Just In
- 59 min ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 1 hr ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- 1 hr ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 2 hrs ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ಆಟೋ, ಟ್ಯಾಕ್ಸಿ ಚಾಲಕರ ನೆರವಿಗೆ ಧಾವಿಸಿದ ಜಗನ್ ಸರ್ಕಾರ
ಆಂಧ್ರಪ್ರದೇಶ ಸರ್ಕಾರವು ಲಾಕ್ಡೌನ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಆಟೋ, ಟ್ಯಾಕ್ಸಿ ಚಾಲಕರ ನೆರವಿಗೆ ಧಾವಿಸಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಸರ್ಕಾರವು ಎಲ್ಲಾ ಆಟೋ, ಟ್ಯಾಕ್ಸಿ ಚಾಲಕರಿಗೆ ರೂ.10,000ಗಳ ನೆರವನ್ನು ನೀಡಲಿದೆ.
ರಾಜ್ಯ ಸರ್ಕಾರವು ತನ್ನ ಕಲ್ಯಾಣ ಯೋಜನೆಯಡಿ 2.62 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಈ ಧನಸಹಾಯವನ್ನು ನೀಡಲಿದೆ. ಜಿಲ್ಲಾಧಿಕಾರಿಗಳು ಹಾಗೂ ಫಲಾನುಭವಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿರವರು, ವೈಎಸ್ಆರ್ ವಾಹನ ಮಿತ್ರ ಯೋಜನೆಯಡಿ ಒಟ್ಟು ರೂ.262.49 ಕೋಟಿಗಳನ್ನು 2,62,493 ಫಲಾನುಭವಿಗಳಿಗೆ ವರ್ಗಾಯಿಸುವುದಾಗಿ ಘೋಷಿಸಿದ್ದಾರೆ.
ಈ ಹಣವನ್ನು ಫಲಾನುಭವಿಗಳು ಮದ್ಯಪಾನಕ್ಕಾಗಿ ಬಳಸದೇ ತಮ್ಮ ಹಾಗೂ ತಮ್ಮ ಕುಟುಂಬದವರ ಜೀವನ ನಿರ್ವಹಣೆಗಾಗಿ ಬಳಸಬೇಕೆಂದು ಮನವಿ ಮಾಡಿದರು. ಈ ಹಣವನ್ನು ಕುಡಿತಕ್ಕೆ ಬಳಸಿದರೆ, ಇದರಿಂದ ಪ್ರಯಾಣಿಕರು ಹಾಗೂ ಚಾಲಕರಿಗೂ ಸಮಸ್ಯೆಗಳಾಗಲಿದೆ ಎಂದು ಹೇಳಿದರು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ವಿಮಾ ಕಂತು ಪಾವತಿ, ಪರವಾನಗಿ ಶುಲ್ಕ ಹಾಗೂ ಇತರ ವೆಚ್ಚಗಳನ್ನು ಪಾವತಿಸಲು ನೆರವಾಗುವ ಉದ್ದೇಶದಿಂದ ವಾರ್ಷಿಕ ರೂ.10,000ಗಳನ್ನು ನೀಡುವ ವೈಎಸ್ಆರ್ ವಾಹನ್ ಮಿತ್ರ ಯೋಜನೆಯನ್ನು 2019ರ ಅಕ್ಟೋಬರ್ 4ರಂದು ಆರಂಭಿಸಲಾಯಿತು.
ಲಾಕ್ಡೌನ್ನಿಂದಾಗಿ ಕಳೆದ ಎರಡು ತಿಂಗಳುಗಳಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಯಾವುದೇ ಆದಾಯವಿಲ್ಲದ ಕಾರಣಕ್ಕೆ ವೈಎಸ್ಆರ್ ವಾಹನ್ ಮಿತ್ರ ಯೋಜನೆಯಡಿ ನಾಲ್ಕು ತಿಂಗಳ ಮುಂಗಡ ಭತ್ಯೆ ನೀಡಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಯೋಜನೆಗೆ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಲು ಜನರು ತಮ್ಮ ಗ್ರಾಮ ಅಥವಾ ವಾರ್ಡ್ಗಳ ಕಾರ್ಯದರ್ಶಿಯನ್ನು ಭೇಟಿಯಾಗುವಂತೆ ಜಗನ್ ಮೋಹನ್ ರೆಡ್ಡಿರವರು ಹೇಳಿದ್ದಾರೆ. ಧನ ಸಹಾಯ ಪಡೆಯಲು ಅರ್ಹತೆ ಹೊಂದಿ ಇನ್ನೂ ಯಾವುದೇ ಹಣವನ್ನು ಪಡೆಯದವರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪ್ಲಾಟ್ಫಾರಂ ಮೂಲಕವು ಅರ್ಹತಾ ಮಾನದಂಡಗಳನ್ನು ಪೂರೈಸಿದವರು ಪ್ರಯೋಜನಗಳನ್ನು ಪಡೆಯಬಹುದು ಎಂದು ಜಗನ್ ಮೋಹನ್ ರೆಡ್ಡಿರವರು ಹೇಳಿದರು. ಅರ್ಹರಾಗಿರುವ ಎಲ್ಲಾ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಜುಲೈ 4ರೊಳಗೆ ಈ ಹಣವನ್ನು ಪಾವತಿಸಲಾಗುವುದು.