Just In
- 5 min ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 45 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 48 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
Don't Miss!
- Movies 'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ಆಟೋ, ಟ್ಯಾಕ್ಸಿ ಚಾಲಕರ ನೆರವಿಗೆ ಧಾವಿಸಿದ ಜಗನ್ ಸರ್ಕಾರ
ಆಂಧ್ರಪ್ರದೇಶ ಸರ್ಕಾರವು ಲಾಕ್ಡೌನ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಆಟೋ, ಟ್ಯಾಕ್ಸಿ ಚಾಲಕರ ನೆರವಿಗೆ ಧಾವಿಸಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಸರ್ಕಾರವು ಎಲ್ಲಾ ಆಟೋ, ಟ್ಯಾಕ್ಸಿ ಚಾಲಕರಿಗೆ ರೂ.10,000ಗಳ ನೆರವನ್ನು ನೀಡಲಿದೆ.
ರಾಜ್ಯ ಸರ್ಕಾರವು ತನ್ನ ಕಲ್ಯಾಣ ಯೋಜನೆಯಡಿ 2.62 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಈ ಧನಸಹಾಯವನ್ನು ನೀಡಲಿದೆ. ಜಿಲ್ಲಾಧಿಕಾರಿಗಳು ಹಾಗೂ ಫಲಾನುಭವಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿರವರು, ವೈಎಸ್ಆರ್ ವಾಹನ ಮಿತ್ರ ಯೋಜನೆಯಡಿ ಒಟ್ಟು ರೂ.262.49 ಕೋಟಿಗಳನ್ನು 2,62,493 ಫಲಾನುಭವಿಗಳಿಗೆ ವರ್ಗಾಯಿಸುವುದಾಗಿ ಘೋಷಿಸಿದ್ದಾರೆ.
ಈ ಹಣವನ್ನು ಫಲಾನುಭವಿಗಳು ಮದ್ಯಪಾನಕ್ಕಾಗಿ ಬಳಸದೇ ತಮ್ಮ ಹಾಗೂ ತಮ್ಮ ಕುಟುಂಬದವರ ಜೀವನ ನಿರ್ವಹಣೆಗಾಗಿ ಬಳಸಬೇಕೆಂದು ಮನವಿ ಮಾಡಿದರು. ಈ ಹಣವನ್ನು ಕುಡಿತಕ್ಕೆ ಬಳಸಿದರೆ, ಇದರಿಂದ ಪ್ರಯಾಣಿಕರು ಹಾಗೂ ಚಾಲಕರಿಗೂ ಸಮಸ್ಯೆಗಳಾಗಲಿದೆ ಎಂದು ಹೇಳಿದರು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ವಿಮಾ ಕಂತು ಪಾವತಿ, ಪರವಾನಗಿ ಶುಲ್ಕ ಹಾಗೂ ಇತರ ವೆಚ್ಚಗಳನ್ನು ಪಾವತಿಸಲು ನೆರವಾಗುವ ಉದ್ದೇಶದಿಂದ ವಾರ್ಷಿಕ ರೂ.10,000ಗಳನ್ನು ನೀಡುವ ವೈಎಸ್ಆರ್ ವಾಹನ್ ಮಿತ್ರ ಯೋಜನೆಯನ್ನು 2019ರ ಅಕ್ಟೋಬರ್ 4ರಂದು ಆರಂಭಿಸಲಾಯಿತು.
ಲಾಕ್ಡೌನ್ನಿಂದಾಗಿ ಕಳೆದ ಎರಡು ತಿಂಗಳುಗಳಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಯಾವುದೇ ಆದಾಯವಿಲ್ಲದ ಕಾರಣಕ್ಕೆ ವೈಎಸ್ಆರ್ ವಾಹನ್ ಮಿತ್ರ ಯೋಜನೆಯಡಿ ನಾಲ್ಕು ತಿಂಗಳ ಮುಂಗಡ ಭತ್ಯೆ ನೀಡಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಯೋಜನೆಗೆ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಲು ಜನರು ತಮ್ಮ ಗ್ರಾಮ ಅಥವಾ ವಾರ್ಡ್ಗಳ ಕಾರ್ಯದರ್ಶಿಯನ್ನು ಭೇಟಿಯಾಗುವಂತೆ ಜಗನ್ ಮೋಹನ್ ರೆಡ್ಡಿರವರು ಹೇಳಿದ್ದಾರೆ. ಧನ ಸಹಾಯ ಪಡೆಯಲು ಅರ್ಹತೆ ಹೊಂದಿ ಇನ್ನೂ ಯಾವುದೇ ಹಣವನ್ನು ಪಡೆಯದವರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪ್ಲಾಟ್ಫಾರಂ ಮೂಲಕವು ಅರ್ಹತಾ ಮಾನದಂಡಗಳನ್ನು ಪೂರೈಸಿದವರು ಪ್ರಯೋಜನಗಳನ್ನು ಪಡೆಯಬಹುದು ಎಂದು ಜಗನ್ ಮೋಹನ್ ರೆಡ್ಡಿರವರು ಹೇಳಿದರು. ಅರ್ಹರಾಗಿರುವ ಎಲ್ಲಾ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಜುಲೈ 4ರೊಳಗೆ ಈ ಹಣವನ್ನು ಪಾವತಿಸಲಾಗುವುದು.