Just In
- 11 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 13 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 13 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ
ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಂದಾಗಿ ಪ್ರತಿವರ್ಷ ಸುಮಾರು 1.50 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದೇ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ.
ರಸ್ತೆ ಅಪಘಾತಗಳು ವೇಗವಾಗಿ ಚಲಿಸುವ ವಾಹನಗಳಿಂದಲೂ ಸಂಭವಿಸುತ್ತವೆ. ಈ ಕಾರಣಕ್ಕೆ ಪೊಲೀಸರು, ನಿಗದಿಪಡಿಸಿರುವುದಕ್ಕಿಂತ ವೇಗವಾಗಿ ಚಲಿಸುವ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಭಾರತದ ರಸ್ತೆಗಳಲ್ಲಿ ಯಾವಾಗ ಏನಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.
ಇದ್ದಕ್ಕಿದ್ದಂತೆ ಜಾನುವಾರುಗಳು ಅಥವಾ ಮನುಷ್ಯರು ವಾಹನಗಳಿಗೆ ಅಡ್ಡ ಬರಬಹುದು. ಇದರಿಂದ ಹೆಚ್ಚಿನ ವೇಗದಲ್ಲಿ ಸಾಗುತ್ತಿದ್ದರೆ ತಕ್ಷಣ ವಾಹನವನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಆಗ ಅಪಘಾತಗಳು ಸಂಭವಿಸುತ್ತವೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ಹೆಚ್ಚಿನ ವೇಗದಲ್ಲಿ ಸಂಚರಿಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಸರ್ಕಾರಗಳೇ ಜನರಲ್ಲಿ ಜಾಗೃತಿ ಮೂಡಿಸುತ್ತಿವೆ. ಆದರೆ ಮುಖ್ಯಮಂತ್ರಿಗಳ ಬೆಂಗಾವಲು ವಾಹನಗಳೇ ಅತಿ ವೇಗವಾಗಿ ಚಲಿಸಿ ಅಪಘಾತಕ್ಕೀಡಾಗಿರುವುದು ವಿಪರ್ಯಾಸವೇ ಸರಿ.
ಇನ್ನು ಕೆಲವೇ ತಿಂಗಳುಗಳಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಕೂಡ ಪ್ರವಾಸದಲ್ಲಿದ್ದಾರೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು
ಅವರು ಜನವರಿ 4ರಂದು ತೂತುಕುಡಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದರು. ಪ್ರಚಾರ ಮುಗಿಸಿ ತಿರುನೆಲ್ವೇಲಿ ಜಿಲ್ಲೆಯ ಚೆರಣ್ಮಖದೇವಿ ಸನ್ನಿಧಿಗೆ ತೆರಳುತ್ತಿದ್ದರು. ಅವರ ಸುರಕ್ಷತೆಗಾಗಿ ಪೊಲೀಸ್ ವಾಹನಗಳು ಅವರನ್ನು ಸುತ್ತುವರೆದಿದ್ದವು.
ಈ ವಾಹನಗಳು ಸಿನಿಮೀಯ ಶೈಲಿಯಲ್ಲಿ ಮುಖ್ಯಮಂತ್ರಿಗಳನ್ನು ಕರೆದೊಯ್ಯುತ್ತಿದ್ದವು. ಈ ರೀತಿ ಸಾಗುವಾಗ ಮುಖ್ಯಮಂತ್ರಿಯವರ ಬೆಂಗಾವಲು ಪಡೆಯ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಅತಿ ವೇಗದಲ್ಲಿ ಮತ್ತೊಂದು ಕಾರನ್ನು ಹಿಂದಿಕ್ಕಲು ಪ್ರಯತ್ನಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಕಾರಿನ ಮುಂಭಾಗಕ್ಕೆ ತೀವ್ರ ಹಾನಿಯಾಗಿದೆ. ಮತ್ತೊಂದು ಕಾರು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಏರಿದೆ.
ಈ ಘಟನೆ ತೂತುಕುಡಿ ಜಿಲ್ಲೆಯ ವಲ್ಲನಾಡ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿಯವರ ಕಾರಿಗೆ ಯಾವುದೇ ಹಾನಿಯಾಗಿಲ್ಲ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಅಪಘಾತಕ್ಕೀಡಾದ ಎರಡೂ ಕಾರುಗಳ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರುಗಳು ಅತಿ ವೇಗವಾಗಿ ಚಲಿಸಿದ್ದೇ ಈ ಅಪಘಾತಕ್ಕೆ ಮುಖ್ಯ ಕಾರಣವೆಂದು ಹೇಳಲಾಗಿದೆ.
ಈ ಕಾರಣಕ್ಕೆ ವಾಹನಗಳಲ್ಲಿ ಸಂಚರಿಸುವಾಗ ಅತಿ ವೇಗವಾಗಿ ಹೋಗದಿರುವುದು ಒಳ್ಳೆಯದು. ಸಮಯದ ಅಭಾವದಿಂದಾಗಿ ಬಹುತೇಕ ಜನರು ಅತಿ ವೇಗವಾಗಿ ಚಲಿಸುತ್ತಾರೆ. ಆದ್ದರಿಂದ ಎಲ್ಲಿಗಾದರೂ ಹೋಗಬೇಕಾದಾಗ ಮುಂಚಿತವಾಗಿ ಹೊರಡುವುದು ಒಳ್ಳೆಯದು.
MOST
READ:
ಲಾಕ್ಡೌನ್
ನಿಂದ
ಕೆಲಸ
ಕಳೆದುಕೊಂಡವ
ಇಂದು
ವಿಶ್ವ
ವಿಖ್ಯಾತ
ವ್ಯಕ್ತಿ
ಇದರಿಂದ ವೇಗದ ಮಿತಿಯಲ್ಲಿಯೇ ತಲುಪಬೇಕಾದ ಸ್ಥಳವನ್ನು ತಲುಪಬಹುದು. ವಾಹನವನ್ನು ಎಷ್ಟು ವೇಗದಲ್ಲಿ ಚಾಲನೆ ಮಾಡಲಾಗುತ್ತಿದೆ ಎಂಬುದನ್ನು ಸ್ಪೀಡೋಮೀಟರ್ ನಲ್ಲಿ ಪರೀಕ್ಷಿಸುವುದು ಒಳ್ಳೆಯದು.
ಜೊತೆಗೆ ರಸ್ತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಕೆಲವೊಮ್ಮೆ ಜನರು ಕುಡಿದು ವಾಹನ ಚಾಲನೆ ಮಾಡುವಾಗ ಅತಿ ವೇಗದಲ್ಲಿ ಚಲಿಸುತ್ತಾರೆ. ಇದರಿಂದಲೂ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ.