Just In
- 10 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 11 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 12 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 12 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್ : ಹಣ್ಣು ವ್ಯಾಪಾರಿಗಳಾದ ಕ್ಯಾಬ್ ಚಾಲಕರು
ಕರೋನಾ ವೈರಸ್ ನಿಂದಾಗಿ ಅನೇಕ ವ್ಯವಹಾರಗಳು ಸ್ಥಗಿತಗೊಂಡಿವೆ. ಈ ಕಾರಣಕ್ಕೆ ಜನರು ಜೀವನೋಪಾಯಕ್ಕಾಗಿ ಹೊಸ ವ್ಯವಹಾರ, ಉದ್ಯಮಗಳನ್ನು ಆರಂಭಿಸುತ್ತಿದ್ದಾರೆ. ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಕಾರಣಕ್ಕೆ ಸಾವಿರಾರು ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರು ನಿರುದ್ಯೋಗಿಗಳಾಗಿದ್ದಾರೆ.
ಆದಾಯದ ಮೂಲವೇ ಇಲ್ಲವಾಗಿರುವುದರಿಂದ ಕ್ಯಾಬ್ ಚಾಲಕರು ಸಂಪಾದನೆಗಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ತೆಲಂಗಾಣದ ರಾಜಧಾನಿ ಹೈದರಾಬಾದ್ನ ಕ್ಯಾಬ್ ಚಾಲಕರು ಇದೇ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹೈದರಾಬಾದ್ ನ ನೂರಾರು ಕ್ಯಾಬ್ ಚಾಲಕರು ಸಂಪಾದನೆಗಾಗಿ ಹಣ್ಣುಗಳು ಹಾಗೂ ಜ್ಯೂಸ್ ಮಾರಾಟವನ್ನು ಆರಂಭಿಸಿದ್ದಾರೆ. ತಮ್ಮ ಟ್ಯಾಕ್ಸಿಗಳಲ್ಲಿ ಜ್ಯೂಸ್ ತಯಾರಿಸುವ ಯಂತ್ರ ಹಾಗೂ ಸ್ಟಾಲ್ಗಳನ್ನು ಅಳವಡಿಸಿದ್ದಾರೆ. ಈ ಮೂಲಕ ಹೊಸ ಆದಾಯ ಮೂಲವನ್ನು ಕಂಡುಕೊಂಡಿದ್ದಾರೆ.
ಹೈದರಾಬಾದ್ ನ ಬಹುತೇಕ ಟ್ಯಾಕ್ಸಿ ಚಾಲಕರು ಬ್ಯಾಂಕ್ ಸಾಲದಲ್ಲಿ ಟ್ಯಾಕ್ಸಿ ಖರೀದಿಸಿದ್ದಾರೆ. ಯಾವುದೇ ಆದಾಯವಿಲ್ಲದೇ ಬಡ್ಡಿ ಮರುಪಾವತಿ ಸಾಧ್ಯವಾಗುವುದಿಲ್ಲ. ಆದಾಯವಿರಲಿ, ಇಲ್ಲದಿರಲಿ ಬಡ್ಡಿ ಮರುಪಾವತಿಸುವುದು ಅವರ ಜವಾಬ್ದಾರಿಯಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಇಟಿ ಆಟೋ ವರದಿಗಳ ಪ್ರಕಾರ, ಬಹುತೇಕಾ ಕ್ಯಾಬ್ ಚಾಲಕರ ಡ್ರೈವಿಂಗ್ ಲೈಸೆನ್ಸ್ ಅವಧಿ, ರಿಜಿಸ್ಟ್ರೇಷನ್ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಮಾನ್ಯತಾ ಅವಧಿ ಮುಗಿದಿದೆ.
ಫಿಟ್ನೆಸ್ ಸರ್ಟಿಫಿಕೇಟ್ ಮಾನ್ಯತಾ ಅವಧಿ ಮುಗಿದಿರುವ ಕಾರಣಕ್ಕೆ ಓಲಾ ಹಾಗೂ ಉಬರ್ ಕಂಪನಿಗಳು ತಮ್ಮ ಚಾಲಕರ ಐಡಿಗಳನ್ನು ಬ್ಲಾಕ್ ಮಾಡಿವೆ. ಇದರಿಂದ ಈ ಚಾಲಕರಿಗೆ ಬುಕ್ಕಿಂಗ್ ಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಓಲಾ ಹಾಗೂ ಉಬರ್ನಂತಹ ಕಂಪನಿಗಳು ಪರವಾನಗಿ ನವೀಕರಸದ ಕ್ಯಾಬ್ ಚಾಲಕರನ್ನು ನಿರ್ಬಂಧಿಸಿವೆ ಎಂದು ವರದಿಗಳಾಗಿವೆ. ಕೇಂದ್ರ ಸರ್ಕಾರವು ಮಾನ್ಯತಾ ಅವಧಿ ಮುಗಿದ ವಾಹನಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
ಆಂಧ್ರಪ್ರದೇಶ ಹಾಗೂ ದೆಹಲಿ ಸರ್ಕಾರಗಳೂ ಆಟೋ ಹಾಗೂ ಕ್ಯಾಬ್ ಚಾಲಕರಿಗೆ ಪರಿಹಾರವನ್ನು ಘೋಷಿಸಿವೆ. ಆಂಧ್ರಪ್ರದೇಶ ಸರ್ಕಾರದ ವಾಹನ್ ಮಿತ್ರ ಯೋಜನೆಯಡಿಯಲ್ಲಿ ಒಟ್ಟು ರೂ.262 ಕೋಟಿಗಳನ್ನು ಆಟೋ, ಟ್ಯಾಕ್ಸಿ ಚಾಲಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು. ಈ ಯೋಜನೆಯಿಂದಾಗಿ 2,62,493 ಚಾಲಕರಿಗೆ ಅನುಕೂಲವಾಗಲಿದೆ.