈ ತಪ್ಪನ್ನುಮಾಡುತ್ತಲ್ಲೇ ಇರುತ್ತಾರೆ.
ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸುವುದು ತಪ್ಪು ಎಂದು ತಿಳಿದಿದ್ದರೂ ಬಹುತೇಕ ವಾಹನ ಸವಾರರು ಪದೇ ಪದೇ ಈ ತಪ್ಪನ್ನುಮಾಡುತ್ತಲ್ಲೇ ಇರುತ್ತಾರೆ. ಆದ್ರೆ ಇನ್ಮುಂದೆ ಇಂತಹ ತಪ್ಪು ಮಾಡುವ ಮುನ್ನ ಬಹಳಷ್ಟು ಎಚ್ಚರಿಕೆ ವಹಿಸಿ ಇಲ್ಲವಾದ್ರೆ ಏನು ಆಗುತ್ತೆ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ.
ವಾಹನ ಚಾಲನೆ ಮಾಡುತ್ತಾ ಮೊಬೈಲ್ ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಟ್ರಾಫಿಕ್ ಪೊಲೀಸರು ಮಹತ್ವದ ಆದೇಶವೊಂದನ್ನು ಜಾರಿಗೆ ತಂದಿದ್ದಾರೆ. ಚಾಲನೆ ವೇಳೆ ಮೊಬೈಲ್ ಬಳಸಿದ್ದು ಕಂಡಬಂದಲ್ಲಿ ಅಂತವರ ಚಾಲನಾ ಪರವಾನಿಗೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಿದೆಯಂತೆ.
ನೀವು ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಸುತ್ತಿರುವಾಗ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿಬಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳ್ಳುವುದಲ್ಲದೇ ಸಾರ್ವಜನಿಕರು ಕೂಡಾ ಮೊಬೈಲ್ ಬಳಕೆ ಮಾಡುತ್ತಾ ವಾಹನ ಚಾಲನೆ ಮಾಡುವವರ ಫೋಟೋವನ್ನು ಆರ್ಟಿಒ ಅಧಿಕಾರಿಗಳಿಗೆ ಕಳುಹಿಸಿದ್ರು ನಿಮ್ಮ ಚಾಲನಾ ಪರವಾನಿಗೆ ರದ್ದುಗೊಳ್ಳಲಿದೆ.
ಇದಕ್ಕೆ ಕಾರಣ, ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳ ಪ್ರಕಾರ 2016ರಲ್ಲಿ ವಾಹನ ಚಾಲನೆ ವೇಳೆ ಮೊಬೈಲ್ ಬಳಸುವಾಗ ನಡೆದ ರಸ್ತೆ ಅಪಘಾತಗಳಲ್ಲಿ 2,138 ಮಂದಿಯ ಪ್ರಾಣಗಳನ್ನು ಕಳೆದುಕೊಂಡಿದ್ದು, ಇದುವರೆಗೂ ಅಪಘಾತಗಳ ಸಂಖ್ಯೆಯು ಹೆಚ್ಚುತ್ತಲೆ ಇದೆ.
ಇತ್ತೀಚೆಗೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದ ಬಸ್ ಅಪಘಾತದಲ್ಲಿ ಶಾಲೆಗೆ ಹೊರಟಿದ್ದ 13 ಮಂದಿ ಮಕ್ಕಳು ಮೃತಪಟ್ಟಿದ್ದರು. ಇದಕ್ಕೆ ಕಾರಣ ಆ ಡ್ರೈವರ್ ಫೋನಿನಲ್ಲಿ ಮಾತಾಡುತ್ತಿದದ್ದೆ ಎಂದು ಸಾಬೀತಾಗಿದೆ.
ಹಾಗೆಯೇ ಡ್ರೈವಿಂಗ್ ಮಾಡುವಾಗ ಫೋನಿನಲ್ಲಿ ಮಾತನಾಡುವುದು ಮತ್ತು ಸೆಲ್ಫಿ ಕಿಲ್ಲಿಕ್ಕಿಸಿಕೊಳ್ಳುವುದು ಕೆಲವರಿಗೆ ಹವ್ಯಾಸವಾಗಿ ಹೋಗಿದ್ದು, ಇದರಿಂದ ತಮಗೆ ಮಾತ್ರವಲ್ಲದೆ ಇತರರಿಗೂ ಕೂಡ ತೊಂದರೆಯಾಗುತ್ತದೆ ಎಂಬುವುದು ವಾಹನ ಸವಾರರು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ನಮೆಗೆಲ್ಲಾ ಗೊತ್ತಿರುವ ಹಾಗೆ ಬಹುತೇಕ ವಾಹನ ಸವಾರರು ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುತ್ತಿರುವುದು ದುರಂತಗಳಿಗೆ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ದೆಹಲಿ ಮತ್ತು ರಾಜಸ್ತಾನ ಸರ್ಕಾರಗಳು ದಿಟ್ಟಹೆಜ್ಜೆ ಇಟ್ಟಿವೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಇಂತಹ ಕಠಿಣ ಕಾನೂನು ಜಾರಿಗೆ ಅವಶ್ಯವಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹೊಸ ಮಾರ್ಗಸೂಚಿ ಬಗ್ಗೆ ಪರಿಶೀಲನೆ ಮಾಡಿ ಜಾರಿಗೆ ತರುವುದು ಒಳಿತು.
ಡ್ರೈವ್ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು
ಹೆಲ್ಮೆಟ್ ಹಾಕದ ಬೈಕ್ ಸವಾರನ ಮೇಲೆ ಶೂ ಎಸೆದ ಟ್ರಾಫಿಕ್ ಪೊಲೀಸ್...
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸರಿಂದಲೇ ಟ್ರೋಲ್ ಆದ ಯುವಕ..
ಲಂಚಾವತಾರ ಬಿಚ್ಚಿಟ್ಟ ಯುವಕನಿಗೆ ಪೊಲೀಸರಿಂದಲೇ ಲಂಚದ ಆಮೀಷ...
ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..
ಮೆಟ್ರೋ ಸಿಟಿಗಳಲ್ಲಿನ ಕಾರು ಮಾರಾಟದಲ್ಲಿ ಭಾರೀ ಇಳಿಕೆ- ಕಾರಣ ಕೇಳಿದ್ರೆ ನಿಮಗೂ ಅಚ್ಚರಿ....