ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಂದಾಗಿ ಪ್ರತಿವರ್ಷ ಸುಮಾರು 1.50 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದೇ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ರಸ್ತೆ ಅಪಘಾತಗಳು ವೇಗವಾಗಿ ಚಲಿಸುವ ವಾಹನಗಳಿಂದಲೂ ಸಂಭವಿಸುತ್ತವೆ. ಈ ಕಾರಣಕ್ಕೆ ಪೊಲೀಸರು, ನಿಗದಿಪಡಿಸಿರುವುದಕ್ಕಿಂತ ವೇಗವಾಗಿ ಚಲಿಸುವ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಭಾರತದ ರಸ್ತೆಗಳಲ್ಲಿ ಯಾವಾಗ ಏನಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಇದ್ದಕ್ಕಿದ್ದಂತೆ ಜಾನುವಾರುಗಳು ಅಥವಾ ಮನುಷ್ಯರು ವಾಹನಗಳಿಗೆ ಅಡ್ಡ ಬರಬಹುದು. ಇದರಿಂದ ಹೆಚ್ಚಿನ ವೇಗದಲ್ಲಿ ಸಾಗುತ್ತಿದ್ದರೆ ತಕ್ಷಣ ವಾಹನವನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಆಗ ಅಪಘಾತಗಳು ಸಂಭವಿಸುತ್ತವೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಹೆಚ್ಚಿನ ವೇಗದಲ್ಲಿ ಸಂಚರಿಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಸರ್ಕಾರಗಳೇ ಜನರಲ್ಲಿ ಜಾಗೃತಿ ಮೂಡಿಸುತ್ತಿವೆ. ಆದರೆ ಮುಖ್ಯಮಂತ್ರಿಗಳ ಬೆಂಗಾವಲು ವಾಹನಗಳೇ ಅತಿ ವೇಗವಾಗಿ ಚಲಿಸಿ ಅಪಘಾತಕ್ಕೀಡಾಗಿರುವುದು ವಿಪರ್ಯಾಸವೇ ಸರಿ.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಇನ್ನು ಕೆಲವೇ ತಿಂಗಳುಗಳಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಕೂಡ ಪ್ರವಾಸದಲ್ಲಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಅವರು ಜನವರಿ 4ರಂದು ತೂತುಕುಡಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದರು. ಪ್ರಚಾರ ಮುಗಿಸಿ ತಿರುನೆಲ್ವೇಲಿ ಜಿಲ್ಲೆಯ ಚೆರಣ್ಮಖದೇವಿ ಸನ್ನಿಧಿಗೆ ತೆರಳುತ್ತಿದ್ದರು. ಅವರ ಸುರಕ್ಷತೆಗಾಗಿ ಪೊಲೀಸ್ ವಾಹನಗಳು ಅವರನ್ನು ಸುತ್ತುವರೆದಿದ್ದವು.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಈ ವಾಹನಗಳು ಸಿನಿಮೀಯ ಶೈಲಿಯಲ್ಲಿ ಮುಖ್ಯಮಂತ್ರಿಗಳನ್ನು ಕರೆದೊಯ್ಯುತ್ತಿದ್ದವು. ಈ ರೀತಿ ಸಾಗುವಾಗ ಮುಖ್ಯಮಂತ್ರಿಯವರ ಬೆಂಗಾವಲು ಪಡೆಯ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಅತಿ ವೇಗದಲ್ಲಿ ಮತ್ತೊಂದು ಕಾರನ್ನು ಹಿಂದಿಕ್ಕಲು ಪ್ರಯತ್ನಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಕಾರಿನ ಮುಂಭಾಗಕ್ಕೆ ತೀವ್ರ ಹಾನಿಯಾಗಿದೆ. ಮತ್ತೊಂದು ಕಾರು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಏರಿದೆ.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಈ ಘಟನೆ ತೂತುಕುಡಿ ಜಿಲ್ಲೆಯ ವಲ್ಲನಾಡ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿಯವರ ಕಾರಿಗೆ ಯಾವುದೇ ಹಾನಿಯಾಗಿಲ್ಲ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಅಪಘಾತಕ್ಕೀಡಾದ ಎರಡೂ ಕಾರುಗಳ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರುಗಳು ಅತಿ ವೇಗವಾಗಿ ಚಲಿಸಿದ್ದೇ ಈ ಅಪಘಾತಕ್ಕೆ ಮುಖ್ಯ ಕಾರಣವೆಂದು ಹೇಳಲಾಗಿದೆ.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಈ ಕಾರಣಕ್ಕೆ ವಾಹನಗಳಲ್ಲಿ ಸಂಚರಿಸುವಾಗ ಅತಿ ವೇಗವಾಗಿ ಹೋಗದಿರುವುದು ಒಳ್ಳೆಯದು. ಸಮಯದ ಅಭಾವದಿಂದಾಗಿ ಬಹುತೇಕ ಜನರು ಅತಿ ವೇಗವಾಗಿ ಚಲಿಸುತ್ತಾರೆ. ಆದ್ದರಿಂದ ಎಲ್ಲಿಗಾದರೂ ಹೋಗಬೇಕಾದಾಗ ಮುಂಚಿತವಾಗಿ ಹೊರಡುವುದು ಒಳ್ಳೆಯದು.

MOST

READ: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಇದರಿಂದ ವೇಗದ ಮಿತಿಯಲ್ಲಿಯೇ ತಲುಪಬೇಕಾದ ಸ್ಥಳವನ್ನು ತಲುಪಬಹುದು. ವಾಹನವನ್ನು ಎಷ್ಟು ವೇಗದಲ್ಲಿ ಚಾಲನೆ ಮಾಡಲಾಗುತ್ತಿದೆ ಎಂಬುದನ್ನು ಸ್ಪೀಡೋಮೀಟರ್ ನಲ್ಲಿ ಪರೀಕ್ಷಿಸುವುದು ಒಳ್ಳೆಯದು.

ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ

ಜೊತೆಗೆ ರಸ್ತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಕೆಲವೊಮ್ಮೆ ಜನರು ಕುಡಿದು ವಾಹನ ಚಾಲನೆ ಮಾಡುವಾಗ ಅತಿ ವೇಗದಲ್ಲಿ ಚಲಿಸುತ್ತಾರೆ. ಇದರಿಂದಲೂ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ.

Article Published On: Tuesday, January 5, 2021, 16:03 [IST]
English summary
Tamilnadu CM Edappadi Palaniswamy convoy vehicles met with an accident. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+