Just In
- 10 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 11 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 13 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 13 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದು ಮುಕ್ಕಾಲು ಗಂಟೆಯಲ್ಲಿ 190 ಕಿ.ಮೀ ಸಾಗಿದ ಆಂಬ್ಯುಲೆನ್ಸ್ ಚಾಲಕ
ಅಂಗಾಂಗಗಳನ್ನು ದಾನ ಮಾಡುವವರ ಸಂಖ್ಯೆಯು ಭಾರತದಲ್ಲಿ ಹೆಚ್ಚಾಗುತ್ತಿದೆ. ಈಗ ತಮಿಳುನಾಡಿನಲ್ಲಿ ನಡೆದಿರುವ ಘಟನೆಯೊಂದು ಅದನ್ನು ಮತ್ತೆ ಸಾಬೀತು ಪಡಿಸಿದೆ. ಅಪಘಾತದಲ್ಲಿ ಮೃತಪಟ್ಟ ಯುವತಿಯ ಲಿವರ್ ಅನ್ನು ಮತ್ತೊಬ್ಬ ವ್ಯಕ್ತಿಗೆ ಕಸಿ ಮಾಡಲಾಗಿದೆ.
ಆಂಬ್ಯುಲೆನ್ಸ್ ಚಾಲಕನು ವೇಗವಾಗಿ ಆಂಬ್ಯುಲೆನ್ಸ್ ಚಾಲನೆ ಮಾಡಿದ್ದರಿಂದ ಇದು ಸಾಧ್ಯವಾಗಿದೆ. ಭಾರತದಲ್ಲಿರುವ ಜನರು ಆಂಬ್ಯುಲೆನ್ಸ್ ಹಾಗೂ ಫೈರ್ ಟ್ರಕ್ನಂತಹ ತುರ್ತು ವಾಹನಗಳಿಗೆ ದಾರಿ ಕೊಡುವುದಿಲ್ಲ. ಹಲವು ಬಾರಿ ವಾಹನ ಸವಾರರು ಹಾಗೂ ಸಾರ್ವಜನಿಕರು ತುರ್ತು ವಾಹನಗಳಿಗೆ ಅಡ್ಡಿ ಪಡಿಸುತ್ತಾರೆ.
ಆದರೆ ಈ ಘಟನೆಯಲ್ಲಿ ಸಾರ್ವಜನಿಕರು ಸಹ ಬೆಂಬಲ ನೀಡಿದ್ದಾರೆ. ಇದರ ಜೊತೆಗೆ ಸಂಚಾರಿ ಪೊಲೀಸರೂ ಸಹ ಕೈಜೋಡಿಸಿದ್ದಾರೆ. ಸಂಚಾರಿ ಪೊಲೀಸರು ಸರಿಯಾದ ವ್ಯವಸ್ಥೆಯನ್ನು ಮಾಡಿದ್ದರಿಂದ ಆಂಬ್ಯುಲೆನ್ಸ್ ವೇಗವಾಗಿ ಚಲಿಸಿ ಲಿವರ್ ಅನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ.
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 25 ವರ್ಷ ವಯಸ್ಸಿನ ಯುವತಿಯನ್ನು ತಂಜಾವೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದರು. ಇದರ ಮಧ್ಯೆಯೂ ಆಕೆಯ ಪೋಷಕರು ಆಕೆಯ ಅಂಗಾಂಗಳನ್ನು ದಾನ ಮಾಡಲು ಮುಂದಾದರು.
ಮದುರೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿಗೆ ಲಿವರ್ ಕಸಿ ಮಾಡುವ ಅವಶ್ಯಕತೆ ಎದುರಾಗಿತ್ತು. ಇದಕ್ಕಾಗಿ ಮೃತ ಯುವತಿಯ ಲಿವರ್ ಅನ್ನು ರಸ್ತೆ ಮೂಲಕ ಆಂಬ್ಯುಲೆನ್ಸ್ ನಲ್ಲಿ ತಂಜಾವೂರಿನಿಂದ ಮಧುರೈಗೆ ಸಾಗಿಸಲಾಯಿತು.
