Just In
- 6 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 7 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 7 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 9 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್ : ಹಣ್ಣು ವ್ಯಾಪಾರಿಗಳಾದ ಕ್ಯಾಬ್ ಚಾಲಕರು
ಕರೋನಾ ವೈರಸ್ ನಿಂದಾಗಿ ಅನೇಕ ವ್ಯವಹಾರಗಳು ಸ್ಥಗಿತಗೊಂಡಿವೆ. ಈ ಕಾರಣಕ್ಕೆ ಜನರು ಜೀವನೋಪಾಯಕ್ಕಾಗಿ ಹೊಸ ವ್ಯವಹಾರ, ಉದ್ಯಮಗಳನ್ನು ಆರಂಭಿಸುತ್ತಿದ್ದಾರೆ. ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಕಾರಣಕ್ಕೆ ಸಾವಿರಾರು ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರು ನಿರುದ್ಯೋಗಿಗಳಾಗಿದ್ದಾರೆ.
ಆದಾಯದ ಮೂಲವೇ ಇಲ್ಲವಾಗಿರುವುದರಿಂದ ಕ್ಯಾಬ್ ಚಾಲಕರು ಸಂಪಾದನೆಗಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ತೆಲಂಗಾಣದ ರಾಜಧಾನಿ ಹೈದರಾಬಾದ್ನ ಕ್ಯಾಬ್ ಚಾಲಕರು ಇದೇ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹೈದರಾಬಾದ್ ನ ನೂರಾರು ಕ್ಯಾಬ್ ಚಾಲಕರು ಸಂಪಾದನೆಗಾಗಿ ಹಣ್ಣುಗಳು ಹಾಗೂ ಜ್ಯೂಸ್ ಮಾರಾಟವನ್ನು ಆರಂಭಿಸಿದ್ದಾರೆ. ತಮ್ಮ ಟ್ಯಾಕ್ಸಿಗಳಲ್ಲಿ ಜ್ಯೂಸ್ ತಯಾರಿಸುವ ಯಂತ್ರ ಹಾಗೂ ಸ್ಟಾಲ್ಗಳನ್ನು ಅಳವಡಿಸಿದ್ದಾರೆ. ಈ ಮೂಲಕ ಹೊಸ ಆದಾಯ ಮೂಲವನ್ನು ಕಂಡುಕೊಂಡಿದ್ದಾರೆ.
ಹೈದರಾಬಾದ್ ನ ಬಹುತೇಕ ಟ್ಯಾಕ್ಸಿ ಚಾಲಕರು ಬ್ಯಾಂಕ್ ಸಾಲದಲ್ಲಿ ಟ್ಯಾಕ್ಸಿ ಖರೀದಿಸಿದ್ದಾರೆ. ಯಾವುದೇ ಆದಾಯವಿಲ್ಲದೇ ಬಡ್ಡಿ ಮರುಪಾವತಿ ಸಾಧ್ಯವಾಗುವುದಿಲ್ಲ. ಆದಾಯವಿರಲಿ, ಇಲ್ಲದಿರಲಿ ಬಡ್ಡಿ ಮರುಪಾವತಿಸುವುದು ಅವರ ಜವಾಬ್ದಾರಿಯಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಇಟಿ ಆಟೋ ವರದಿಗಳ ಪ್ರಕಾರ, ಬಹುತೇಕಾ ಕ್ಯಾಬ್ ಚಾಲಕರ ಡ್ರೈವಿಂಗ್ ಲೈಸೆನ್ಸ್ ಅವಧಿ, ರಿಜಿಸ್ಟ್ರೇಷನ್ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಮಾನ್ಯತಾ ಅವಧಿ ಮುಗಿದಿದೆ.
ಫಿಟ್ನೆಸ್ ಸರ್ಟಿಫಿಕೇಟ್ ಮಾನ್ಯತಾ ಅವಧಿ ಮುಗಿದಿರುವ ಕಾರಣಕ್ಕೆ ಓಲಾ ಹಾಗೂ ಉಬರ್ ಕಂಪನಿಗಳು ತಮ್ಮ ಚಾಲಕರ ಐಡಿಗಳನ್ನು ಬ್ಲಾಕ್ ಮಾಡಿವೆ. ಇದರಿಂದ ಈ ಚಾಲಕರಿಗೆ ಬುಕ್ಕಿಂಗ್ ಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಓಲಾ ಹಾಗೂ ಉಬರ್ನಂತಹ ಕಂಪನಿಗಳು ಪರವಾನಗಿ ನವೀಕರಸದ ಕ್ಯಾಬ್ ಚಾಲಕರನ್ನು ನಿರ್ಬಂಧಿಸಿವೆ ಎಂದು ವರದಿಗಳಾಗಿವೆ. ಕೇಂದ್ರ ಸರ್ಕಾರವು ಮಾನ್ಯತಾ ಅವಧಿ ಮುಗಿದ ವಾಹನಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
ಆಂಧ್ರಪ್ರದೇಶ ಹಾಗೂ ದೆಹಲಿ ಸರ್ಕಾರಗಳೂ ಆಟೋ ಹಾಗೂ ಕ್ಯಾಬ್ ಚಾಲಕರಿಗೆ ಪರಿಹಾರವನ್ನು ಘೋಷಿಸಿವೆ. ಆಂಧ್ರಪ್ರದೇಶ ಸರ್ಕಾರದ ವಾಹನ್ ಮಿತ್ರ ಯೋಜನೆಯಡಿಯಲ್ಲಿ ಒಟ್ಟು ರೂ.262 ಕೋಟಿಗಳನ್ನು ಆಟೋ, ಟ್ಯಾಕ್ಸಿ ಚಾಲಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು. ಈ ಯೋಜನೆಯಿಂದಾಗಿ 2,62,493 ಚಾಲಕರಿಗೆ ಅನುಕೂಲವಾಗಲಿದೆ.