ಇದಕ್ಕೆ ಸಹಕರಿಸಿದ ಟ್ರಾಫಿಕ್ ಪೊಲೀಸರು ಸಂಬಂಧಪಟ್ಟ ವ್ಯವಸ್ಥೆಗಳನ್ನು ಮಾಡಿದರು. ಇದರಿಂದಾಗಿ ಆಂಬ್ಯುಲೆನ್ಸ್ 1 ಗಂಟೆ 50 ನಿಮಿಷದಲ್ಲಿ 190 ಕಿ.ಮೀ ದೂರ ಚಲಿಸಿತು. ನಂತರ ಈ ಲಿವರ್ ಅನ್ನು ಯಶಸ್ವಿಯಾಗಿ ಕಸಿ ಮಾಡಲಾಯಿತು. ಈ ಆಂಬ್ಯುಲೆನ್ಸ್ ಅನ್ನು ಸುಬ್ರಹ್ಮಣ್ಯಂ ಎಂಬ ಡ್ರೈವರ್ ಚಾಲನೆ ಮಾಡಿದರು.
ಆಂಬ್ಯುಲೆನ್ಸ್ ಡ್ರೈವರ್ರವರ ಈ ಕಾರ್ಯವನ್ನು ಎಲ್ಲೆಡೆ ಶ್ಲಾಘಿಸಲಾಗುತ್ತಿದೆ. ಈ ಆಂಬ್ಯುಲೆನ್ಸ್ ಅನ್ನು ಪ್ರತಿ ಗಂಟೆಗೆ 140 ಕಿ.ಮೀ ವೇಗದಲ್ಲಿ ಚಾಲನೆ ಮಾಡಿದ್ದಾರೆ. ಇದರಿಂದಾಗಿ ಲಿವರ್ ಅನ್ನು ಯಶಸ್ವಿಯಾಗಿ ಕಸಿ ಮಾಡಲು ಸಾಧ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಸುಬ್ರಹ್ಮಣ್ಯಂರವರು ಜೀವವನ್ನು ಉಳಿಸುವ ಕಾರಣಕ್ಕೆ ನಾನು ಆಂಬ್ಯುಲೆನ್ಸ್ ಅನ್ನು ಎಚ್ಚರಿಕೆಯಿಂದ ಚಾಲನೆ ಮಾಡಿದೆ ಎಂದು ಹೇಳಿದ್ದಾರೆ. ಆಂಬ್ಯುಲೆನ್ಸ್ ವೇಗವಾಗಿ ಚಲಿಸುತ್ತಿರುವ ಕಾರಣವನ್ನು ಅರ್ಥ ಮಾಡಿಕೊಂಡ ಸಾರ್ವಜನಿಕರೂ ಸಹ ಈ ಕಾರ್ಯದಲ್ಲಿ ನೆರವಾಗಿದ್ದಾರೆ.
ಇತ್ತೀಚಿಗೆ ಕರ್ನಾಟಕದಲ್ಲಿಯೂ ಸಹ ಇಬ್ಬರು ಆಂಬ್ಯುಲೆನ್ಸ್ ಚಾಲಕರು ವೇಗವಾಗಿ ಆಂಬ್ಯುಲೆನ್ಸ್ ಚಾಲನೆ ಮಾಡಿ ಸರಿಯಾದ ಸಮಯಕ್ಕೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ನೆರವಾಗಿದ್ದರು. ಯಾರೇ ಆಗಲಿ ಆಂಬ್ಯುಲೆನ್ಸ್ ಗಳಿಗೆ ದಾರಿ ಮಾಡಿಕೊಟ್ಟರೆ ಇನ್ನೊಬ್ಬರ ಜೀವ ಉಳಿಯಲು ಅನುಕೂಲವಾಗಲಿದೆ.